ನೀರಿನ ರಭಸಕ್ಕೆ ಗುಡ್ಡ ಕುಸಿತ : 2ನೇ ಮೊಣ್ಣಂಗೇರಿಯಲ್ಲಿ ಆತಂಕ; ಶಾಸಕರ ಭೇಟಿ
Team Udayavani, Jul 19, 2022, 6:52 PM IST
ಮಡಿಕೇರಿ: 2018 ರ ಮಹಾಮಳೆಯಲ್ಲಿ ಜಲಸ್ಫೋಟ ಸಂಭವಿಸಿದ್ದ ಮಡಿಕೇರಿ ತಾಲ್ಲೂಕಿನ ಎರಡನೇ ಮೊಣ್ಣಂಗೇರಿ ಗ್ರಾಮದಲ್ಲಿ ಮತ್ತೆ ಇದೇ ರೀತಿಯ ಘಟನೆ ನಡೆದಿದ್ದು, ನೀರಿನ ರಭಸಕ್ಕೆ ಗುಡ್ಡ ಕುಸಿದಿದೆ. ಸೋಮವಾರ ರಾತ್ರಿ ಈ ಘಟನೆ ನಡೆದಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
ಈ ಭಾಗದ ನಿವಾಸಿಗಳ ಪ್ರಕಾರ ಮಳೆ ಕ್ಷೀಣಗೊಂಡಿದ್ದರೂ ರಾತ್ರಿ 7.30 ರ ಹೊತ್ತಿಗೆ ಜೋರಾದ ಶಬ್ಧ ಬಂದಿದೆ. ಹೊರಗೆ ಬಂದು ನೋಡಿದಾಗ ಗುಡ್ಡ ಕುಸಿದು ಪ್ರವಾಹದ ರೀತಿಯಲ್ಲಿ ಕೆಸರುಮಯ ನೀರು ಹರಿದು ಬಂದಿದೆ. ಮರಗಳು ಕೂಡ ಕೊಚ್ಚಿ ಬಂದಿದ್ದು, ಗ್ರಾಮದ ರಾಮಕೊಲ್ಲಿ ಸೇತುವೆ ಬಳಿ ನಿಂತಿದೆ. ಇದು ಜಲಸ್ಫೋಟವೆಂದು ವಿಶ್ಲೇಷಿಸುತ್ತಿರುವ ಗ್ರಾಮಸ್ಥರು ನಾವು ಮನೆಗಳನ್ನು ತೊರೆದು ಎಲ್ಲಿಗೆ ಹೋಗುವುದು ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಶಾಸಕರುಗಳಾದ ಎಂ.ಪಿ.ಅಪ್ಪಚ್ಚು ರಂಜನ್ ಹಾಗೂ ಕೆ.ಜಿ.ಬೋಪಯ್ಯ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಈ ವೇಳೆ ಕೆ.ಜಿ.ಬೋಪಯ್ಯ ಮಾತನಾಡಿ. 2018 ರಲ್ಲಿ 2ನೇ ಮೊಣ್ಣಂಗೇರಿ ಹಾಗೂ ಕಾಟಕೇರಿ ಭಾಗದಲ್ಲಿ ಬರೆಜರಿತವಾಗಿತ್ತು. ಮತ್ತೆ ಈ ಬಾರಿಯು ಇದೇ ಪರಿಸ್ಥಿತಿ ನಿರ್ಮಾಣವಾಗಿದೆ. ರಾಮಕೊಲ್ಲಿ ಸೇತುವೆ ವಿಸ್ತಾರವಾದ ಸೇತುವೆಯಾಗಿದ್ದು, ಬರೆಜರಿತದಿಂದ ಸೇತುವೆಯ ಅರ್ಧ ಭಾಗ ಹಾನಿಯಾಗಿದೆ. ಬರೆಜರಿತಕ್ಕೆ ವೈಜ್ಞಾನಿಕವಾಗಿ ನಿಜವಾದ ಕಾರಣ ಪತ್ತೆ ಹಚ್ಚಬೇಕಾಗಿದೆ. ಈ ಭಾಗದ ಮನೆಗಳಿಗೆ ಯಾವುದೇ ರೀತಿಯ ಹಾನಿ ಸಂಭವಿಸಿಲ್ಲ. ಮುಂಜಾಗೃತ ಕ್ರಮವಾಗಿ ಇಲ್ಲಿನ ಜನರನ್ನು ಸ್ಥಳಾಂತರಿಸಲಾಗಿದೆ ಎಂದರು.
ಕಾಟಕೇರಿಯ ಶಾಲೆಯಲ್ಲಿ ಕಾಳಜಿ ಕೇಂದ್ರವನ್ನು ಮಾಡಲು ಸೂಚಿಸಲಾಗಿದೆ. ಈ ಭಾಗದ ಜನರು ಕೂಲಿ ಕೆಲಸ ಮಾಡುವವರಾಗಿದ್ದು, ಅವರಿಗೆ ಪಂಚಾಯಿತಿ ವತಿಯಿಂದ ಅಗತ್ಯ ಸಹಕಾರ ನೀಡಬೇಕು ಎಂದು ಕೆ.ಜಿ.ಬೋಪಯ್ಯ ಹೇಳಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಮಾತನಾಡಿ, ಮೊಣ್ಣಂಗೇರಿ ಗ್ರಾಮದಲ್ಲಿ ಹಲವು ಕುಟುಂಬಗಳು ವಾಸಿಸುತ್ತಿದ್ದಾರೆ. ಇಲ್ಲಿನ ಜನರಿಗೆ ಸೂಕ್ತ ವ್ಯವಸ್ಥೆ ಮಾಡಲಾಗುವುದು. ಈ ಭಾಗದ ಜನರು ಒಪ್ಪಿಗೆ ನೀಡಿದ್ದಲ್ಲಿ, ಮುಂದಿನ ದಿನಗಳಲ್ಲಿ ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರ ಮಾಡಿಸಲಾಗುವುದು ಎಂದರು.
ನೀರಿನೊಂದಿಗೆ ಮರದ ದಿಮ್ಮಿಗಳು ಹರಿದು ಬಂದು ಸೇತುವೆಯ ಬಳಿ ನಿಂತಿದೆ. ಅದನ್ನು ಗ್ರಾ.ಪಂ. ವತಿಯಿಂದ ತೆರವು ಮಾಡಲು ಸೂಚಿಸಲಾಗುವುದು. ಅಪಾಯದಲ್ಲಿ ವಾಸಿಸುತ್ತಿರುವ ಕುಟುಂಬಗಳನ್ನು ಈಗಾಗಲೇ ಅವರವರ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.
ಪ್ರಮುಖರಾದ ಧನಂಜಯ ಅಗೋಳಿಕಜೆ, ಗ್ರಾ.ಪಂ ಸದಸ್ಯರಾದ ಪುಷ್ಪಾವತಿ, ಪಿಡಿಒ ಶಶಿಕಿರಣ ಇತರರು ಇದ್ದರು.
ಮೇಕೇರಿ-ತಾಳತ್ತಮನೆ ಮಾರ್ಗದಲ್ಲಿ ಬಿರುಕು ಬಿಟ್ಟಿರುವ ರಸ್ತೆಯನ್ನು ಕೂಡ ಶಾಸಕದ್ವಯರು ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