ಕೇರಳದಲ್ಲಿ ಬಾಂಗ್ಲಾ ಪ್ರಜೆಗಳ ಅಕ್ರಮ ವಾಸ್ತವ್ಯ: 35 ಮಂದಿ ಬಂಧನ


Team Udayavani, Sep 7, 2017, 10:26 AM IST

07-REP-18.jpg

ಕಾಸರಗೋಡು: ಭಾರತಕ್ಕೆ ಅಕ್ರಮವಾಗಿ ನುಸುಳುವ ಬಾಂಗ್ಲಾ ದೇಶದ ಪ್ರಜೆಗಳು ಕೇರಳದಲ್ಲಿ ಅಪಾರ ಸಂಖ್ಯೆಯಲ್ಲಿ ನೆಲೆಸಿದ್ದಾರೆ. ಈ ಸಂಬಂಧ 35 ಮಂದಿಯನ್ನು ವಿವಿಧೆಡೆಗಳಿಂದ ಪೊಲೀಸರು ಬಂಧಿಸಿದ್ದಾರೆ. ಇದೇ ಸಂದರ್ಭದಲ್ಲಿ ಕಾಸರಗೋಡಿನಲ್ಲೂ ಬಾಂಗ್ಲಾ ಪ್ರಜೆಗಳಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ಸಮಗ್ರ ತನಿಖೆ ಆರಂಭಿಸಿದ್ದಾರೆ.

ಬಾಂಗ್ಲಾ ಪ್ರಜೆಗಳು ಅಕ್ರವಾಗಿ ಭಾರತದೊಳಕ್ಕೆ ನುಸುಳುತ್ತಿದ್ದು, ಇದು ದೇಶದ ಆಂತರಿಕ ಭದ್ರತೆಗೆ ಭಾರೀ ಅಪಾಯವನ್ನೊಡ್ಡುತ್ತಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಪತ್ತೆಹಚ್ಚಲು ಕೇರಳ ಪೊಲೀಸರು ಎಲ್ಲ ಜಿಲ್ಲೆಗಳಲ್ಲೂ ತನಿಖೆ ಆರಂಭಿಸಿದ್ದಾರೆ. ಇದರಂತೆ ಮಲಪ್ಪುರ ಎಡವಣ್ಣಪಾರದಲ್ಲಿ ಮಲಪ್ಪುರ ಜಿಲ್ಲಾ ಪೊಲೀಸ್‌ ವರಿಷ್ಠ ಅಧಿಕಾರಿ ದಿಬೇಶ್‌ ಕುಮಾರ್‌ ಬೆಹ್ರ ನೀಡಿದ ನಿರ್ದೇಶದಂತೆ ಸಿ.ಐ. ಮೊಹಮ್ಮದ್‌ ಹನೀಫಾ ನೇತೃತ್ವದ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ನೆಲೆಸಿದ್ದ 35 ಮಂದಿ ಬಾಂಗ್ರಾ ಪ್ರಜೆಗಳನ್ನು ಬಂಧಿಸಲಾಗಿದೆ.

ಎಡವಣ್ಣಾಪಾರದ ಬಾಡಿಗೆ ಮನೆಯಲ್ಲಿ ಹೊರ ರಾಜ್ಯ ಕಾರ್ಮಿಕರ ಸೋಗಿನಲ್ಲಿ ಅವರು ಇಲ್ಲಿ ವಾಸಿಸುತ್ತಿದ್ದರು. ವಿದೇಶದಿಂದ ಅಕ್ರಮವಾಗಿ ಭಾರತದೊಳಗೆ ನುಗ್ಗಿ ವಾಸಿಸುತ್ತಿರುವ ಸೆಕ್ಷನ್‌ ಪ್ರಕಾರ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಧಿತರು ಭಾರತದೊಳಗೆ ಅಕ್ರಮವಾಗಿ ನುಸುಳಿದ ಮತ್ತು ಅದರ ಹಿಂದಿನ ಉದ್ದೇಶದ ಬಗ್ಗೆ ಪೊಲೀಸರು, ಕೇರಳ ರಾಜ್ಯ ಪೊಲೀಸ್‌ ಗುಪ್ತಚರ ವಿಭಾಗ ಮತ್ತು ಕೇಂದ್ರ ಗುಪ್ತಚರ ವಿಭಾಗವೂ ಸಮಗ್ರ ತನಿಖೆ ನಡೆಸುತ್ತಿದೆ.

