‘ಕೊಡಗಿನ ಹರದಾಸ ಅಪ್ಪನೆರವಂಡ ಅಪ್ಪಚ್ಚ ಕವಿ ಓರ್ವ ದೈವಾಂಶ ಸಂಭೂತ’


Team Udayavani, Apr 9, 2018, 9:55 AM IST

APPACHA-KAVI-8-4.jpg

ಮಡಿಕೇರಿ: ಕೊಡಗಿನ ಹರದಾಸ ಅಪ್ಪನೆರವಂಡ ಅಪ್ಪಚ್ಚಕವಿ ಓರ್ವ ದೈವಾಂಶ ಸಂಭೂತ ಕವಿಯೇ ಆಗಿದ್ದು, ಇವರ ಸಾಹಿತ್ಯದಿಂದ ಅನೇಕರು ಪ್ರಭಾವಿತರಾಗಿದ್ದಾರೆ ಎಂದು ಹಿರಿಯ ಸಾಹಿತಿ ಬಾಚರಣಿಯಂಡ ಪಿ.ಅಪ್ಪಣ್ಣ ಅಭಿಪ್ರಾಯಪಟ್ಟಿದ್ದಾರೆ. ಅಖಿಲ ಕೊಡವ ಸಮಾಜ ಮತ್ತು ಮಡಿಕೇರಿ ಕೊಡವ ಸಮಾಜದ ಸಂಯುಕ್ತಾಶ್ರಯದಲ್ಲಿ ನಗರದ ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಹರದಾಸ ಅಪ್ಪನೆರವಂಡ ಅಪ್ಪ‌ಚ್ಚ ಕವಿಯ 150ನೇ ಜನ್ಮೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಪ್ಪಚ್ಚ ಕವಿ ಅವರು ನಲ್ವತ್ತೇಳು ವಿವಿಧ ರಾಗಗ‌ಳಿಗೆ ಅನುಗುಣವಾಗಿ ಪದ್ಯಗಳನ್ನು ರಚಿಸಿದ್ದಾರೆ, ಇಂತಹ ಒಂದು ಪ್ರಯತ್ನ ಮತ್ತೆಲ್ಲೂ ಕಂಡು ಬರುವುದಿಲ್ಲವೆಂದು ತಿಳಿಸಿದರು.

ಅಪ್ಪಚ್ಚ ಕವಿ ಅವರನ್ನು 1945ರಲ್ಲಿ ನಡೆದ ಒಂದು ಸಭೆಯಲ್ಲಿ ಕೋಟೇರ ಮುತ್ತಣ್ಣ ಎಂಬವರು ಷೇಕ್ಸ್‌ ಪಿಯರ್‌ನಿಗೆ ಹೋಲಿಸುತ್ತಾರೆ. ಅದೇ ಸಂದರ್ಭ ಸಭೆಯಲ್ಲಿದ್ದ ವ್ಯಕ್ತಿಯೊಬ್ಬರು ಉನ್ನತ ಶಿಕ್ಷಣ ಪಡೆಯದ ಅಪ್ಪಚ್ಚ ಕವಿಯನ್ನು ಷೇಕ್ಸ್‌ಪಿಯರ್‌ನಿಗೆ ಹೋಲಿಸುವುದು ಸರಿಯಲ್ಲವೆಂದು ತಿಳಿಸಿದ್ದರು. ಆದರೆ, ಅದೇ ವ್ಯಕ್ತಿ 1967ರಲ್ಲಿ ನಡೆದ ಅಪ್ಪಚ್ಚ ಕವಿಯ ಜನ್ಮ ಶತಮಾನೋತ್ಸವ ಸಂದರ್ಭ ತಾವು ಹಿಂದೆ ಕವಿಯ ಬಗ್ಗೆ ಮಾಡಿದ್ದ ಹೇಳಿಕೆಯ ಬಗ್ಗೆ ಕ್ಷಮೆ ಯಾಚಿಸಿದ್ದರೆಂದು ತಿಳಿಸಿದ ಬಾಚರಣಿಯಂಡ ಅಪ್ಪಣ್ಣ, ಹೀಗೆ ಸಾಕಷ್ಟು ಮಂದಿ ಅಪ್ಪಚ್ಚ ಕವಿಯ ಬಗ್ಗೆ ಮಾಹಿತಿ ಇಲ್ಲದೆ ಹೇಳಿಕೆ ನೀಡಿದ್ದಾರಾದರೂ, ಬಳಿಕ ಅವರ ಸಾಹಿತ್ಯದಿಂದ ಪ್ರಭಾವಿತರಾದುದನ್ನು ಉಲ್ಲೇಖೀಸಿದರು.

