ಗಡಿನಾಡ ಕನ್ನಡಿಗರಿಗೆ ಸರಕಾರ ಸ್ಪಂದಿಸಲಿ: ಕೋಟ ಶ್ರೀನಿವಾಸ ಪೂಜಾರಿ

ಮಕ್ಕಳ ಜನಪದ ಮೇಳ, ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Team Udayavani, Jun 25, 2019, 5:17 AM IST

23BDK01

ಬದಿಯಡ್ಕ: ಕಾಸರ ಗೋಡಿನ ಕನ್ನಡಿಗರ ಮನಸ್ಸು ಭಾವನಾತ್ಮಕವಾಗಿ ಕನ್ನಡತನವನ್ನು ಉಳಿಸಿ ಕೊಂಡು ಕರ್ನಾಟಕದ ಜತೆ ಇದೆ. ಆದುದರಿಂದ ಕಾಸರಗೋಡಿನ ಕನ್ನಡಿಗರ ಕಷ್ಟನಷ್ಟಗಳಿಗೆ ಸರಕಾರ ರಕ್ಷಣೆ ಕೊಡಬೇಕು. ಬಹುಭಾಷೆ, ಬಹು ಸಂಸ್ಕೃತಿ, ಬಹು ಪ್ರಾಂತ್ಯ ವೈವಿಧ್ಯವನ್ನು ಏಕತೆಯನ್ನು ಸಾರುವ ಭೂಮಿಯಲ್ಲಿ ಯಾವುದೇ ಭಾಗದಲ್ಲಿದ್ದರೂ ನಮ್ಮೊಳಗಿನ ಭಾಷಾಪ್ರೇಮ ಜೀವಂತವಾಗಿರಬೇಕು. ಗಟ್ಟಿಯಾಗಿರಬೇಕು. ಹೋರಾಟದ ಹಾದಿ ಬೇರೆ ಬೇರೆ ರೀತಿಯಲ್ಲಿದ್ದರೂ ಸೂಕ್ತವಾದ ಮಾರ್ಗವನ್ನು ಆಯ್ಕೆ ಮಾಡುವಲ್ಲಿ ನಮ್ಮ ಜಾಣತನವಿದೆ. ಕಾಸರಗೋಡಿನ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಹಿರಿಯರು ತೋರಿದ ದಾರಿ, ಹಾಕಿ ಕೊಟ್ಟ ಬುನಾದಿಯನ್ನು ಯುವ ಪೀಳಿಗೆ ಅನುಸರಿಸಿ ಕನ್ನಡದ ರಕ್ಷಕರಾಗಬೇಕು ಎಂದು ಕರ್ನಾಟಕ ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಅಭಿಪ್ರಾಯಪಟ್ಟರು.

