ಕರ್ನಾಟಕ ಸರಕಾರ ಕನ್ನಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ,ಉದ್ಯೋಗ ಮೀಸಲಾತಿ ನೀಡಬೇಕು

7ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ, ಕೇರಳ-ಕರ್ನಾಟಕ ಉತ್ಸವ

Team Udayavani, Jan 31, 2020, 7:10 AM IST

kerala-kannada-sahitya

ಕಾಸರಗೋಡು: ಕಾಸರಗೋಡಿ ನಂತಹ ಗಡಿನಾಡುಗಳಲ್ಲಿ ಎಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನು ಮೆಟ್ಟಿ ನಿಂತು ಕನ್ನಡ ಮಾಧ್ಯಮದಲ್ಲಿ ಕಲಿಯುತ್ತಿರುವ ಬಡ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಕರ್ನಾಟಕ ಸರಕಾರ ವಿದ್ಯಾರ್ಥಿ ವೇತನ, ಉದ್ಯೋಗ ಮೀಸಲಾತಿ ಮೊದಲಾದ ಸವಲತ್ತುಗಳನ್ನು ಒದಗಿಸಬೇಕೆಂದು ಹಿರಿಯ ಸಿನೆಮಾ ಪತ್ರಕರ್ತ ಗಣೇಶ್‌ ಕಾಸರಗೋಡು ಹೇಳಿದರು.

ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕಾಸರಗೋಡು ಇದರ ಆಶ್ರಯದಲ್ಲಿ ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ 7ನೇ ಕೇರಳ ರಾಜ್ಯ ಕನ್ನಡ ಸಮ್ಮೇಳನ ಮತ್ತು ಕೇರಳ-ಕರ್ನಾಟಕ ಉತ್ಸವದಲ್ಲಿ ಸರ್ವಾಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಡಿನಾಡಿನಲ್ಲಿ ಮನೆ ಮಾತಿನ ಭೇದ ವಿಲ್ಲದೆ ಎಲ್ಲ ಕನ್ನಡಿಗ ಜನ ಸಾಮಾನ್ಯರ, ಕನ್ನಡ ವಿದ್ಯಾರ್ಥಿಗಳ ಹಾಗೂ ಕನ್ನಡ ಕಲಿತ ಯುವ ಉದ್ಯೋಗಾರ್ಥಿಗಳ ಭಾಷಿಕ ಸಮಸ್ಯೆಗಳು ಇಂದು ಹಲವಾರಿವೆ. ಕನ್ನಡ ಮಾಧ್ಯಮ ಶಾಲೆಗಳ ಉಳಿವು ಕೂಡ ಮುಖ್ಯ ವಿಷಯವಾಗಿದೆ. ತಳಮಟ್ಟದ ಸಮಸ್ಯೆಗಳ ಪರಿಹಾರದ ಜತೆಗೆ ಸಾಹಿತ್ಯ, ಕಲೆ, ಸಾಂಸ್ಕೃತಿಕ ರಂಗಗಳಿಗೆ ಉತ್ತೇಜನ ಕೂಡ ನೀಡಬೇಕು. ಕಾಸರಗೋಡಿನ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕನ್ನಡ ಅರಿಯದ ಶಿಕ್ಷಕರ ನೇಮಕವನ್ನು ತಡೆಗಟ್ಟುವಂತೆ ಕೇರಳ ಸರಕಾರದ ಮೇಲೆ ಒತ್ತಡ ಹೇರಬೇಕು. ಕೇಂದ್ರ ಸರಕಾರ, ಕೇರಳ ಸರಕಾರ ಮತ್ತು ಕರ್ನಾಟಕ ಸರಕಾರಗಳ ಜತೆಗೆ ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹರಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾದರಿಯಲ್ಲಿ ಓರ್ವ ಅಧಿಕಾರಿ, ರಾಯಭಾರಿಯನ್ನು ಕಾಸರಗೋಡಿನಲ್ಲಿ ನೇಮಿಸಬೇಕೆಂದರು.

ತಡೆಗಟ್ಟಬೇಕು
ನಕಲಿ ಕನ್ನಡ ಬಲ್ಲ, ಗಡಿನಾಡ ಕನ್ನಡಿಗ ಪ್ರಮಾಣಪತ್ರಗಳನ್ನು ಬಳಸಿ ಕರ್ನಾಟಕದಲ್ಲಿ ಸವಲತ್ತುಗಳನ್ನು ಪಡೆಯುವುದನ್ನು ತಡೆ ಗಟ್ಟಬೇಕು, ಇದಕ್ಕಾಗಿ ಗಡಿನಾಡಿನಲ್ಲಿ ಶಾಲೆಗಳಲ್ಲಿ ಕನ್ನಡ ಮಾಧ್ಯಮದಲ್ಲಿ ಕಲಿತವರಿಗೆ ಅಥವಾ ಕನ್ನಡವನ್ನು ಒಂದು ವಿಷಯವನ್ನಾಗಿ ಕಲಿತವರಿಗೆ ಮಾತ್ರ ಉನ್ನತ ಶಿಕ್ಷಣದಲ್ಲಿ ಕನ್ನಡ ಬಲ್ಲ, ಗಡಿನಾಡು ಕನ್ನಡಿಗ ಸೀಟುಗಳನ್ನು ನೀಡಬೇಕು. ಅದೇ ರೀತಿ ಕರ್ನಾಟಕದ ಯಾವುದಾದರೂ ಸಂಸ್ಥೆಗಳಿಂದ ಭ್ರಷ್ಟಾಚಾರದ ಮೂಲಕ ನಕಲಿ ಕನ್ನಡ ಬಲ್ಲ ಪ್ರಮಾಣಪತ್ರ ಪಡೆಯುವವರನ್ನು ನಿಯಂತ್ರಿಸಬೇಕೆಂದರು.

