ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 19 ಮಂದಿಗೆ ಸೋಂಕು ದೃಢ


Team Udayavani, Mar 24, 2020, 4:36 AM IST

ಕಾಸರಗೋಡು ಜಿಲ್ಲೆಯಲ್ಲಿ ಮತ್ತೆ 19 ಮಂದಿಗೆ ಸೋಂಕು ದೃಢ

ಕಾಸರಗೋಡು: ಮಾರಣಾಂತಿಕ ಕೋವಿಡ್-19 ವೈರಸ್‌ ಸೋಂಕು ದೇಶಾದ್ಯಂತ ವೇಗದಲ್ಲಿ ಹರಡುತ್ತಿರುವಂತೆ ಕೇರಳದಲ್ಲಿ ಮಾ. 31ರ ವರೆಗೆ ಲಾಕ್‌ಡೌನ್‌ ಘೋಷಿಸಲಾಗಿದೆ. ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 19 ಮಂದಿಯಲ್ಲಿ ಕೋವಿಡ್-19 ದೃಢವಾಗಿದೆ. ಇದರೊಂದಿಗೆ ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಬಾಧಿತರ ಒಟ್ಟು ಸಂಖ್ಯೆ 38ಕ್ಕೇರಿದೆ.

ರಾಜ್ಯದಲ್ಲಿ ಸೋಮವಾರ ಒಟ್ಟು 28 ಜನರಿಗೆ ಕೊರೊನಾ ಸೋಂಕು ದೃಢಪಡಿಸಲಾಗಿದೆ. ಕಣ್ಣೂರು ಜಿಲ್ಲೆಯಲ್ಲಿ 5, ಪತ್ತನಂತಿಟ್ಟ-1, ಎರ್ನಾಕುಳಂ – 2, ತೃಶ್ಶೂರ್‌ -1, ಕಾಸರಗೋಡು-19 ಎಂಬಂತೆ ಕೊರೊನಾ ದೃಢಪಡಿಸಲಾಗಿದೆ. ಇವರಲ್ಲಿ 25 ಮಂದಿ ದುಬಾೖಯಿಂದ ಬಂದವರು. ರಾಜ್ಯದಲ್ಲಿ ಒಟ್ಟು 91 ಮಂದಿ ಕೋವಿಡ್-19 ಪತ್ತೆಹಚ್ಚಲಾಗಿದೆ. ನಾಲ್ವರು ರೋಗ ಮುಕ್ತರಾಗಿದ್ದಾರೆ.

64,320 ಮಂದಿ ನಿಗಾದಲ್ಲಿ
ಸೋಮವಾರ ರಾಜ್ಯದಲ್ಲಿ 64,320 ಮಂದಿ ನಿಗಾದಲ್ಲಿದ್ದಾರೆ. ಇವರಲ್ಲಿ 63,937 ಮಂದಿ ಮನೆಯಲ್ಲೂ, 383 ಮಂದಿ ಆಸ್ಪತ್ರೆಯಲ್ಲೂ ನಿಗಾದಲ್ಲಿದ್ದಾರೆ. ಸೋಮವಾರ 122 ಮಂದಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಒಟ್ಟು 4,291 ಮಂದಿಯ ಸ್ಯಾಂಪಲ್‌ ತಪಾಸಣೆಗೆ ಕಳುಹಿಸಲಾಗಿದ್ದು, ಅದರಲ್ಲಿ 2,987 ಮಂದಿಗೆ ನೆಗೆಟಿವ್‌ ಫಲಿತಾಂಶ ಬಂದಿದೆ.

ಲಾಕ್‌ಡೌನ್‌ ಘೋಷಣೆಯ ಹಿನ್ನೆಲೆಯಲ್ಲಿ ಸಾರಿಗೆಯನ್ನು ಸಂಪೂರ್ಣವಾಗಿ ನಿಲುಗಡೆಗೊಳಿ ಸಲಾಗಿದೆ. ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ ಸರ್ವೀಸ್‌ ಸಂಪೂರ್ಣ ನಿಲುಗಡೆಗೊಳಿಲಾಗಿದೆ. ಖಾಸಗಿ ವಾಹನವನ್ನು ಬಳಸಬಹುದು. ಔಷಧ, ಹಾಲು, ಆ್ಯಂಬುಲೆನ್ಸ್‌, ವೈದ್ಯಕೀಯ, ಪತ್ರಿಕೆಗಳಿಗೆ ಯಾವುದೇ ನಿಷೇಧವಿಲ್ಲ.

