ಭಾರತೀಯ ಕಲೆ ಸಂಸ್ಕೃತಿಯ ವಾಹಕ: ಗಣಪತಿ ಭಟ್‌


Team Udayavani, May 15, 2019, 6:20 AM IST

ganesh-bhat

ಕುಂಬಳೆ: ಭಾರತೀಯ ಕಲೆ ಎಂಬುದು ಸಂಸ್ಕೃತಿಯ ಪ್ರವಾಹಕ. ಯಾವುದೇ ಕಲೆಗೆ ಅದರದ್ದೇ ಆದ ಮಹತ್ವವಿದೆ.ಕಲೆಯನ್ನು ಪೋಷಿಸಿ ರಕ್ಷಿಸುವ ಕಾರ್ಯ ನಮ್ಮಿಂದಾಗಬೇಕಿದೆ ಎಂದು ಆವಳಮಠ ಕ್ಷೇತ್ರದ ಪ್ರಭಾರಿ ಮೊಕ್ತೇಸರ ಗಣಪತಿ ಭಟ್‌ ಹೇಳಿದರು.

ಆವಳಮಠ ಶ್ರೀ ದುರ್ಗಾಸದನದಲ್ಲಿ ನಡೆದ ಶ್ರೀ ದುರ್ಗಾ ಸಪ್ತಸ್ವರ ಸಿಂಗಾರಿ ಮೇಳದ ಪಾದಾರ್ಪಣೆ ಕಾರ್ಯಕ್ರಮದಂಗವಾಗಿ ನಡೆದ ಸಭಾ ಕಾರ್ಯಕ್ರಮ ಮತ್ತು ಕಲಾವಿದರನ್ನು ಸಮ್ಮಾನಿಸುವ ಕಾರ್ಯಕ್ರಮವನ್ನು ದೀಪ ಬೆಳಗಿ ಉದ್ಘಾಟಿಸಿ ಅವರು ಮಾತನಾಡಿದರು.

ಎಳೆ ವಯಸ್ಸಿನಲ್ಲೇ ಕಲೆಗಳ ಬಗ್ಗೆ ಆಸಕ್ತಿ ಬೆಳೆಸಿಕೊಂಡಲ್ಲಿ ಕಲೆಗಳು ಪ್ರಬುದ್ಧವಾಗಿ ಬೆಳೆಯುತ್ತವೆ. ಕಳೆದ ನಾಲ್ಕು ತಿಂಗಳಿನಿಂದ ದೇವಸ್ಥಾನದ ಪರಿಸರದಲ್ಲಿ ಕೇರಳ ಚೆಂಡೆಯನ್ನು ಅಭ್ಯಸಿಸಿ,ಹಲವು ಆಯಾಮಗಳಲ್ಲಿ ಪಳಗಿದ ವಿದ್ಯಾರ್ಥಿಗಳನ್ನು ಮತ್ತು ತರಬೇತುದಾರ ಶ್ರಮವನ್ನು ಪ್ರಶಂಸಿಸಿದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿದ್ದ ರಿಸರ್ವ್‌ ಬ್ಯಾಂಕಿನ ವಿಶ್ರಾಂತ ಅಧಿಕಾರಿ ಲಕ್ಷ್ಮೀನಾರಾಯಣ ಭಟ್‌ ಮಾತನಾಡಿ ಸತತ ಪ್ರೋತ್ಸಾಹ ಮತ್ತು ಪರಿಶ್ರಮದ ಮೂಲಕ ಕಲೆಯನ್ನು ಗುರುವಿನ ಮೂಲಕ ತಮ್ಮದಾಗಿಸಿಕೊಂಡವರಿಗೆ ಶುಭಹಾರೈಸಿದರು. ವಿಭಿನ್ನ ಮತ್ತು ಅಪರೂಪದ ಕಲೆಗಳನ್ನು ಮುಂದಿನ ಪೀಳಿಗೆಗೆ ಹಸ್ತಾಂತರಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇದನ್ನು ಸಾûಾತ್ಕರಿಸಲು ಸಾಧ್ಯವಾಗಬೇಕಿದೆ ಎಂದರು. ಸಿಂಗಾರಿ ಮೇಳದ ಮುಖ್ಯ ತರಬೇತುದಾರ ರಾಜೇಶ್‌ ಪಾಂಡಿ, ಯಕ್ಷಗಾನ ಹಿಮ್ಮೇಳ ಕಲಾವಿದ ಶೇಣಿ ಸುಬ್ರಹ್ಮಣ್ಯ ಭಟ್‌, ಪಾರಂಪರಿಕ ಕೊಂಬು ವಾದಕ ಲಕ್ಷ್ಮಣ ಆವಳ ಸಾಗು ಅವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಸಮ್ಮಾನಿತ ಸಿಂಗಾರಿ ಮೇಳದ ತರಬೇತುದಾರ ರಾಜೇಶ್‌ ಪಾಂಡಿ ಮಾತನಾಡಿ ಕೇರಳದ ಹಲವು ಸಾಂಸ್ಕೃತಿಕ ಹಾಗೂ ಜನಪದ ಕಲೆಗಳು ಇಂದು ವಿಶ್ವವಿಖ್ಯಾತಿ ಹೊಂದಿವೆ. ಇಂತಹ ಕಲೆಗಳಲ್ಲಿ ಒಂದು ಸಿಂಗಾರಿ ಮೇಳವಾಗಿದ್ದು ಹಲವು ರಾಜ್ಯಗಳ ಸಹಿತ ಹೊರದೇಶಗಳಲ್ಲಿ ಸಿಂಗಾರಿ ಮೇಳಗಳು ಮೇಳೈಸಿವೆ ಎಂದರು.

ಶರೀರಕ್ಕೆ ಉತ್ತಮ ವ್ಯಾಯಾಮ ಸಹಿತ ಮನಸ್ಸಿಗೆ ಮುದ ನೀಡುವ ಸಿಂಗಾರಿ ಮೇಳದ ಚೆಂಡೆ ವಾದನವು ಹೊಸತನದ ಮೂಲಕ ಜನರ ಮನಸ್ಸನ್ನು ಗೆದ್ದಿದೆ ಎಂದರು.

ಸುಮಾರು 25 ವರ್ಷಗಳ ಹಿಂದೆ ಆರಂಭಗೊಂಡ ಸಿಂಗಾರಿ ಮೇಳವು ತಮಿಳುನಾಡಿನ ನೆಯ್ನಾಂಡಿ ಮೇಳದಿಂದ ಪ್ರಭಾವಿತವಾಗಿದೆ. ವಿಜಯನ್‌ ಮಾರಾರ್‌ ಅವರು ಎರ್ನಾಕುಳಂನ ಪರವೂರಿನಲ್ಲಿ ಆರಂಭಿಸಿದ ಸಿಂಗಾರಿ ಮೇಳ ಪ್ರದರ್ಶನಗಳು ಸಮಾನತೆಯ ಅಂಶವನ್ನು ಸಾರುವುದೆಂದರು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.