ಉಕ್ಕಿನಡ್ಕ ಶಾಲೆಯಲ್ಲಿ ಡ್ರಿಂಕ್ ವಾಟರ್ ಯೋಜನೆಗೆ ಚಾಲನೆ
Team Udayavani, Sep 28, 2019, 5:52 AM IST
ಪೆರ್ಲ: ಉಕ್ಕಿನಡ್ಕ ವಿಎಎಲ್ಪಿ ಶಾಲೆಯಲ್ಲಿ ಮಕ್ಕಳಿಗೆ ಶುದ್ದ , ಕುದಿಸಿ ತಣಿಸಿದ ನೀರನ್ನು ಕುಡಿಯುವ ಅಭ್ಯಾಸವನ್ನು ಬೆಳೆಸುವ ಉದ್ದೇಶದಿಂದ ಡ್ರಿಂಕ್ ವಾಟರ್ ಯೋಜನೆಗೆ ಚಾಲನೆ ನೀಡಲಾಯಿತು.
ಶಾಲಾ ಮುಖ್ಯ ಶಿಕ್ಷಕಿ ಗೀತಾ,ಶಾಲೆ ಗಂಟೆ ಬಾರಿಸುವುದರ ಮೂಲಕ ಉದ್ಘಾಟಿಸಿ ಚಾಲನೆ ನೀಡಿ,ಶುದ್ಧ ನೀರು ಆರೋಗ್ಯವನ್ನು ಕಾಪಾಡುತ್ತದೆ.ನಮ್ಮ ದೇಹದ ಉಷ್ಣತೆಯನ್ನು ಕಡಿಮೆ ಮಾಡಿ ತಂಪಾಗಿಡಲು ಸಹಾಯ ಮಾಡುತ್ತದೆ.ನೀರನ್ನು ಕಡಿಮೆ ಕುಡಿಯುವವರಲ್ಲಿ ಆಗಾಗ್ಗೆ ಶರೀರದಲ್ಲಿ ನೀರಿನಂಶವು ಕಡಿಮೆಯಾದಂತೆ ಡಿ ಹೈಡ್ರೆಷನ್ ಉಂಟಾಗುತ್ತದೆ.ಆದ್ದರಿಂದ ದೇಹದಲ್ಲಿ ನೀರಿನ ಕೊರತೆ ಉಂಟಾಗದಂತೆ ನೋಡಿಕೊಳ್ಳ ಬೇಕು ಎಂದರು.
ಶಾಲಾ ಶಿಕ್ಷಕ ಹರೀಶ್ ಗೋಳಿತ್ತಡ್ಕ ನೀರಿನ ಮಹತ್ವದ ಕುರಿತು ತಿಳಿಸುತ್ತಾ ಶಾಲಾ ಮಕ್ಕಳು ಆಟೋಟಗಳಲ್ಲಿ ಭಾಗವಹಿಸುವುದರಿಂದ ಅವರ ದೇಹಕ್ಕೆ ಹೆಚ್ಚಿನ ನೀರಿನ ಅಗತ್ಯವಿದೆ.ನೀರಿನ ಕೊರತೆಯಿಂದ ಶಾರೀರಿಕ ಬಳಲಿಕೆ,ಇನ್ನಿತರ ಆರೋಗ್ಯ ಸಮಸ್ಯೆ ಉಂಟಾಗುತ್ತದೆ.
ಆದ್ದರಿಂದ ಶಾಲೆಯಲ್ಲಿ ಮಕ್ಕಳು ನೀರು ಕುಡಿಯುವುದು ದೃಢಪಡಿಸುವ ಉದ್ದೇಶದಿಂದ ಡ್ರಿಂಕ್ ವಾಟರ್ ಆಯೋಜಿಸಲಾಗಿದೆ ಎಂದು ನುಡಿದರು. ಶಿಕ್ಷಕ ವೃಂದ ,ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