ಮುಂದಿನ ವರ್ಷ ಜಿಲ್ಲೆಯಲ್ಲಿ ರಾಜ್ಯ ಶಾಲಾ ಕಲೋತ್ಸವ: ಡಾ| ಗಿರೀಶ್
Team Udayavani, Dec 14, 2018, 2:25 AM IST
ಕಾಸರಗೋಡು: 60ನೇ ರಾಜ್ಯಮಟ್ಟದ ಶಾಲಾ ಕಲೋತ್ಸವ ಮುಂದಿನ ವರ್ಷ ಜಿಲ್ಲೆಯಲ್ಲಿ ವೈಭವಯುತವಾಗಿ ನಡೆಯಲಿದೆ ಎಂದು ಜಿಲ್ಲಾ ಶಿಕ್ಷಣ ಉಪನಿರ್ದೇಶಕ ಡಾ| ಗಿರೀಶ್ ಚೋಲಯಿಲ್ ಹೇಳಿದರು. ಮುಂದಿನ ವರ್ಷ ಕಲೋತ್ಸವ ನಡೆಸುವ ಜಿಲ್ಲೆಗೆ ಧ್ವಜ ಹಸ್ತಾಂತರಿಸುವ ಕಾರ್ಯಕ್ರಮ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದ್ದು, ಅವರು ಜಿ. ಪಂ. ಅಧ್ಯಕ್ಷ ಎ.ಜಿ.ಸಿ. ಬಶೀರ್ ಅವರಿಗೆ ಧ್ವಜ ಹಸ್ತಾಂತರಿಸಿದರು.
ಈ ವರ್ಷ ಸಂಭವಿಸಿದ ಜಲದುರಂತ ಹಿನ್ನೆಲೆಯಲ್ಲಿ ಸರಕಾರ ವೆಚ್ಚ ಕಡಿತ ನೀತಿ ಜಾರಿಗೊಳಿಸಿದ್ದ ಕಾರಣ ಹೆಚ್ಚುವರಿ ಗೌಜಿಗದ್ದಲಗಳಿಲ್ಲದೆ ರಾಜ್ಯ ಮಟ್ಟದ ಶಾಲಾ ಕಲೋತ್ಸವ ನಡೆಸಬೇಕಾಗಿ ಬಂದಿತ್ತು. 27 ವರ್ಷಗಳ ಬಳಿಕ ಕಲೋತ್ಸವವನ್ನು ವರ್ಣ ರಂಜಿತವಾಗಿ ನಡೆಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲೇ ಸಂಘಟಕ ಸಮಿತಿ ಸಭೆಯನ್ನೂ ನಡೆಸಲಾಗುವುದು ಎಂದವರು ಹೇಳಿದರು. ಜಿಲ್ಲಾಧಿಕಾರಿ ಡಾ| ಡಿ.ಸಜಿತ್ ಬಾಬು ಅವರ ಸಮಕ್ಷದಲ್ಲಿ ಈ ಸಮಾರಂಭ ನಡೆಯಿತು. ಜಿಲ್ಲಾ ಮಾಹಿತಿ ಅಧಿಕಾರಿ ರಶೀದ್ಬಾಬು, ಸಹಾಯಕ ಮಾಹಿತಿ ಅಧಿಕಾರಿ ಸಿ.ಟಿ.ಜೋನ್, ವಿವಿಧ ಇಲಾಖೆಗಳ ಪ್ರತಿನಿಧಿಗಳು, ಸಿಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