ಗುಡ್ಡ ಕುಸಿತದಿಂದ ಅಂತಾರಾಜ್ಯ ರಸ್ತೆ ಮುಚ್ಚುಗಡೆ

ಜಿಲ್ಲಾಧಿಕಾರಿ, ಶಾಸಕರ ಭೇಟಿ; ಪರಿಶೀಲನೆ: ಕ್ರಮಕ್ಕೆ ಭರವಸೆ

Team Udayavani, Jul 26, 2019, 5:52 AM IST

kramakke-baravase

ಬದಿಯಡ್ಕ: ಕಳೆದ ನಾಲ್ಕು ದಿನಗಳಿಂದ ಬದಿಯಡ್ಕ ಸಮೀಪದ ಕರಿಂಬಿಲದಲ್ಲಿ ನಾಗರಿಕರಿಗೆ ಭೀತಿ ತಂದೊಡ್ಡಿದ ರಸ್ತೆ ಬದಿಯ ಗುಡ್ಡ ಕುಸಿತಗೊಂಡ ಸ್ಥಳಕ್ಕೆ ಗುರುವಾರ ಬೆಳಿಗ್ಗೆ ಕಾಸರಗೋಡು ಜಿಲ್ಲಾಧಿಕಾರಿ ಕೆ. ಸಜಿತ್‌ ಬಾಬು ಭೇಟಿ ನೀಡಿ ಮಾಹಿತಿಯನ್ನು ಕಲೆಹಾಕಿ ಮುಂದಿನ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನು ನೀಡಿದರು.

ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಕ್ರಮ ಕೈಗೊಳ್ಳಲು ಆದೇಶವನ್ನು ನೀಡಿದರು. ಈ ವೇಳೆ ಅವರು ಮಾತನಾಡಿ ರಸ್ತೆ ಅಗಲಗೊಳಿಸುವ ವೇಳೆ ಉಂಟಾದ ಲೋಪವು ಇಲ್ಲಿ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಪ್ರಸ್ತುತ ಸ್ಥಳವು ತುಂಬಾ ಅಪಾಯಕಾರಿಯಾಗಿ ಗೋಚರಿಸುತ್ತಿದ್ದು, ಗುತ್ತಿಗೆದಾರರು, ಎಂಜಿನಿಯರ್‌ಗಳ ಜತೆ ಈ ಕುರಿತು ಚರ್ಚಿಸಲಾಗುವುದು.

ನಾಗರಿಕರ ಭೀತಿಯನ್ನು ದೂರ ಮಾಡಿ ರಸ್ತೆಯನ್ನು ಸಂಚಾರಯೋಗ್ಯವನ್ನಾಗಿಸಲು ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದರು.
ಇದೇ ವೇಳೆ ನಾಗರಿಕರು ಜಿಲ್ಲಾಧಿಕಾರಿಯವರಲ್ಲಿ ಲೋಕೋಪಯೋಗಿ ಇಲಾಖೆಯ ಯಾವುದೇ ಅಧಿಕಾರಿಗಳು ಇಲ್ಲಿ ರಸ್ತೆ ಅಗಲಗೊಳಿಸುವ ಸಂದರ್ಭದಲ್ಲಿ ಅಗತ್ಯ ಮೇಲ್ನೋಟ ವಹಿಸದಿರುವುದರಿಂದ ಇಂತಹ ಬಹುದೊಡ್ಡ ಅಪಾಯ ಬಂದೊದಗಿದೆ. ಪಳ್ಳತ್ತಡ್ಕ, ಉಕ್ಕಿನಡ್ಕ ದಲ್ಲಿಯೂ ಇದೇ ರೀತಿ ರಸ್ತೆ ಬದಿ ಗುಡ್ಡೆ ಪ್ರದೇಶವು ಅಪಾಯಕಾರಿಯಾಗಿವೆ. ಇದರ ಬಗ್ಗೆಯೂ ಗಮನ ಹರಿಸಬೇಕೆಂದು ಬಿನ್ನವಿಸಿಕೊಂಡರು. ಶಾಲಾಮಕ್ಕಳಿಗೆ ಶಾಲೆಗಳಿಗೆ ತಲುಪಲು ಉಂಟಾಗುವ ಕಷ್ಟಗಳ ಕುರಿತಾಗಿ ಬದಿಯಡ್ಕ ನವಜೀವನ ಪ್ರೌಢಶಾಲೆಯ ನೇತƒತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿಯನ್ನು ನೀಡಲಾಯಿತು.

