ಸೋರುವ ಮನೆಯಲ್ಲಿ ಉಪನ್ಯಾಸಕಿ ಆಗುವ ಕನಸು ಕಾಣುತ್ತಿರುವ ಸವಿತಾ


Team Udayavani, Jun 28, 2018, 3:50 AM IST

kalike-27-6.jpg

ಕಾಸರಗೋಡು: ಈಗಲೋ ಆಗಲೋ ಕುಸಿವ ಭೀತಿಯಲ್ಲಿರುವ ಮನೆ. ಆದರೆ ಅದರೊಳಗೇ ಕೂತು ಇಲ್ಲೊಬ್ಬಳು ಪ್ರತಿಭಾವಂತ ವಿದ್ಯಾರ್ಥಿನಿ ಉಪನ್ಯಾಸಕಿಯಾಗುವ ಕನಸು ಕಾಣುತ್ತಿದ್ದಾಳೆ. ಆಕೆಯ ಮನೆಯ ಪರಿಸ್ಥಿತಿ ಉನ್ನತ ಕನಸಿಗೆ ಅಡ್ಡಿಯಾಗಿದೆ.

ಪ್ರತಿಭೆಗೆ ತಡೆ
ಕಾಸರಗೋಡು ತಾಲೂಕಿನ ಚೆರ್ಕಳ ಪಂಚಾಯತ್‌ ನ ಪಾಡಿಯ ಮಹಾಬಲ ರೈ ಹಾಗೂ ಸುಮಿತ್ರ ದಂಪತಿಯ ಪುತ್ರಿ ಸವಿತಾ ಕನ್ನಡ ಬಿಎ ಪದವೀಧರೆಯಾಗಿದ್ದು ಕಣ್ಣೂರು ವಿ.ವಿ. ಮಟ್ಟದಲ್ಲಿ ತೃತೀಯ ಸ್ಥಾನಿಯಾಗಿ ಹೊರಹೊಮ್ಮಿದಾಕೆ. ತಂದೆ ಕೃಷಿ ಕಾರ್ಯ ಮಾಡಿದರೆ, ತಾಯಿ ಬೀಡಿ ಕಟ್ಟಿ ಮಾಡುವ ಸಂಪಾದನೆಯೇ ಇವರಿಗೆ ಆಶ್ರಯ. ಓದಿನಲ್ಲಿ ಉತ್ತಮ ಸಾಧನೆ ಮಾಡಿದ ಸವಿತಾಗೆ ಉಪನ್ಯಾಸಕಿ  ಆಗುವ   ಮಹದಾಸೆ ಇದೆ. ಆದರೆ ಅದು ಈಡೇರುತ್ತಿಲ್ಲ! 

ಗೋಡೆ ಜರಿದು ಬಿದ್ದ ಮನೆ

ಸವಿತಾಮತ್ತು ಹೆತ್ತವರು ಇರುವುದು 30 ವರ್ಷ ಹಳೆಯ ಮಣ್ಣಿನ ಮನೆಯಲ್ಲಿ. ಧಾರಾಕಾರ ಮಳೆಗೆ ಆ ಮನೆಯ ಗೋಡೆಯೆಲ್ಲ  ಕರಗಿ ಜರಿದು ಬಿದ್ದಿದೆ. ಗೋಡೆಯ ಮೇಲೆ ಸೋಗೆ ಹಾಸಲಾಗಿದ್ದು, ಅದರ ಮೇಲಿಂದ ಟಾರ್ಪಾಲ್‌ ಹಾಕಲಾಗಿದೆ. ಟಾರ್ಪಾಲ್‌ ಮತ್ತು ಸೋಗೆಯನ್ನು ಪ್ರತಿವರ್ಷ ಈ ಕುಟುಂಬ ಹಾಸಿದರೂ ಸೋರುವ ಮಾಡಿಗೆ ಪರಿಹಾರವೇ ಕಂಡಿಲ್ಲ. ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ಮಳೆಗೆ ರಾತ್ರಿಯೂ ಛತ್ರಿ ಹಿಡಿದು ಕೂರುವ ಪರಿಸ್ಥಿತಿ ಇದೆ.

ಸಾಲದ ಹೊರೆ 
ಸವಿತಾ ಅವರ ಸೋದರಿಯ ವಿವಾಹಕ್ಕಾಗಿ ಮಹಾಬಲ ರೈ ಬ್ಯಾಂಕ್‌ ನಲ್ಲಿ ಸಾಲ ಮಾಡಿದ್ದು, ಸಾಲ ತೀರಿಸಲು ಇದುವರೆಗೆ ಸಾಧ್ಯವಾಗಿಲ್ಲ. ಸುಮಾರು 1 ಲಕ್ಷ ರೂ. ಸಾಲವಿದ್ದು ವರ್ಷಂಪ್ರತಿ 20,000 ರೂ. ಬಡ್ಡಿ ಪಾವತಿಸಲು ಇವರು ಸಂಕಷ್ಟ ಪಡುತ್ತಿದ್ದಾರೆ. ಇನ್ನು ಇವರ ಮನೆಯಲ್ಲಿ ಶೌಚಾಲಯ ಇಲ್ಲ. ಕುಡಿಯುವ ನೀರಿಗೆ ಬಾವಿ ಇದ್ದರೂ ಅದು ಬೇಸಗೆಯಲ್ಲಿ ಬರಡಾಗಿ ನೀರಿಗೆ ಕಷ್ಟ ಪಡುವ ಸ್ಥಿತಿ ಇದೆ.

ಸವಿತಾಗೆ ನೆರವು ನೀಡಿ
ಸವಿತಾಳ ಕುಟುಂಬದ ಸ್ಥಿತಿಯನ್ನು ಮನಗಂಡು ಮಂಜೇಶ್ವರ ಗೋವಿಂದ ಪೈ ಸ್ಮಾರಕ ಸರಕಾರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಈ ಕುಟುಂಬಕ್ಕೆ ಪುಟ್ಟ ಸೂರೊಂದನ್ನು ನಿರ್ಮಿಸಲು ಮುಂದಾಗಿದೆ. ಇವರಿಗೆ ಸಹಾಯ ಮಾಡಲು ಇಚ್ಛಿಸುವವರು ಇಲ್ಲಿಗೆ ನೆರವು ನೀಡಬಹುದು. 

ಯೂನಿಯನ್‌ ಬ್ಯಾಂಕ್‌ ಖಾತೆ ನಂಬ್ರ: 501002010008056
IFSC ಕೋಡ್‌: UBINO 550108.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.