ಸೋಮವಾರಪೇಟೆ: ಚೂರಿಯಿಂದ ಇರಿದು ಮಹಿಳೆಯ ಕೊಲೆ
Team Udayavani, Sep 15, 2022, 7:29 PM IST
ಸೋಮವಾರಪೇಟೆ: ಮಹಿಳೆಯೋರ್ವರನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಮಾದಾಪುರ ಸಮೀಪದ ಜಂಬೂರು ಬಾಣೆಯಲ್ಲಿ ಗುರುವಾರ ನಡೆದಿದೆ.
ಜಂಬೂರು ನಿವಾಸಿ ಹಂಸ ಅವರ ಪತ್ನಿ ಸಾಹಿರಾ (35) ಕೊಲೆಯಾದ ಮಹಿಳೆ. ಅದೇ ಗ್ರಾಮದ ನಿವಾಸಿ ಪೂವಯ್ಯ(ಬೊಳ್ಳು) ಕೊಲೆ ಆರೋಪಿ. ಕಳೆದ 5 ವರ್ಷದ ಹಿಂದೆ ಹಂಸ ಪತ್ನಿಯನ್ನು ತ್ಯಜಿಸಿ ಹೋಗಿದ್ದ. ನಂತರ ಪೂವಯ್ಯ ಹಾಗೂ ತಾಹಿರಾ ಅನ್ಯೋನ್ಯವಾಗಿದ್ದರು ಎನ್ನಲಾಗಿದೆ.
ಕಳೆದ ಎರಡು ದಿನದಿಂದ ತಾಹಿರಾ ದೂರವಾಣಿ ಸಂಪರ್ಕಕ್ಕೆ ಸಿಗದ ಹಿನ್ನೆಲೆಯಲ್ಲಿ ಪೂವಯ್ಯ ವಿಚಲಿತನಾಗಿದ್ದ. ಮಾತನಾಡಿಸಲೆಂದು ಗುರುವಾರ ಬೆಳಗ್ಗೆ 9.30ಕ್ಕೆ ತಾಹಿರಾ ಮನೆಗೆ ತೆರಳಿದಾಗ ಅಲ್ಲಿ ಇನ್ನೊಬ್ಬ ಪುರುಷ ಇದ್ದ ಹಿನ್ನೆಲೆಯಲ್ಲಿ ರೋಷಗೊಂಡು ಮನೆಗೆ ಬಂದು ಚಾಕು ಹಿಡಿದು ತೆರಳಿದ್ದನು. ಅಷ್ಟೊತ್ತಿಗಾಗಲೇ ಮನೆಯಲ್ಲಿದ್ದ ವ್ಯಕ್ತಿ ಹೊರ ಹೋಗಿದ್ದಾನೆ. ಈ ಬಗ್ಗೆ ತಾಹಿರಾಳೊಂದಿಗೆ ಜಗಳ ಮಾಡಿದ ಆರೋಪಿ ಪೂವಯ್ಯ ಕುತ್ತಿಗೆ ಹಾಗು ಕಂಕುಳ ಭಾಗಕ್ಕೆ ಚಾಕುವಿನಿಂದ ತಿವಿದು ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ತಾಯಿಯನ್ನು ಮಕ್ಕಳು ಮಡಿಕೇರಿ ಜಿಲ್ಲಾಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಮಧ್ಯಾಹ್ನ 1 ಗಂಟೆಗೆ ತಾಹಿರಾ ಮೃತಪಟ್ಟಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಜಿಲ್ಲಾ ವರಿಷ್ಠಾಧಿಕಾರಿ ಅಯ್ಯಪ್ಪ, ಡಿವೈಎಸ್ಪಿ ಗಂಗಾದರಪ್ಪ, ಇನ್ಸ್ಪೆಕ್ಟರ್ ರಾಮಚಂದ್ರನಾಯಕ್ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಸೋಮವಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಅರೋಪಿ ಪೂವಯ್ಯ ವಿವಾಹಿತನಾಗಿದ್ದು ಎರಡು ಗಂಡು ಮಕ್ಕಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