ಶೃಂಗೇರಿ ಜಗದ್ಗುರುಗಳಿಗೆ ಭವ್ಯ ಸ್ವಾಗತ
Team Udayavani, Jun 29, 2017, 3:20 AM IST
ಕಾಸರಗೋಡು: ಅಣಂಗೂರು ಶಾರದಾ ನಗರದ ಶ್ರೀ ಶಾರದಾಂಬಾ ಭಜನಾ ಮಂದಿರದ ಶಾಶ್ವತ ಚಪ್ಪರವನ್ನು (ಮೇಲ್ಛಾವಣಿ) ದಕ್ಷಿಣಾಮ್ನಾಯ ಶ್ರೀ ಶೃಂಗೇರಿ ಶಾರದಾ ಪೀಠಾಧೀಶ್ವರ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳು ಹಾಗೂ ಕಿರಿಯ ಯತಿಗಳಾದ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಅವರು ಉದ್ಘಾಟಿಸಿದರು.
ಇದಕ್ಕೂ ಪೂರ್ವದಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಪರಿಸರದಿಂದ ವಾಹನ ಮೆರವಣಿಗೆ ಮೂಲಕ ನುಳ್ಳಿಪ್ಪಾಡಿ ಶ್ರೀ ಅಯ್ಯಪ್ಪ ಸ್ವಾಮೀ ಕ್ಷೇತ್ರಕ್ಕೆ ತಲುಪಿ ಅನಂತರ ವಾದ್ಯ ಘೋಷಗಳೊಂದಿಗೆ ಪೂರ್ಣಕುಂಭ ಸ್ವಾಗತ ನೀಡಿ ಅಣಂಗೂರು ಶ್ರೀ ಶಾರದಾಂಬಾ ಭಜನ ಮಂದಿರಕ್ಕೆ ಶ್ರೀಗಳನ್ನು ಬರಮಾಡಿಕೊಳ್ಳಲಾಯಿತು. ವೇ|ಮೂ| ಹಿರಣ್ಯ ವೆಂಕಟೇಶ್ ಭಟ್ ಅಭಿನಂದನ ಭಾಷಣ ಮಾಡಿದರು. ಬಳಿಕ ಉಭಯ ಶ್ರೀಗಳು ಆಶೀರ್ವಚನ ನೀಡಿದರು. ಜೂ. 29ರಂದು ಬೆಳಗ್ಗೆ ಚತುರ್ವೇದ ಪಾರಾಯಣ, ಶ್ರೀ ಉಭಯ ಯತಿಗಳ ಪಾದಪೂಜೆ, ಭಿಕ್ಷಾವಂದನೆ, ಆಶೀರ್ವಚನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್