ಕರ್ನಾಟಕ ಜಾನಪದ ಪರಿಷತ್‌ ಕೇರಳ ಗಡಿನಾಡ ಘಟಕ ಹಾಗೂ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಸಂಯುಕ್ತಾಶ್ರಯದಲ್ಲಿ ಬದಿಯಡ್ಕದ ಗುರುಸದನದಲ್ಲಿ ನಡೆದ ಮಕ್ಕಳ ಜಾನಪದ ಮೇಳ ಹಾಗೂ ಕೇಳು ಮಾಸ್ಟರ್‌ ಸ್ಮರಣಾರ್ಥ ಕನ್ನಡ ಶಾಲೆಗಳಿಗೆ ಉಚಿತ ಪುಸ್ತಕ ವಿತರಣ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕಾಸರಗೋಡಿನ ಮಹಾನ್‌ ಯಕ್ಷಗಾನ ಕಲಾವಿದ ಶೇಣಿ ಗೋಪಾಲಕೃಷ್ಣ ಭಟ್ ಅವರ ಸ್ಪಷ್ಟ ಸರಳ ಸುಂದರ ಭಾಷೆಯ ಬಳಕೆ ಹಾಗೂ ತನ್ನ ಕನ್ನಡ ಮಾತಿನ ಮೋಡಿಯಲ್ಲಿ ಕರ್ನಾಟಕದ ಜನರ ಮನಗೆದ್ದ ಕುಂಬಳೆ ಸುಂದರ ರಾವ್‌ರವರಂತಹವರು ಜನಿಸಿ ನಾಡಿನಲ್ಲಿ ಕನ್ನಡ ಕಂಪನ್ನು ಎತ್ತಿಹಿಡಿದ ಕಯ್ನಾರರ ಭೂಮಿಯಲ್ಲಿ ಕನ್ನಡದ ಸಂತ, ಸರಳತೆಗೆ ಹೆಸರಾದ ಕೇಳು ಮಾಸ್ತರ್‌ ಅಗಲ್ಪಾಡಿಯವರ ಪುಸ್ತಕ ಪ್ರೀತಿಗೆ ನೀಡಿದ ಗೌರವ ಈ ಉಚಿತ ಪುಸ್ತಕ ವಿತರಣೆ ಎಂದು ಈ ಸಂದರ್ಭದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ| ವಸುಂಧರಾ ಭೂಪತಿ ಹೇಳಿ ಪುಸ್ತಕ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಅವರು ಕುಂಬಳೆ ಉಪಜಿಲ್ಲಾ ವಿದ್ಯಾಧಿಕಾರಿ ಯತೀಶ್‌ ಕುಮಾರ್‌ ರೈಯವರಿಗೆ ಪುಸ್ತಕಗಳನ್ನು ಹಸ್ತಾಂತರಿಸಿ ಮಾತನಾಡಿದರು.

ಕರ್ನಾಟಕ ವಿಧಾನ ಪರಿಷತ್ತು ಉಪಸಭಾಪತಿ ಎಸ್‌.ಎಲ್. ಧರ್ಮೇಗೌಡ ಇಲ್ಲಿ ನೆರೆದಿರುವ ಜನರೇ ಕಾಸರಗೋಡಿನಲ್ಲಿ ಕನ್ನಡಿಗರ ಭಾಷಾಪ್ರೇಮ ಎಷ್ಟು ಗಟ್ಟಿಯಾಗಿದೆ ಎಂಬುದಕ್ಕೆ ಸಾಕ್ಷಿ. ಅಚ್ಚಗನ್ನಡದ ಮಾತು ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆಗಳು ಅಪಾರ. ಆದರೆ ಸಮಸ್ಯೆಗಳು ಗಡಿಭಾಗದ ಜನರಿಗೆ ಸವಾಲಾಗಿ ಕಾಡುವುದು ಇಂದು ನಿನ್ನೆಯದಲ್ಲ. ಆದುದರಿಂದ ಕಾಸರಗೋಡಿನ ಕನ್ನಡಿಗರ ಸಮಸ್ಯೆಗಳನ್ನು ನಾವು ಮೂವರೂ ಒಟ್ಟಾಗಿ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಅವರು ಸೂಕ್ತ ಕ್ರಮ ಕೈಗೊಳ್ಳುವಂತೆ ಪ್ರಯತ್ನ ಮಾಡುತ್ತೇವೆ ಎಂದು ತನ್ನ ಅಧ್ಯಕ್ಷೀಯ ಭಾಷಣದಲ್ಲಿ ಭರವಸೆ ನೀಡಿದರು.

ಕ್ರೀಡಾ ಅಂಕಣಕಾರರಾದ ಜಗದೀಶ್ಚಂದ್ರ ಅಂಚನ್‌ ಸೂಟರ್‌ಪೇಟೆ ಅವರನ್ನು ಸಮ್ಮಾನಿಸಲಾಯಿತು.

