ಕಾಡುಪೊದೆಗಳಿಂದ ಆವೃತ ರಾ. ಹೆದ್ದಾರಿ : ಅಪಾಯ ಭೀತಿ


Team Udayavani, Nov 14, 2018, 2:55 AM IST

highway-14-11.jpg

ಕಾಸರಗೋಡು: ಕಾಸರಗೋಡು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯು ಬಹುಭಾಗ ಕಾಡುಪೊದೆಗಳು ಬೆಳೆದು ಅರಣ್ಯ ದಾರಿಯಾಗಿ ಮಾರ್ಪಡುತ್ತಿದೆ. ಇದರಿಂದಾಗಿ ಭಾರೀ ಆತಂಕ ಹಾಗೂ ಅಪಾಯವೂ ಸೃಷ್ಟಿಯಾಗುತ್ತಿದೆ. ಆದರೆ ಇದ್ಯಾವುದೂ ಸಮಸ್ಯೆಯೇ ಅಲ್ಲ ಎಂಬ ರೀತಿಯಲ್ಲಿ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮೌನಕ್ಕೆ ಶರಣಾಗಿದ್ದಾರೆ. ಜಿಲ್ಲೆಯಲ್ಲಿ ಹೆಚ್ಚಿನ ಅಪಾಯ ಸಾಧ್ಯತೆಯಿರುವ ಚೆರ್ಕಳ – ಬೇವಿಂಜೆ ತಿರುವು, ತೆಕ್ಕಿಲ್‌ – ಚಟ್ಟಂಚಾಲ್‌ ತಿರುವು, ಚಾಲಿಂಗಾಲ್‌ – ಕೋಲೋತ್‌ ತಿರುವು ಅಲ್ಲದೆ ತಾಳಿಪಡ್ಪು, ಕುಂಬಳೆ ಸೇತುವೆ, ಶಿರಿಯ, ಮುಟ್ಟಂ, ಮಂಗಲ್ಪಾಡಿ ಪರಂಕಿಲ, ಕುಕ್ಕಾರು, ಮಂಜೇಶ್ವರ ಮುಂತಾದ ಕಡೆಗಳಲ್ಲಿ  ಹೆದ್ದಾರಿಯ ಎರಡೂ ಕಡೆಗಳಲ್ಲಿ  ಕಾಡುಪೊದೆಗಳು, ಗಿಡಬಳ್ಳಿಗಳು ತುಂಬಿಕೊಂಡಿವೆ. ಅಧಿಕ ತಿರುವುಗಳು, ಎತ್ತರ – ತಗ್ಗುಗಳು ಇರುವ ಈ ಪ್ರದೇಶಗಳಲ್ಲಿ  ವಾಹನ ಅಪಘಾತದ ಹಲವಾರು ಘಟನೆಗಳು ಕಣ್ಣ ಮುಂದೆ ಇದ್ದರೂ ಅಧಿಕಾರಿಗಳು ಮಾತ್ರ ದಿವ್ಯ ನಿರ್ಲಕ್ಷ್ಯ ವಹಿಸುತ್ತಿದ್ದಾರೆಂಬ ಆರೋಪ ಕೇಳಿಬರುತ್ತಿದೆ.

