ನೀರಿನ ರಭಸಕ್ಕೆ ಗುಡ್ಡ ಕುಸಿತ : 2ನೇ ಮೊಣ್ಣಂಗೇರಿಯಲ್ಲಿ ಆತಂಕ; ಶಾಸಕರ ಭೇಟಿ


Team Udayavani, Jul 19, 2022, 6:52 PM IST

ನೀರಿನ ರಭಸಕ್ಕೆ ಗುಡ್ಡ ಕುಸಿತ : 2ನೇ ಮೊಣ್ಣಂಗೇರಿಯಲ್ಲಿ ಆತಂಕ; ಶಾಸಕರ ಭೇಟಿ

ಮಡಿಕೇರಿ: 2018 ರ ಮಹಾಮಳೆಯಲ್ಲಿ ಜಲಸ್ಫೋಟ ಸಂಭವಿಸಿದ್ದ ಮಡಿಕೇರಿ ತಾಲ್ಲೂಕಿನ ಎರಡನೇ ಮೊಣ್ಣಂಗೇರಿ ಗ್ರಾಮದಲ್ಲಿ ಮತ್ತೆ ಇದೇ ರೀತಿಯ ಘಟನೆ ನಡೆದಿದ್ದು, ನೀರಿನ ರಭಸಕ್ಕೆ ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.

ಈ ಭಾಗದ ನಿವಾಸಿಗಳ ಪ್ರಕಾರ ಮಳೆ ಕ್ಷೀಣಗೊಂಡಿದ್ದರೂ ರಾತ್ರಿ 7.30 ರ ಹೊತ್ತಿಗೆ ಜೋರಾದ ಶಬ್ಧ ಬಂದಿದೆ. ಹೊರಗೆ ಬಂದು ನೋಡಿದಾಗ ಗುಡ್ಡ ಕುಸಿದು ಪ್ರವಾಹದ ರೀತಿಯಲ್ಲಿ ಕೆಸರುಮಯ ನೀರು ಹರಿದು ಬಂದಿದೆ. ಮರಗಳು ಕೂಡ ಕೊಚ್ಚಿ ಬಂದಿದ್ದು, ಗ್ರಾಮದ ರಾಮಕೊಲ್ಲಿ ಸೇತುವೆ ಬಳಿ ನಿಂತಿದೆ. ಇದು ಜಲಸ್ಫೋಟವೆಂದು ವಿಶ್ಲೇಷಿಸುತ್ತಿರುವ ಗ್ರಾಮಸ್ಥರು ನಾವು ಮನೆಗಳನ್ನು ತೊರೆದು ಎಲ್ಲಿಗೆ ಹೋಗುವುದು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಶಾಸಕರುಗಳಾದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಈ ವೇಳೆ ಕೆ.ಜಿ.ಬೋಪಯ್ಯ ಮಾತನಾಡಿ. 2018 ರಲ್ಲಿ 2ನೇ ಮೊಣ್ಣಂಗೇರಿ ಹಾಗೂ ಕಾಟಕೇರಿ ಭಾಗದಲ್ಲಿ ಬರೆಜರಿತವಾಗಿತ್ತು. ಮತ್ತೆ ಈ ಬಾರಿಯು ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ರಾಮಕೊಲ್ಲಿ ಸೇತುವೆ ವಿಸ್ತಾರವಾದ ಸೇತುವೆಯಾಗಿದ್ದು, ಬರೆಜರಿತದಿಂದ ಸೇತುವೆಯ ಅರ್ಧ ಭಾಗ ಹಾನಿಯಾಗಿದೆ. ಬರೆಜರಿತಕ್ಕೆ ವೈಜ್ಞಾನಿಕವಾಗಿ ನಿಜವಾದ ಕಾರಣ ಪತ್ತೆ ಹಚ್ಚಬೇಕಾಗಿದೆ. ಈ ಭಾಗದ ಮನೆಗಳಿಗೆ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ. ಮುಂಜಾಗೃತ ಕ್ರಮವಾಗಿ ಇಲ್ಲಿನ ಜನರನ್ನು  ಸ್ಥಳಾಂತರಿಸಲಾಗಿದೆ ಎಂದರು.

ಕಾಟಕೇರಿಯ ಶಾಲೆಯಲ್ಲಿ ಕಾಳಜಿ ಕೇಂದ್ರವನ್ನು ಮಾಡಲು ಸೂಚಿಸಲಾಗಿದೆ. ಈ ಭಾಗದ ಜನರು ಕೂಲಿ ಕೆಲಸ ಮಾಡುವವರಾಗಿದ್ದು, ಅವರಿಗೆ ಪಂಚಾಯಿತಿ ವತಿಯಿಂದ ಅಗತ್ಯ ಸಹಕಾರ ನೀಡಬೇಕು ಎಂದು ಕೆ.ಜಿ.ಬೋಪಯ್ಯ ಹೇಳಿದರು.

ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ಮೊಣ್ಣಂಗೇರಿ ಗ್ರಾಮದಲ್ಲಿ ಹಲವು ಕುಟುಂಬಗಳು ವಾಸಿಸುತ್ತಿದ್ದಾರೆ. ಇಲ್ಲಿನ ಜನರಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಈ ಭಾಗದ ಜನರು ಒಪ್ಪಿಗೆ ನೀಡಿದ್ದಲ್ಲಿ, ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರ ಮಾಡಿಸಲಾಗುವುದು ಎಂದರು.

ನೀರಿನೊಂದಿಗೆ ಮರದ ದಿಮ್ಮಿಗಳು ಹರಿದು ಬಂದು ಸೇತುವೆಯ ಬಳಿ ನಿಂತಿದೆ. ಅದನ್ನು ಗ್ರಾ.ಪಂ. ವತಿಯಿಂದ ತೆರವು ಮಾಡಲು ಸೂಚಿಸಲಾಗುವುದು. ಅಪಾಯದಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಈಗಾಗಲೇ ಅವರವರ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.

ಪ್ರಮುಖರಾದ ಧನಂಜಯ ಅಗೋಳಿಕಜೆ, ಗ್ರಾ.ಪಂ ಸದಸ್ಯರಾದ ಪುಷ್ಪಾವತಿ, ಪಿಡಿಒ ಶಶಿಕಿರಣ ಇತರರು ಇದ್ದರು.

ಮೇಕೇರಿ-ತಾಳತ್ತಮನೆ ಮಾರ್ಗದಲ್ಲಿ ಬಿರುಕು ಬಿಟ್ಟಿರುವ ರಸ್ತೆಯನ್ನು ಕೂಡ ಶಾಸಕದ್ವಯರು ವೀಕ್ಷಿಸಿದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.