ಕನ್ನಡ ಸಾಹಿತ್ಯದ ಮೇರು ವ್ಯಕ್ತಿತ್ವದ ಅ.ನ. ಕೃಷ್ಣರಾಯರು ಈ ಹಿಂದೆ ಅಪ್ಪಚ್ಚ ಕವಿ ದುರಂತ ಕವಿಯೆನ್ನುವ ಮಾತುಗಳನ್ನು ಅಲ್ಲಗಳೆೆದು, ಅಪ್ಪಚ್ಚ ಕವಿ ಎಂದಿಗೂ ದುರಂತ ಕವಿಯಲ್ಲ. ಬದಲಾಗಿ, ಅವರ ಮೇರು ಸಾಹಿತ್ಯವನ್ನು ಸ್ಥಳೀಯರು ಓದಲಿಲ್ಲ, ಅವರಿಂದ ರಚಿತವಾದ ಹಾಡುಗಳನ್ನು ಹಾಡಲಿಲ್ಲ, ಕೇಳಲಿಲ್ಲವೆಂದು ವಿಷಾದ ವ್ಯಕ್ತಪಡಿಸಿದ್ದನ್ನು ಉಲ್ಲೇಖೀಸಿದ ಬಾಚರಣಿಯಂಡ ಅಪ್ಪಣ್ಣ, ಅಪ್ಪಚ್ಚ ಕವಿ ತಮ್ಮ ಮೇರು ಸ್ತರದ ಸಾಹಿತ್ಯ ರಚನೆಯ ಮೂಲಕ ಮಹಾನ್‌ ವ್ಯಕ್ತಿಯಾಗಿರುವುದಾಗಿ ತಿಳಿಸಿದರು. ಸಭಾಧ್ಯಕ್ಷತೆ ವಹಿಸಿದ್ದ ಮಡಿಕೇರಿ ಕೊಡವ ಸಮಾಜದ ಅಧ್ಯಕ್ಷರಾದ ಕೆ.ಎಸ್‌. ದೇವಯ್ಯ ಮಾತನಾಡಿ, ಕೊಡವ ಭಾಷೆಯ ಸಣ್ತೀವನ್ನು ನಮಗೆ ತಿಳಿಸಿದ, ಕಾವೇರಿಯನ್ನು ನಮ್ಮ ತಾಯಿಯೆಂದು, ಇಗ್ಗುತ್ತಪ್ಪನನ್ನು ತಮ್ಮ ತಂದೆಯೆಂದು ಸ್ಥಳೀಯರಿಗೆ ಮನವರಿಕೆ ಮಾಡಿಕೊಟ್ಟ ಮಹಾನ್‌ ಕವಿ ಹರದಾಸ ಅಪ್ಪಚ್ಚ ಕವಿಯಾಗಿದ್ದಾರೆ ಎಂದು ಶ್ಲಾಘಿಸಿದರು.


ನಾಟಕ ಪ್ರದರ್ಶನ

ನಗರದ ಜನರಲ್‌ ತಿಮ್ಮಯ್ಯ ಪಬ್ಲಿಕ್‌ ಸ್ಕೂಲ್‌ ವಿದ್ಯಾರ್ಥಿಗಳಿಂದ, ಮಾದೇಟಿರ ಪ್ರಮೀಳಾ ಜೀವನ್‌ ಅವರ ನಿರ್ದೇಶನದಲ್ಲಿ ಹರದಾಸ ಅಪ್ಪಚ್ಚ ಕವಿ ಅವರ ನಾಟಕದ ಆಯ್ದ ಒಂದು ಭಾಗದ ನಾಟಕ ಪ್ರದರ್ಶನ ನಡೆಯಿತು. ಇದರೊಂದಿಗೆ ಜಿಲ್ಲೆಯ ಖ್ಯಾತ ರಂಗಕರ್ಮಿ ಅಡ್ಡಂಡ ಕಾರ್ಯಪ್ಪ ಅವರಿಂದ ಕವಿ ಕಾವ್ಯ ನಿರೂಪಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಕೊಡವ ಸಮಾಜದ ಉಪಾಧ್ಯಕ್ಷ ಮಣವಟ್ಟಿàರ ಚಿಣ್ಣಪ್ಪ, ಕಾರ್ಯದರ್ಶಿ ಅರೆಯಡ ರಮೇಶ್‌, ನಿರ್ದೇಶಕರುಗಳಾದ ಪುಟ್ಟಿಚಂಡ ಡಾಲಿ ದೇವಯ್ಯ, ಕಾಳೆಯಂಡ ಮುತ್ತಪ್ಪ, ಪೊನ್ನಚೆಟ್ಟಿàರ ಸುಬ್ಬಯ್ಯ, ಚೊಟ್ಟೆಯಂಡಮಾಡ ಅಪ್ಪಾಜಿ, ನಂದೇಟಿರ ರಾಜಾ ಮಾದಪ್ಪ, ಉಳ್ಳಿಯಡ ಗಂಗಮ್ಮ, ಐಮುಡಿಯಂಡ ರಾಣಿ ಮಾಚಯ್ಯ, ತಾತಂಡ ಸರೋಜ, ಅಖೀಲ ಕೊಡವ ಸಮಾಜದ ಉಪಾಧ್ಯಕ್ಷ ಅಜ್ಜಿಕುಟ್ಟಿàರ ಸುಬ್ರಮಣಿ ಮಾದಯ್ಯ, ಅಖೀಲ ಕೊಡವ ಸಮಾಜದ ಜಂಟಿ ಕಾರ್ಯದರ್ಶಿ ರಾಜಾ ಮಾದಪ್ಪ ಉಪಸ್ಥಿತರಿದ್ದರು. ಅಖಿಲ ಕೊಡವ ಸಮಾಜದ ಅಧ್ಯಕ್ಷರಾದ ಮಾತಂಡ ಮೊಣ್ಣಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ, ಕೊಡವ ಸಮಾಜದ ನಿರ್ದೇಶಕರಾದ ಮಾದೇಟಿರ ಬೆಳ್ಯಪ್ಪ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.