ಈ ಮಧ್ಯೆ ರಾಷ್ಟ್ರೀಯ ಹೆದ್ದಾರಿಯ ಮೂಲಕ ಪ್ರತಿದಿನ ಆರು ಸಾವಿರಕ್ಕೂ ಮಿಕ್ಕಿ ವಾಹನಗಳು ಹಾದು ಹೋಗುತ್ತಿವೆ. ಬೃಹತ್‌ ಕಂಟೈನರ್‌ ಲಾರಿಗಳು, ಸರಕುಗಳನ್ನು ತುಂಬಿಕೊಂಡ ವಾಹನಗಳು, ಬಸ್‌ಗಳು, ಕಾರುಗಳು ಸಹಿತ ಜನಸಾಮಾನ್ಯರು ಸಂಚರಿಸುವ ದ್ವಿಚಕ್ರ ವಾಹನಗಳು ಅಪಾಯ  ಭೀತಿಯೊಂದಿಗೆ ಹಾದು ಹೋಗುತ್ತಿವೆ. ತಿರುವುಗಳು, ಇಳಿಜಾರುಗಳು ಇರುವ ರಸ್ತೆಯಲ್ಲಿ ವಾಹನ ಚಲಾಯಿಸುವವರಿಗೆ ಮುಂಭಾಗದಿಂದ ಆಗಮಿಸುವ ವಾಹನಗಳು ಎರಡು ಮೀಟರ್‌ ಅಂತರದಲ್ಲಿ ಕೂಡ ಕಾಣಲಾಗದ ಸ್ಥಿತಿಯಲ್ಲಿ ಕಾಡುಪೊದೆಗಳು ಬೆಳೆದು ನಿಂತಿವೆ.
ಕೆಲವು ವರ್ಷಗಳಲ್ಲಿ ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ ಒಳಪಡಿಸಿ ಆಯಾ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳ ಕಾಡುಪೊದೆಗಳನ್ನು ಕಡಿದು ತೆಗೆಯಲಾಗಿತ್ತು. ಆದರೆ ಕಳೆದ ಎರಡು ವರ್ಷಗಳಿಂದ ಈ ಕೆಲಸವೂ ನಡೆಯಲಿಲ್ಲ. ಕಳೆದ ಎರಡು ವರ್ಷಗಳಿಂದಲೇ ಹೆದ್ದಾರಿ ಬದಿಯ ಪೊದೆ ಕಡಿಯದಿರುವುದರಿಂದ ಹೆದ್ದಾರಿ ಬದಿಯಲ್ಲಿ ಅಪಾಯದ ಭೀತಿ ಕಂಡುಬರುತ್ತಿದೆ.
ಈ ವರ್ಷ ಕೂಡ ಕಾಡುಗಳನ್ನು ಕಡಿಯಲು ಕ್ರಮ ಕೈಗೊಳ್ಳದಿರುವುದರಿಂದ ಮುಂಭಾಗದಿಂದ ಬರುವ ವಾಹನಗಳನ್ನು ಗಮನಿಸಲು ಸಾಧ್ಯವಾಗದ ರೀತಿಯಲ್ಲಿ ಗಿಡಬಳ್ಳಿಗಳು ಬೆಳೆದಿವೆ. ಹೆದ್ದಾರಿ ಇಕ್ಕೆಲಗಳಲ್ಲಿ ಸ್ಥಾಪಿಸಲಾದ ಅಪಾಯ ಸೂಚನಾ ಫಲಕಗಳು, ಸುರಕ್ಷಾ ಫಲಕಗಳು, ಎಚ್ಚರಿಕೆ ಫಲಕಗಳು ಮೊದಲಾದವುಗಳು ಕಾಡುಪೊದೆಗಳಿಂದ ಮುಚ್ಚಲ್ಪಟ್ಟಿವೆ. ಇದು ಅನ್ಯ ರಾಜ್ಯಗಳು ಮುಂತಾದೆಡೆಗಳಿಂದ ವಾಹನದೊಂದಿಗೆ ಬರುವವರನ್ನು ಅಪಾಯಕ್ಕೊಳಗಾಗುವಂತೆ ಮಾಡುತ್ತಿವೆ.

ಹೆದ್ದಾರಿ ಚತುಷ್ಪಥ ಕಾಮಗಾರಿ ವಿಳಂಬ 
ಇದೇ ವೇಳೆ ತಲಪಾಡಿ – ಕಾಲಿಕಡವು ರಾಷ್ಟ್ರೀಯ ಹೆದ್ದಾರಿಯನ್ನು ಚತುಷ್ಪಥಗೊಳಿಸಿ ಅಭಿವೃದ್ಧಿ ಮಾಡಲಿರುವ ಯೋಜನೆ ಕೂಡ ಒಂದಲ್ಲ ಒಂದು ನೆಪವೊಡ್ಡಿ ಮುಂದೂಡಲ್ಪಡುತ್ತಿದೆ. ಇತ್ತೀಚೆಗೆ ತೇಪೆ ಹಚ್ಚಿದರೂ ಒಂದೆಡೆ ಹೊಂಡಗುಂಡಿಗಳಿಂದ ಕೂಡಿರುವ ಹೆದ್ದಾರಿಯೂ ಸಂಚಾರಕ್ಕೆ ಅಯೋಗ್ಯವಾಗಿದ್ದು, ಇನ್ನೊಂದೆಡೆ ಕಾಡುಪೊದೆಗಳು ಪ್ರಯಾಣಕ್ಕೆ ಸಂಚಕಾರವಾಗುತ್ತಿದೆ.

ಪ್ರಯಾಣಿಕರ ಗೋಳು
ನಿತ್ಯ ಪ್ರಯಾಣಿಕರಿಗಂತೂ ಕಾಸರಗೋಡು ಜಿಲ್ಲೆಯ ಹೆದ್ದಾರಿ ಸಂಚಾರವು ತೀವ್ರ ಸಮಸ್ಯೆಯಾಗಿ ಕಾಡುತ್ತಿದೆ. ಕೂಡಲೇ ಕೇರಳ ಸರಕಾರವು ಇನ್ನಾದರೂ ಈ ಬಗ್ಗೆ ಗಮಹರಿಸಿ ಸೂಕ್ತ ವ್ಯವಸ್ಥೆ ಮಾಡಬೇಕೆಂದು ಒತ್ತಾಯಿಸಲಾಗಿದೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.