ಸ್ಥಳೀಯ ನಿವಾಸಿ ಆ್ಯಂಟನಿ ಅವರು ತಮ್ಮ ಕಷ್ಟದ ಕುರಿತಾಗಿ ಮನವಿಯನ್ನು ನೀಡಿದರು. ಜಿಲ್ಲಾ ಪಂಚಾಯತ್‌ ಅಧ್ಯಕ್ಷ ನ್ಯಾಯವಾದಿ.ಶ್ರೀಕಾಂತ್‌, ಸುಧಾಮ ಗೋಸಾಡ, ಅವಿನಾಶ್‌ ರೈ, ಹರೀಶ್‌ ಗೋಸಾಡ ಅಶ್ರಫ್‌ ಮುನಿಯೂರು, ರಾಜೇಶ್‌, ವಿಶ್ವನಾಥ ಪ್ರಭು, ಹನೀಫ್‌ ಪಿಎಮ್ಮೆಸ್‌Õ ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದರು. ಘಟನಾ ಸ್ಥಳ ಸಂದರ್ಶಿಸಿದ ಕಾಸರಗೋಡು ಶಾಸಕ ಎನ್‌ಎ ನೆಲ್ಲಿಕುನ್ನು ಸಂಬಂಧಿಸಿದ ಇಲಾಖೆಯ ಜತೆ ಸಮಾಲೋಚನೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಬದಿಯಡ್ಕ ಪಂ.ಅಧ್ಯಕ್ಷ ಕೆ.ಎನ್‌.ಕೃಷ್ಣ ಭಟ್‌, ಮುಖಂಡರಾದ ಮಾಹಿನ್‌ ಕೇಳ್ಳೋಟ್‌ ಮತ್ತಿತರರು ಜತೆಗಿದ್ದರು.

ಸತತ 3ನೇ ದಿನ ರಸ್ತೆ ಸಂಚಾರ ಬಂದ್‌
ಚೆರ್ಕಳ ಕಲ್ಲಡ್ಕ ಅಂತಾರಾಜ್ಯ ಸಂಪರ್ಕ ರಸ್ತೆಯ ಕರಿಂಬಿಲ ಪ್ರದೇಶದಲ್ಲಿ ಸತತ ಮೂರನೇ ದಿನವೂ ರಸ್ತೆ ಸಂಚಾರಕ್ಕೆ ತಡೆಯೊಡ್ಡಲಾಗಿತ್ತು. ಗುಡ್ಡ ಕುಸಿಯುವ ಭೀತಿಯಿಂದಾಗಿ ಮಂಗಳವಾರ ಮಧ್ಯಾಹ್ನದಿಂದಲೇ ವಾಹನ ಸಂಚಾರ ನಿಲ್ಲಿಸಲಾಗಿತ್ತು. ಕೆಡೆಂಜಿ ಹಾಗೂ ಕಾಡಮನೆಯಿಂದ ವಾಹನಗಳು ಸುತ್ತು ಬಳಸಿ ಸಂಚರಿಸುತ್ತಿವೆೆ. ಅನ್ಯದಾರಿಯನ್ನು ಬಳಸಿ ಬಸ್‌ ಸಂಚಾರ ನಡೆಸಿ ನಷ್ಟವುಂಟಾಗುತ್ತದೆ ಎಂದು ಖಾಸಗಿ ಬಸ್‌ಗಳು ತಮ್ಮ ಸಂಚಾರವನ್ನೇ ನಿಲ್ಲಿಸಿವೆ. ಸಾರ್ವಜನಿಕರು, ವಿದ್ಯಾರ್ಥಿಗಳು ನಿರ್ದಿಷ್ಟ ಸ್ಥಳಕ್ಕೆ ತಲುಪಲು ಹರಸಾಹಸಪಡುವಂತಾಗಿದೆ.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.