ಬದಿಯಡ್ಕ ಪಂಚಾಯತ್‌ ಅಧ್ಯಕ್ಷ ಕೆ.ಎನ್‌. ಕೃಷ್ಣ ಭಟ್, ದಕ್ಷಿಣ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರದೀಪ್‌ ಕುಮಾರ್‌ ಕಲ್ಕೂರ, ಕರ್ನಾಟಕ ಜಾನಪದ ಪರಿಷತ್ತಿನ ಗಡಿನಾಡ ಘಟಕದ ಅಧ್ಯಕ್ಷ ಎ.ಆರ್‌. ಸುಬ್ಬಯ್ಯಕಟ್ಟೆ, ಪಟ್ಲ ಫೌಂಡೇಶನ್‌ನ ಜಗನ್ನಾಥ ಶೆಟ್ಟಿ, ಗ.ಸಾ.ಸಾ. ಅಕಾಡೆಮಿ ಅಧ್ಯಕ್ಷರಾದ ಪ್ರಭಾಕರ ಕಲ್ಲೂರಾಯ, ಸುಧಾಮ ಗೋಸಾಡ, ಬ್ಲೋಕ್‌ ಪಂಚಾಯತ್‌ ಸದಸ್ಯ ಅವಿನಾಶ್‌ ರೈ,ಝಡ್‌.ಎ. ಕಯ್ನಾರ್‌, ಕರ್ನಾಟಕ ಜಾನಪದ ಪರಿಷತ್ತು ಕುಶಲನಗರ ಘಟಕದ ಅಧ್ಯಕ್ಷ ಚಂದ್ರಮೋಹನ, ಪ್ರೊ| ಶ್ರೀನಾಥ್‌, ಶ್ರೀಕಾಂತ್‌ ನೆಟ್ಟಣಿಗೆ, ರವಿ ನಾಯ್ಕಪು, ಪುರುಷೋತ್ತಮ ಭಟ್ ಪೈವಳಿಕೆ, ಸಂಧ್ಯಾಗೀತಾ ಬಾಯಾರು, ರೇಶ್ಮಾ ನಾರಂಪಾಡಿ, ಜಯಲಕ್ಷ್ಮೀ ಮುಳ್ಳೇರಿಯ ಮುಂತಾದವರು ಉಪಸ್ಥಿತರಿದ್ದರು. ಪ್ರಸ್ತುತ ಕಾರ್ಯಕ್ರಮದಲ್ಲಿ ವೈದ್ಯಕೀಯ ವಿಭಾಗದಲ್ಲಿ ರ್‍ಯಾಂಕ್‌ ವಿಜೇತೆ ರಮ್ಯಾ ಭಟ್ ಹಾಗೂ ಪುಲ್ಲಾಂಜಿಯ ನಿರ್ದೇಶಕ ಹರೀಶ್‌ ಮಕ್ರೇರಿಯ, ನಿರ್ಮಾಪಕ ಮಹೇಶ್‌ ಕೋಯಿಪರಂಬತ್ತ್ ಹಾಗೂ ಬಾಲನಟ ವಿಜಯರನ್ನು ಅಭಿನಂಧಿಸಲಾಯಿತು.

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿಯ ಕಾರ್ಯದರ್ಶಿ ಸ್ವಾಗತಿಸಿ, ಝಡ್‌.ಎ. ಕಯ್ನಾರ್‌ ವಂದಿಸಿದರು, ಕರ್ನಾಟಕ ಜಾನಪದ ಪರಿಷತ್ತು ಕೇರಳ ಗಡಿನಾಡ ಘಟಕದ ಕಾರ್ಯದರ್ಶಿ ಪುರುಷೋತ್ತಮ ಭಟ್ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ನವಜೀವನ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ರವಿ ನಾಯ್ಕಪು ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ವೈದ್ಯಕೀಯ ವಿಭಾಗದಲ್ಲಿ ರ್‍ಯಾಂಕ್‌ ವಿಜೇತೆ ರಮ್ಯಾ ಭಟ್ ಹಾಗೂ ಪುಲ್ಲಾಂಜಿ ಕಿರು ಚಿತ್ರದ ಬಾಲನಟ ವಿಜಯ ಪೆರಡಾಲ ಅವರನ್ನು ಅಭಿನಂದಿಸಲಾಯಿತು. ಜಿಲ್ಲೆಯ 150ಕ್ಕಿಂತಲೂ ಮಿಕ್ಕಿದ ಕನ್ನಡ ಶಾಲೆಗಳು ಮತ್ತು 60ಕ್ಕಿಂತಲೂ ಮಿಕ್ಕಿದ ಗ್ರಂಥಾಲಯಗಳಿಗೆ ಉಚಿತ ಕನ್ನಡ ಪುಸ್ತಕಗಳನ್ನು ವಿತರಿಸಲಾಯಿತು.

