“ರೈಲು ಮಾರ್ಗದ ಭರವಸೆ ಚುನಾವಣ ಗಿಮಿಕ್‌’


Team Udayavani, Apr 8, 2019, 6:30 AM IST

RAILU-MARGA

ಮಡಿಕೇರಿ: ಕೊಡಗಿಗೆ ರೈಲು – ಚತುಷ್ಪಥ ರಸ್ತೆ ಯೋಜನೆಯ ಹೇಳಿಕೆಗಳು ಕೇವಲ ಬಿಜೆಪಿಯ ಚುನಾವಣಾ ಗಿಮಿಕ್‌ ಹೊರತು ಬೇರೇನೂ ಅಲ್ಲವೆಂದು ಕಾಂಗ್ರೆಸ್‌ -ಜೆಡಿಎಸ್‌ ಮೈತ್ರಿ ಪಕ್ಷದ ಪ್ರಮುಖರು ಟೀಕಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್‌ ವಕ್ತಾರ ಟಿ.ಸುರೇಶ್‌ ಕೊಡಗಿಗೆ ರೈಲು ಸಂಪರ್ಕ ಕಲ್ಪಿಸುವುದಾಗಿ ಕಳೆದ 5 ವರ್ಷಗಳಿಂದ ಹೇಳುತ್ತಾ ಬಂದಿರುವ ಸಂಸದ ಪ್ರತಾಪ್‌ಸಿಂಹ ಅವರು ಇದೀಗ ಚುನಾವಣೆಯ ಸಮಯದಲ್ಲೂ ರೈಲು ಮಾರ್ಗದ ಬಗ್ಗೆ ಮಾತನಾಡುತ್ತಿದ್ದಾರೆ. ಮೈಸೂರು-ಮಡಿಕೇರಿ ಚತುಷ್ಪಥ ರಸ್ತೆಗೆ ಅನುದಾನ ಬಿಡುಗಡೆಯಗಿದ್ದು, ಚುನಾವಣೆಯ ಬಳಿಕ ಕಾಮಗಾರಿ ಆರಂಭಿಸುವುದಾಗಿ ಹೇಳುತ್ತಿದ್ದಾರೆ.

ಕಳೆದ 5 ವರ್ಷಗಳ ತಮ್ಮ ಅಧಿಕಾರ ವಧಿಯಲ್ಲಿ ಕೊಡಗಿಗೆ ಏನನ್ನೂ ಮಾಡದ ಸಂಸದ ಪ್ರತಾಪ್‌ಸಿಂಹ ಅವರು, ಕೊಡಗಿನ ಜನರ ಪ್ರತಿನಿಧಿಯಾಗಲು ಅರ್ಹರೇ ಎಂಬುದನ್ನು ಮತದಾರರೇ ತೀರ್ಮಾನ ಮಾಡಬೇಕಿದೆ ಎಂದು ಹೇಳಿದರು.

ಕಳೆದ ಅವಧಿಯಲ್ಲಿ ಕೊಡಗಿಗೆ ತಾನು ಏನೂ ಮಾಡಿಲ್ಲ. ಇಲ್ಲಿನ ಶಾಸಕರು ಎಲ್ಲವನ್ನೂ ಮಾಡಿದ್ದಾರೆ. ಇನ್ನೊಂದು ಬಾರಿ ಅವಕಾಶ ನೀಡಿ ಎಂದು ಸ್ವತಃ ಪ್ರತಾಪ್‌ಸಿಂಹ ಅವರೇ ತಮ್ಮ ಚುನಾವಣಾ ಪ್ರಚಾರ ಸಭೆಗಳಲ್ಲಿ ಹೇಳಿಕೊಳ್ಳುತ್ತಿದ್ದು, ಇಂತಹವರು ಕೊಡಗಿನ ಜನಪ್ರತಿನಿಧಿಯಾಗಿರುವುದು ಇಲ್ಲಿನವರ ದೌರ್ಭಾಗ್ಯ ಎಂದು ಟೀಕಿಸಿದರು.

ದೇಶದಲ್ಲಿ ಶಾಂತಿ ಸಾಮರಸ್ಯ ಉಳಿಯ ಬೇಕಾದರೆ ಬಿಜೆಪಿಗೆ ಅಧಿಕಾರ ನೀಡಬೇಕು ಎಂದು ಸಂಸದರು ಹೇಳಿದ್ದಾರೆ. ಆದರೆ ಹನುಮ ಜಯಂತಿ ಸಂದರ್ಭ ತಮ್ಮ ವಾಹನವನ್ನು ಪೊಲೀಸ್‌ ಬ್ಯಾರಿಕೇಡ್‌ಗೆ ಡಿಕ್ಕಿಪಡಿಸಿ ಕಾನೂನು ಭಂಗ ಮಾಡಿದ ಪ್ರತಾಪ್‌ಸಿಂಹ ಅವರಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಸಾಧ್ಯವೇ ಎಂದು ಸುರೇಶ್‌ ಪ್ರಶ್ನಿಸಿದರು. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಹಿಂದಿನಿಂದಲೂ ಮುಸ್ಲಿಂ, ಕ್ರೆçಸ್ತರು ಮತ್ತು ಬಹುಜನರ ಅಭಿವೃದ್ಧಿಯಲ್ಲಿ ತೊಡಗಿಸಿಕೊಂಡ ಪಕ್ಷಗಳಾಗಿವೆ ಎಂದು ಸುರೇಶ್‌ ಹೇಳಿದರು.

