“ಸ್ವಸ್ಥ ಸಮಾಜ ನಿರ್ಮಾಣಕ್ಕಾಗಿ ರಂಗಭೂಮಿ ಬಳಸಿದ ಹಿರಣ್ಣಯ್ಯ’


Team Udayavani, May 8, 2019, 6:10 AM IST

swstya-samaja

ಕಾಸರಗೋಡು: ಸಾಮಾಜಿಕ ಪಿಡುಗುಗಳ ವಿರುದ್ಧ ಹಾಗೂ ಆಡಳಿತ ವ್ಯವಸ್ಥೆಗಳ ಸೋಗಲಾಡಿತನವನ್ನು ಬಯಲಿ ಗೆಳೆದು ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಾಸ್ತರ್‌ ಹಿರಣ್ಣಯ್ಯ ಅವರ ರಂಗಭೂಮಿ ದುಡಿಮೆ ನ ಭೂತೋ ನ ಭವಿಷ್ಯತಿ ಎನ್ನುವಂತಿದೆ. ಆಡಳಿತ ಪಕ್ಷಗಳು ತಪ್ಪಿ ನಡೆದಾಗ ಎಚ್ಚರಿಸುವ ವಿರೋಧ ಪಕ್ಷದಂತೆ ಸದಾ ಕಾಲ ಸಾಮಾಜಿಕ ಜಾಗೃತಿಗಾಗಿ ಹಿರಣ್ಣಯ್ಯ ಅವರು ತಮ್ಮ ನಾಟಕಗಳ ಮೂಲಕ ಹೊಸ ಮನ್ವಂತರವನ್ನು ಬರೆದಿದ್ದಾರೆ ಎಂದು ಕಾಸರಗೋಡಿನ ಹಿರಿಯ ರಂಗಕರ್ಮಿ ಸುಬ್ಬಣ್ಣ ಶೆಟ್ಟಿ ಅಭಿಪ್ರಾಯಪಟ್ಟಿದ್ದಾರೆ.

ಅಪೂರ್ವ ಕಲಾವಿದರು ಇದರ ವತಿಯಿಂದ ಪಾರೆಕಟ್ಟೆ ರಂಗ ಕುಟೀರದಲ್ಲಿ ನಡೆದ ಮಾಸ್ಟರ್‌ ಹಿರಣ್ಣಯ್ಯ ಸಂಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಹಿರಣ್ಣಯ್ಯ ಅವರು ಸುದಿಧೀರ್ಘ‌ ಕಾಲ ನಾಟಕ ಹಾಗೂ ಸಿನೆಮಾ ರಂಗಗಳಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಅವರ ಪ್ರತಿಭೆ, ದಕ್ಷತೆ, ಕಲಾಪ್ರೇಮ ಹಾಗೂ ಸರಳ ಸಜ್ಜನಿಕೆ ಕನ್ನಡ ರಂಗಭೂಮಿಯನ್ನು ಬೆಳೆಸಿದೆ. ಹಿರಣ್ಣಯ್ಯ ಅವರು ಕಾಸರಗೋಡಿನವರ ಬಗ್ಗೆ ವಿಶೇಷ ಪ್ರೀತಿ ಉಳ್ಳವರಾಗಿದ್ದು, ಎಪ್ಪತ್ತರ ದಶಕದಲ್ಲಿ ಕಾಸರಗೋಡಿಗೆ ಬಂದು ಬಣ್ಣ ಹಚ್ಚಿದ್ದಾರೆ ಎಂದು ಅವರು ನುಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕನ್ನಡ ಸಾಹಿತ್ಯ ಪರಿಷತ್ತು ಮಡಿಕೇರಿ ಜಿಲ್ಲಾ ಘಟಕದ ಅಧ್ಯಕ್ಷ ಲೋಕೇಶ್‌ ಸಾಗರ್‌ ಮಾತನಾಡಿ ಹಿರಣ್ಣಯ್ಯ ಅವರಂತಹ ಪ್ರಾಮಾಣಿಕ ಹಾಗೂ ಬದ್ಧತೆಯಿರುವ ಕಲಾವಿದರನ್ನು ಇನ್ನು ಕಾಣಲು ಅಸಾಧ್ಯ. ತನ್ನ ಜೀವಿತಾವ ಧಿಯಲ್ಲಿ ಸುಮಾರು ಹತ್ತು ಸಾವಿರಕ್ಕಿಂತಲೂ ಮಿಕ್ಕಿ ನಾಟಕಗಳಲ್ಲಿ ಅಭಿನಯಿಸಿರುವ ಅವರ ಸಾಧನೆ ಬಹಳ ದೊಡ್ಡದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅಪೂರ್ವ ಕಲಾವಿದರು ಅಧ್ಯಕ್ಷ, ಕೇರಳ ತುಳು ಅಕಾಡೆಮಿಯ ಅಧ್ಯಕ್ಷರಾದ ಉಮೇಶ್‌ ಸಾಲಿಯಾನ್‌ ದಶಕಗಳ ಮೊದಲು ನೆರೆಸಂತ್ರಸ್ತರ ಕಣ್ಣೀರೊರೆಸಲು ಬೆಂಗಳೂರಿಗೆ ಮಳೆನಿಂತ ನಾಟಕ ತಂಡ ಹೋದಾಗ ಹಿರಣ್ಣಯ್ಯ ಅವರು ನೀಡಿದ ಪ್ರೋತ್ಸಾಹ ಹಾಗೂ ಬೆಂಬಲವನ್ನು ನೆನಪಿಸಿಕೊಂಡರು.