ಪಾಸ್‌ಪೋರ್ಟ್‌, ಮೊಬೈಲ್‌ ವಶ: ಬಾಂಗ್ಲಾ ಪ್ರಜೆಗಳು ವಾಸಿಸುತ್ತಿದ್ದ ಬಾಡಿಗೆ ಮನೆಗಳಿಗೆ ಪೊಲೀಸರು ನಡೆಸಿದ ದಾಳಿ ಮತ್ತು ತಪಾಸಣೆಯಲ್ಲಿ ಪಾಸ್‌ಪೋರ್ಟ್‌ಗಳು, ಗುರುತು ಚೀಟಿಗಳು, ಹಲವು ಮೊಬೈಲ್‌ ಫೋನ್‌ಗಳು, ಸಿಮ್‌ಗಳನ್ನು ವಶಪಡಿಸಿಕೊಂಡು ತೀವ್ರ ಪರಿಶೀಲನೆಗೊಳಪಡಿಸಿದ್ದಾರೆ.

ಪಶ್ಚಿಮ ಬಂಗಾಲ ನಿವಾಸಿಗಳೆಂಬ ತಪ್ಪು ಮಾಹಿತಿ ನೀಡಿ ಅವರು ಕೇರಳಕ್ಕೆ ಬಂದು ಕಳೆದ ಎರಡು ವರ್ಷಗಳಿಂದ ಹಲವೆಡೆ ಪದೇ ಪದೇ ತಮ್ಮ ವಾಸ್ತವ್ಯ ಬದಲಾಯಿಸಿಕೊಂಡು ಹೊರ ರಾಜ್ಯ ಕಾರ್ಮಿಕರ ಸೋಗಿನಲ್ಲಿ ಜೀವಿಸುತ್ತಿದ್ದರು. ಅವರು ಪದೇ ಪದೇ ವಾಸ್ತವ್ಯ ಬದಲಾಯಿಸುತ್ತಿರುವುದು ಪೊಲೀಸರಲ್ಲಿ ತೀವ್ರ ಶಂಕೆ ಉಂಟು ಮಾಡಿದೆ. ಈ ಬಗ್ಗೆಯೂ ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಕೇರಳದ ಹೆಚ್ಚಿನ ಜಿಲ್ಲೆಗಳಲ್ಲಿ ಸಾವಿರಾರು ಬಾಂಗ್ಲಾ ಪ್ರಜೆಗಳು ಅಕ್ರಮವಾಗಿ ವಾಸ್ತವ್ಯ ಹೂಡಿದ್ದಾರೆಂಬ ಬಗ್ಗೆಯೂ ಗುಪ್ತಚರ ವಿಭಾಗಕ್ಕೆ ಮಾಹಿತಿ ಲಭಿಸಿದೆ.

ಪಾಕ್‌ ಏಜೆಂಟರು !
ಬಾಂಗ್ಲಾದೇಶದಿಂದ ಅಕ್ರಮವಾಗಿ ಭಾರತದೊಳಗೆ ನುಸುಳಿ ಬರುವ ಬಾಂಗ್ಲಾ ಪ್ರಜೆಗಳಲ್ಲಿ ಹಲವರು ಪಾಕಿಸ್ಥಾನದ ಬೇಹುಗಾರ ಸಂಘಟನೆಯಾದ ಐಎಸ್‌ಐ ಏಜೆಂಟರಾಗಿಯೂ, ಇನ್ನು ಕೆಲವರು ಉಗ್ರಗಾಮಿ ಸಂಘಟನೆಗಳ ಏಜೆಂಟರಾಗಿಯೂ ಭಾರತದ ಹಲವೆಡೆ ಅಕ್ರಮವಾಗಿ ತಂಗಿದ್ದು ಭಾರತ ವಿರೋಧಿ ಭೂಗತ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಜತೆಗೆ ಪಾಕ್‌ನಲ್ಲಿ ಮುದ್ರಿಸಿದ ಭಾರತದ ನಕಲಿ ನೋಟುಗಳನ್ನು ಭಾರತದಲ್ಲಿ ವಿತರಿಸುವ ಏಜೆಂಟರಾಗಿಯೂ ಕಾರ್ಯವೆಸಗುತ್ತಿದ್ದಾರೆ. ಇಂತಹ ಬೆಳವಣಿಗೆ ದೇಶದ ಆಂತರಿಕ ಭದ್ರತೆಗೆ ಅಪಾಯಕಾರಿ ಎಂಬ ಹಿನ್ನೆಲೆಯಲ್ಲಿ ಸಮಗ್ರ ತನಿಖೆಗೆ ಕೇಂದ್ರ ಗೃಹ ಖಾತೆ ರಾಜ್ಯಗಳಿಗೆ ನಿರ್ದೇಶ ನೀಡಿತ್ತು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.