ಕಾಸರಗೋಡಿನಲ್ಲಿ ಕೆಲವು ಸಭೆ, ಸಮ್ಮೇಳನಗಳಿಗೆ ಕರ್ನಾಟಕ ಸಂಸ್ಕೃತಿ ಇಲಾಖೆ, ಅಭಿವೃದ್ಧಿ ಪ್ರಾಧಿಕಾರ ಮೊದಲಾದ ಇಲಾಖೆಗಳಿಂದ ನೀಡುತ್ತಿರುವ ಪ್ರೋತ್ಸಾಹ ಸದುಪಯೋಗವಾಗುತ್ತಿದೆಯೇ ಎಂಬ ಬಗ್ಗೆ ನಿಗಾವಹಿಸಬೇಕೆಂದು ಅವರು ಹೇಳಿದರು.

ಶುದ್ಧವಾಗಿ ಹಾಗೂ ವ್ಯಾಕರಣ ಬದ್ಧವಾಗಿ ಮಾತನಾಡಿದರೆ ಕನ್ನಡ ಭಾಷೆ ಬೆಳೆಯುತ್ತದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಪ್ರಯತ್ನಿಸೋಣ. ಭಾಷಾ ಶುದ್ಧತೆಯನ್ನು ಯುವ ತಲೆಮಾರಿಗೆ ಕಲಿಸಿಕೊಡಬೇಕು ಎಂದ ಅವರು ತುಳು ಭಾಷೆಯನ್ನು 8ನೇ ಪರಿಚ್ಛೇದದಲ್ಲಿ ಸೇರ್ಪಡೆಗೆ ಕೇಂದ್ರ ಸರಕಾರಕ್ಕೆ ಒತ್ತಡ ಹಾಕಬೇಕಾಗಿದೆ ಎಂದರು. ಸಾಹಿತಿಗಳು ಇನ್ನೊಬ್ಬರ

ಸಾಮರಸ್ಯ ಬೇಕು
ಪ್ರತಿ ಭಾಷೆಗೂ ತನ್ನದೇ ಆದ ಅಸ್ಮಿತೆಯಿದೆ. ಯಾವ ಭಾಷೆಯೂ ಮೇಲಲ್ಲ. ಕೀಳಲ್ಲ. ಭಾಷೆಗಾಗಿ ಸಂಘರ್ಷ ಬೇಡ. ಸಾಮರಸ್ಯ ಬೇಕು. ಆಗ ಭಾಷೆ ಬೆಳೆಯುತ್ತದೆ. ಕನ್ನಡ ಭಾಷೆಯ ಮಹತ್ವವನ್ನು ಹೊಸ ತಲೆಮಾರಿಗೆ ಹಸ್ತಾಂತರಿಸುವ ಕೆಲಸ ನಡೆಯಬೇಕಾಗಿದೆ ಎಂದು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ.ಕತ್ತಲ್‌ಸಾರ್‌ ಅವರು ಹೇಳಿದರು.

ಕನ್ನಡ ಕಟ್ಟುವ
ಗಡಿನಾಡು ಕಾಸರಗೋಡು ಕೇರಳದಲ್ಲಿದ್ದರೂ ಒಗ್ಗಟ್ಟಿನಿಂದ ಕನ್ನಡ ಕಟ್ಟುವ ಕೆಲಸವನ್ನು ಮಾಡೋಣ. ಕೇರಳ ಸರಕಾರ ಕನ್ನಡ ಭಾಷೆ, ಸಂಸ್ಕೃತಿಗೆ ನಿರಂತರವಾಗಿ ಕೊಡಲಿಯೇಟು ನೀಡುತ್ತಿದ್ದರೂ ಕನ್ನಡಿಗರ ಹೋರಾಟದಿಂದ ಅವುಗಳನ್ನೆಲ್ಲವನ್ನು ಮೆಟ್ಟಿ ನಿಂತ ಇತಿಹಾಸ ನಮ್ಮದು. ಆದುದರಿಂದ ಕಾಸರಗೋಡಿನಲ್ಲಿ ಇನ್ನೂ ಕನ್ನಡ ಜೀವಂತ ಉಳಿಸಿಕೊಳ್ಳಲು ಎಲ್ಲ ಹೋರಾಟಗಳಿಗೆ ಸಿದ್ಧ.
– ರವೀಶ ತಂತ್ರಿ ಕುಂಟಾರು

ಟಾಪ್ ನ್ಯೂಸ್

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.