ಪತ್ರಕರ್ತ, ಕಲಾವಿದ ವಿ.ಜಿ. ಕಾಸರಗೋಡು ಮಾತನಾಡಿ ಹಿರಣ್ಣಯ್ಯನವರು ಸಾಮಾಜಿಕ ತಿದ್ದುಪಡಿಗಾಗಿ ವೇದಿಕೆಯನ್ನು ಆಯುಧ ವಾಗಿಸಿದವರು. ವಿಡಂಬನಾತ್ಮಕ ನಾಟಕವೇ ಮಾಸ್ಟರ್‌ ಅವರ ಹೆಗ್ಗಳಿಕೆಯಾಗಿತ್ತು. ಅವರು ತೋರಿದ ದಾರಿ ಕನ್ನಡ ರಂಗಭೂಮಿಗೆ ಸಿಕ್ಕ ಬಹುದೊಡ್ಡ ಕೊಡುಗೆ ಎಂದರು.
ಬಿ. ಬಾಲಕೃಷ್ಣ ಅಗ್ಗಿತ್ತಾಯ ಮಧೂರು, ವಾಸು ಬಾಯಾರು, ಭಾರತೀಬಾಬು, ಅಶೋಕ್‌ ಕೊಡ್ಲಮೊಗರು, ಉದಯ ಸಾರಂಗ್‌, ಶಶಿಧರ್‌ ಎದ್ರುತ್ತೋಡು, ಸುರೇಶ್‌ ಕೆ, ಕಿರಣ್‌ ಕಲಾಂಜಲಿ ಈ ಮುಂತಾದ ವರು ಮಾತನಾಡಿದರು.
ಡಾ| ರತ್ನಾಕರ ಮಲ್ಲಮೂಲೆ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉದಯ ಸಾರಂಗ್‌ ವಂದಿಸಿದರು.

ಟಾಪ್ ನ್ಯೂಸ್

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

Bellary; ಸಚಿವ ನಾಗೇಂದ್ರ ವಿರುದ್ಧ ಭುಗಿಲೆದ್ದ ಆಕ್ರೋಶ; ಬಳ್ಳಾರಿಯಲ್ಲಿ ಪ್ರತಿಭಟನೆ

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

MLC Election ಪ್ರಚಾರ ಪತ್ರದಲ್ಲಿ ಬಿಜೆಪಿಯ ಉದಯ ಕುಮಾರ್ ಶೆಟ್ಟಿ: ಕಾಂಗ್ರೆಸ್ ಎಡವಟ್ಟು

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Desi Swara: ಚೈತ್ರದ ಚುಮುಚುಮು ಚಳಿಯ ಸುಂದರಿ “ಡ್ಯಾಂಡೆಲೈನ್‌’

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ

Desi Swara: ಸೆಲ್ಫಿಗಳ ಹಿಂದಿನ ಮಾನಸಿಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

9-kodachadri

Kodachadri: ಮಳೆಯಲಿ ಕೊಡಚಾದ್ರಿ ಮಡಿಲಲಿ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

Desi Swara: ವಾಸವಿ ಕ್ಲಬ್‌ ಮೆರ್ಲಿಯನ್‌ ಸಿಂಗಾಪುರ- ವಾಸವಿ ಜಯಂತಿ ಪೂಜೆ ಸಂಪನ್ನ

8-ipl

IPL: ಸನ್‌ ರೈಸರ್ಸ್‌ ಆದ ಡೆಕ್ಕನ್‌ ಚಾರ್ಜಸ್‌

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

Mangaluru; ಲವ್‌ ಜಿಹಾದ್‌ ತಡೆಯಲು ಶ್ರೀರಾಮ ಸೇನೆಯಿಂದ ಸಹಾಯವಾಣಿ ಆರಂಭ

11

ಗಣೇಶ ದೇವಸ್ಥಾನ ನಿರ್ಮಿಸಲು ಹಿಂದೂಗಳಿಗೆ ಭೂಮಿಯನ್ನು ದಾನವನ್ನಾಗಿ ನೀಡಿದ ಮುಸ್ಲಿಂ ಜಮಾತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.