ಜೆಡಿಎಸ್‌ ರಾಜ್ಯ ಉಪಾಧ್ಯಕ್ಷ ಷರೀಫ್ ಮಾತನಾಡಿ, ಕಸ್ತೂರಿರಂಗನ್‌ ವರದಿಯನ್ನು ಜಾರಿ ಮಾಡಲು ಬಿಡುವುದಿಲ್ಲ ಎಂದು ಭರವಸೆ ನೀಡಿದ್ದ ಬಿಜೆಪಿಯವರು ಇದೀಗ ವರದಿ ಜಾರಿಗೆ ಮುಂದಾಗಿದ್ದು, ಕೊಡಗಿನ ತೋಟಗಾರಿಕಾ ಬೆಳೆಗಳ ನಾಶಕ್ಕೆ ಈ ವರದಿ ಕಾರಣವಾಗಲಿದೆ ಎಂದು ಅಭಿಪ್ರಾಯಪಟ್ಟರು. ಕೊಡಗಿಗೆ ರೈಲು ಮಾರ್ಗ ಕಲ್ಪಿಸುವುದಾಗಿ ಕಳೆದ 5 ವರ್ಷಗಳಿಂದ ರೈಲು ಬಿಟ್ಟ ಪ್ರತಾಪ್‌ಸಿಂಹ ಅವರು ಈಗಲೂ ಅದನ್ನೇ ಮಾಡುತ್ತಿದ್ದಾರೆ. ಗ್ರಾಮಗಳಿಗೆ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯಡಿ ರಸ್ತೆ ನಿರ್ಮಿಸುವುದಾಗಿ ಹೇಳಿದ್ದರೂ, ಇನ್ನೂ ಕಾರ್ಯರೂಪಕ್ಕೆ ಬಂದಿಲ್ಲ.

ಬೆಳೆಹಾನಿಗೆ ಪರಿಹಾರ ಕೊಡಿಸುವ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.

ಕಾಂಗ್ರೆಸ್‌ ಸಾಮಾಜಿಕ ಜಾಲತಾಣ ಘಟಕದ ಸಂಚಾಲಕ ಸೂರಜ್‌, ಜಿಲ್ಲಾ ಕಾಂಗ್ರೆಸ್‌ ಮಹಿಳಾ ಘಟಕದ ಅಧ್ಯಕ್ಷೆ ಸುರಯ್ಯ ಆಬ್ರಾರ್‌ ಉಪಸ್ಥಿತರಿದ್ದರು. ಹಳದಿ ರೋಗದಿಂದ ಸಂಕಷ್ಟಕ್ಕೆ ಈಡಾದ ರೈತರ ನೆರವಿಗೆ ಬರುವುದಾಗಿ ಘೋಸಿದ್ದ ಪ್ರತಾಪ್‌ಸಿಂಹ ತಮ್ಮ ಅಧಿಕಾರವಧಿಯಲ್ಲಿ ಒಮ್ಮೆಯೂ ಅಡಿಕೆ ಬೆಳೆಯುವ ಪ್ರದೇಶಕ್ಕೆ ಭೇಟಿ ನೀಡಿ ಬೆಳೆಗಾರರ ಸಂಕಷ್ಟವನ್ನು ಆಲಿಸಲಿಲ್ಲ. ಇದೀಗ ಚುನಾವಣೆ ಸಂದರ್ಭದಲ್ಲಿ ಮತ್ತೆ ಬಂದು ನಾಟಕವಾಡುತ್ತಿದ್ದಾರೆ ಎಂದು ದೂರಿದರು.

ಸರ್ಜಿಕಲ್‌ ಸ್ಟ್ರೈಕ್
ಜೆಡಿಎಸ್‌ ಜಿಲ್ಲಾ ವಕ್ತಾರ ಕುಸಮ್‌ ಕಾರ್ಯಪ್ಪ ಮಾತನಾಡಿ, ಭಾರತೀಯ ಯೋಧರು ಸರ್ಜಿಕಲ್‌ ಸ್ಟ್ರೈಕ್ ಮಾಡಿ ಪಾಕಿಸ್ಥಾನದ ಉಗ್ರರನ್ನು ಸದೆ ಬಡಿದಿದ್ದು, ಇದೀಗ ಬಿಜೆಪಿ ಅದನ್ನು ಚುನಾವಣೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿದರಲ್ಲದೆ, ಈ ಕ್ಷೇತ್ರದಲ್ಲಿ ಜೆಡಿಎಸ್‌-ಕಾಂಗ್ರೆಸ್‌ ಮೈತ್ರಿ ಅಭ್ಯರ್ಥಿ ಗೆಲುವು ನಿಶ್ಚಿತ ಎಂದು ಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.