ಕಲ್ಲುಗದ್ದೆ ಕ್ಷೇತ್ರ ಸಂಪರ್ಕ ರಸ್ತೆ ಉದ್ಘಾಟನೆ


Team Udayavani, Jan 24, 2020, 6:50 AM IST

raste

ಎಡನೀರು: ಕಲ್ಲುಗದ್ದೆ ಕ್ಷೇತ್ರದಲ್ಲಿ ನಿರಂತರವಾಗಿ ನಡೆಯುತ್ತಿರುವ ಧರ್ಮ ಕಾರ್ಯಗಳಲ್ಲಿ ಊರಿನ ಎಲ್ಲ ಜನರು ಜಾತಿ, ಮತ, ಧರ್ಮ ಭೇದವಿಲ್ಲದೆ ಒಟ್ಟು ಗೂಡುವುದರಿಂದ ಸಮಾಜದಲ್ಲಿ ಸಮೃ ದ್ಧಿಯ ಬೆಳಕು ಕಾಣಲು ಸಾಧ್ಯ. ದೇಶದಲ್ಲಿ ವರ್ತಮಾನದ ಬೆಳವಣಿಗೆಗಳಿಗೆ ಇದೊಂದು ಆದರ್ಶವಾಗಬಹುದೆಂದು ಕಾಸರಗೋಡು ಜಿಲ್ಲಾ ಪಂಚಾಯತ್‌ ಸ್ಥಾಯೀ ಸಮಿತಿ ಅಧ್ಯಕ್ಷೆ ನ್ಯಾಯವಾದಿ ಫರಿತಾ ಸಕೀರ್‌ ಅಹ್ಮದ್‌ ಅಭಿಪ್ರಾಯಪಟ್ಟರು.
ಅವರು ಕರಿಂಗಪಳ್ಳ ಕಲ್ಲುಗದ್ದೆ ಕ್ಷೇತ್ರದ ನೂತನ ಡಾಮರೀಕರಿಸಿದ ರಸ್ತೆಯನ್ನು ಉದ್ಘಾಟಿಸಿ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸರಕಾರವು ಉತ್ತಮ ಜೀವನಕ್ಕಾಗಿ ಹಲವಾರು ಯೋಜನೆಗಳನ್ನು ಅನುಷ್ಠಾನ ಗೊಳಿಸುತ್ತಿದ್ದು ಜನರು ಈ ಅವಕಾಶವನ್ನು ಸದ್ವಿನಿಯೋಗ ಮಾಡಿಕೊಳ್ಳಬೇಕೆಂದು ಚೆಂಗಳ ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ ಶಾಂತ ಕುಮಾರಿ ಟೀಚರ್‌ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ತಿಳಿಸಿದರು.

ಮುಳಿಯಾರು ಚೆಂಗಳ ಸೇರುವ ಈ ರಸ್ತೆಯನ್ನು ಜಿಲ್ಲಾ ಪಂಚಾಯತ್‌ ಯೋಜನೆಯ ಮುಖಾಂತರ ಸುಮಾರು 10 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ಡಾಮರೀಕರಿಸುವ ಕಾರ್ಯವನ್ನು ಪೂರ್ತಿ ಗೊಳಿಸಲಾಯಿತೆಂದು ಕಾಸರಗೋಡು ಜಿಲ್ಲಾ ಅಭಿವೃದ್ಧಿ ಸಮಿತಿ ಸಂಚಾಲಕರಾದ ಶೆರೀಫ್‌ ಕೊಡವಂಜಿ ಯೋಜನೆಯ ಬಗ್ಗೆ ಪ್ರಸ್ತಾವನೆ ಮಾಡಿದರು. ಕಾರ್ಯಕ್ರಮದಲ್ಲಿ ಸಾಮಾಜಿಕ, ರಾಜಕೀಯ, ಸಾಂಸ್ಕೃತಿಕ ಕಾರ್ಯಕರ್ತರಾದ ಬಿ.ಸಿ.ಕುಮಾರನ್‌, ಶಾಫಿ ಚೂರಿಪಳ್ಳ, ಕೆ.ಸಿ. ರಫೀಕ್‌, ಬಿ.ಎ.ಹಮೀದ್‌ ಹಾಜಿ, ಕೃಷ್ಣ ಚೇಡಿಕಲ್‌, ಹನೀಫ್‌ ಕರಿಂಗಪಳ್ಳ, ಬಿ.ಕೆ. ಮಾಧವನ್‌ ನಂಬ್ಯಾರ್‌, ಬಶೀರ್‌ ಪೈಕ, ಅಬ್ದುಲ್ಲ ಕುಂಞಿ ಮುಂಡ ಪಳ್ಳ ಮೊದಲಾದವರು ಉಪಸ್ಥಿತರಿದ್ದರು. ಕಮಲಾಕ್ಷ ಕಲ್ಲುಗದ್ದೆ ಅಭಿನಂದಿಸಿದರು. ಕಲ್ಲುಗದ್ದೆ ಕ್ಷೇತ್ರ ಸಮಿತಿ ಗೌರವ ಅಧ್ಯಕ್ಷ ಭಾಸ್ಕರ ಕಲ್ಲುಗದ್ದೆ ಅವರು ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು. ಮುಳಿಯಾರು ಗ್ರಾಮ ಪಂಚಾಯತ್‌ ಸದಸ್ಯೆ ಅನೀಶಾ ಮನ್ಸೂರ್‌ ಮಲ್ಲತ್‌ ಸ್ವಾಗತಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.