ಆರಾಧನಾಲಯಗಳಿಗೆ ನಿಬಂಧನೆ ಜಾರಿಗೊಳಿಸಲಾಗಿದೆ. ಜನರು ಸೇರುವ ಕಾರ್ಯಕ್ರಮಗಳನ್ನು ಆರಾಧನಾಲಯಗಳಲ್ಲಿ ಆಯೋಜಿಸಬಾರದು. ಸರಕಾರಿ ಕಚೇರಿಗಳು ಸಂಪೂರ್ಣ ಭದ್ರತೆಯಲ್ಲಿ ಕಾರ್ಯಾಚರಿಸಲಿವೆ. ರಾಜ್ಯದ ಎಲ್ಲ ಗಡಿಗಳನ್ನು ಸಂಪೂರ್ಣವಾಗಿ ಮುಚ್ಚಲಾಗುವುದು. ಲಾಕ್‌ಡೌನ್‌ ಘೋಷಿಸಿರುವುದರಿಂದಾಗಿ ಯಾರೂ ಮನೆಯಿಂದ ಹೊರಗಿಳಿಯಬಾರದು. ಅನಗತ್ಯವಾಗಿ ಹೊರಗೆ ಬಂದರು ಕಠಿನ ಕ್ರಮ ಸಹಿತ ಬಂಧಿಸಲಾಗುವುದು. ಜನರೊಂದಿಗೆ ಮಾತನಾಡುವ ಸಂದರ್ಭದಲ್ಲಿ ಒಂದು ಮೀಟರು ಅಂತರ ಕಾಯ್ದುಕೊಳ್ಳಬೇಕು. ಹೊಟೇಲ್‌ಗ‌ಳಲ್ಲಿ ಕುಳಿತುಕೊಂಡು ಆಹಾರ ಸೇವನೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಗತ್ಯವಿದ್ದಲ್ಲಿ ಹೋಮ್‌ ಡೆಲಿವರಿ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿದ್ದಾರೆ.

ಮತ್ತೂಬ್ಬ ಕೇರಳ ಸೋಂಕಿತ ರಾಜ್ಯ ಕರಾವಳಿಯಲ್ಲಿ ಓಡಾಟ
ಸೋಮವಾರ ಕೇರಳದಲ್ಲಿ ಕೊರೊನಾ ಸೋಂಕು ದೃಢಪಟ್ಟ ಕಾಸರಗೂಡು ಪಾಲಿಕಲ್‌ನ 54 ವರ್ಷದ ವ್ಯಕ್ತಿಯು ರಾಜ್ಯದ ಕರಾವಳಿಯಲ್ಲಿ ಓಡಾಟ ನಡೆಸಿದ್ದು ವಿವರ ಲಭ್ಯವಾಗಿದೆ.

ಮಾರ್ಚ್‌ 10ರಂದು ಸಂಜೆ 5.30ಕ್ಕೆ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದಲ್ಲಿ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಸ್ವಂತ ಕಾರಿನಲ್ಲಿ ಕಾಸರಗೂಡಿಗೆ ತೆರಳಿದ್ದರು. ಬಳಿಕ ಮಾ. 11ರಂದು ಸ್ಥಳೀಯ ಮೀನು ಮಾರುಕಟ್ಟೆಗೆ ಭೇಟಿ. ಮಾ. 18ರ ಮಧ್ಯಾಹ್ನ 3ಕ್ಕೆ ಅತ್ತಾವರದ ಕಸ್ತೂರ್ಬಾ ಮೆಡಿಕಲ್‌ ಕಾಲೇಜಿಗೆ ಭೇಟಿ ನೀಡಿ ಆರೋಗ್ಯ ಪರೀಕ್ಷೆ ಮಾಡಿಸಿ ಕೆಎಂಸಿ ಕ್ಯಾಂಟೀನ್‌ನಲ್ಲಿ ಚಹಾ ಸೇವಿಸಿದ್ದಾರೆ. ಬಳಿಕ 6 ಗಂಟೆಗೆ ಆಟೋ ರಿಕ್ಷಾದಲ್ಲಿ ಮೆಡಿಸಿಟಿ ಕಟ್ಟಡಕ್ಕೆ ತೆರಳಿ ಔಷಧ ಖರೀದಿಸಿ ಅಲ್ಲಿಂದ ಕೆಎಸ್‌ಆರ್‌ಟಿಸಿ ಬಸ್‌ ಮೂಲಕ ಕಾಸರಗೂಡಿಗೆ ವಾಪಸಾಗಿದ್ದಾರೆ. ಮಾರ್ಚ್‌ 20ರಂದು ಖಾಸಗಿ ಕಾರಿನಲ್ಲಿ ಮಂಗಳೂರಿಗೆ ಬಂದು ವೈದ್ಯರನ್ನು ಭೇಟಿ ಮಾಡಿ ಮರಳಿದ್ದರು.

ಈ ಸೋಂಕಿತ ವ್ಯಕ್ತಿ ಸಂಚಾರ ಮಾಡಿದ್ದ ವಿಮಾನದಲ್ಲಿ ಹಾಗೂ ಬಸ್‌ಗಳಲ್ಲಿ ಯಾರಾದರೂ ಪ್ರಯಾಸಿದ್ದರೆ ಕೂಡಲೇ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡುವಂತೆ ತಿಳಿಸಲಾಗಿದೆ.

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.