ಕೇರಳ ಸರಕಾರದ ಚೈಲ್ಡ್ ಲೈನ್‌ಗೆ ಪುಸ್ತಕ
ನೊಂದ ಮಕ್ಕಳ ಬಾಲಿನ ಬೆಳಕಾಗಿರುವ ಕೇರಳ ಸರಕಾರದ ಚೈಲ್ಡ್ ಲೈನ್‌ಗೆ ಪುಸ್ತಕಗಳನ್ನು ನೀಡುವ ಮೂಲಕ ಮಕ್ಕಳಲ್ಲಿ ಓದುವ ಹವ್ಯಾಸವನ್ನು ಪ್ರೋತ್ಸಾಹಿಸುವ ಕಾರ್ಯಕ್ಕೆ ಅಕಾಡೆಮಿ ಮುಂದಾಗಿದೆ. ಕಾಸರಗೋಡು ಚೈಲ್ಡ್ ಲೈನ್‌ನ ಉದಯಕುಮಾರ್‌ ನೀರ್ಚಾಲ್ ವಸುಂಧರಾ ಭೂಪತಿಯವರಿಂದ ಪುಸ್ತಕಗಳನ್ನು ಸ್ವೀಕರಿಸಿದ್ದು ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಮಕ್ಕಳಿಗಾಗಿ ವಾಚನಾಲಯವನ್ನು ಪ್ರಾರಂಭಿಸಲು ಮುಂದಾಗಿದೆ. ಆ ಮೂಲಕ ಓದುವ ಹವ್ಯಾಸವನ್ನು ಹೆಚ್ಚಿಸಿ ಕನ್ನಡ ಸಾಹಿತ್ಯಗಳತ್ತ ಮಕ್ಕಳನ್ನು ಸೆಳೆಯುವ ಪ್ರಯತ್ನ ಇದಾಗಿದೆ.

ಪುಸ್ತಕ ಪ್ರೀತಿ ಬೆಳೆಯಲಿ

ಗಡಿನಾಡು ಕಾಸರಗೋಡಿನ ಕನ್ನಡ ಚಟುವಟಿಕೆಗಳು ಭಾಷೆಗೆ ಜೀವಂತಿಕೆ ನೀಡುತ್ತದೆ. ಕನ್ನಡಿಗರನ್ನು ಸದಾ ಜಾಗೃತರನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದೆ. ಪುಸ್ತಕಗಳು ಮನಸ್ಸಿನ ಅಂಧಕಾರ ನೀಗಿ ಹೊಸ ಬೆಳಕನ್ನು ನೀಡುವ ದೀವಿಗೆಗಳು. ಓದುವ ಆಸಕ್ತಿ ಹಾಗೂ ಪುಸ್ತಕ ಪ್ರೀತಿಯನ್ನು ಬೆಳೆಸುವ ಇಂತಹ ಕಾರ್ಯಕ್ರಮಗಳಿಗೆ ಪುಸ್ತಕ ಪ್ರಾಧಿಕಾರದ ಸಹಕಾರ ಎಂದೂ ಇದೆ.

-ಡಾ| ವಸುಂಧರಾ ಭೂಪತಿ

ಅಧ್ಯಕ್ಷೆ, ಕನ್ನಡ ಪುಸ್ತಕ ಪ್ರಾಧಿಕಾರ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.