“ಸರಕಾರಿ ಕಚೇರಿಗಳಲ್ಲಿ ಕನ್ನಡ ಬಲ್ಲವರನ್ನು ನೇಮಿಸಬೇಕು’


Team Udayavani, Jul 23, 2021, 6:20 AM IST

“ಸರಕಾರಿ ಕಚೇರಿಗಳಲ್ಲಿ ಕನ್ನಡ ಬಲ್ಲವರನ್ನು ನೇಮಿಸಬೇಕು’

ಕಾಸರಗೋಡು: ಕನ್ನಡ ಮತ್ತು ತಮಿಳು ಭಾಷಾ ಅಲ್ಪಸಂಖ್ಯಾಕರುಳ್ಳ ಪ್ರದೇಶಗಳಲ್ಲಿರುವ ಸರಕಾರಿ ಕಚೇರಿಗಳಲ್ಲಿ ಕನ್ನಡ ಮತ್ತು ತಮಿಳು ಭಾಷೆ ಬಲ್ಲವರನ್ನು ನೇಮಿಸಬೇಕೆಂದು ಭಾಷಾ ಅಲ್ಪಸಂಖ್ಯಾಕರು ಅನುಭವಿಸುತ್ತಿರುವ ಸಮಸ್ಯೆಗಳ ಅಧ್ಯಯನ ಸಮಿತಿ ಕೇರಳ ಸರಕಾರಕ್ಕೆ ಶಿಫಾರಸು ಮಾಡಿದೆ.

ಕೇರಳದ ಕಾಸರಗೋಡು ಸಹಿತ ವಿವಿಧ ಜಿಲ್ಲೆಗಳಲ್ಲಿ ಭಾಷಾ ಅಲ್ಪಸಂಖ್ಯಾಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಲು ಸರಕಾರ ನೇಮಿಸಿದ ಭಾಷಾ ಅಲ್ಪಸಂಖ್ಯಾಕ ಅಧ್ಯಯನ ಸಮಿತಿ ತನ್ನ ವರದಿಯಲ್ಲಿ ಭಾಷಾ ಸಮಸ್ಯೆಯಿಂದಾಗಿ ಭಾಷಾ ಅಲ್ಪಸಂಖ್ಯಾಕರು ಸಂವಿಧಾನಬದ್ಧವಾಗಿ ಲಭಿಸಬೇಕಾದ ಎಲ್ಲ ಸವಲತ್ತುಗಳಿಂದಲೂ ವಂಚಿತರಾಗುತ್ತಿದ್ದಾರೆ. ಅಲ್ಲದೆ ಸೌಲಭ್ಯ ವಿತರಣೆಯಲ್ಲೂ ವಿಳಂಬವಾಗುತ್ತಿದೆ. ಸಂವಿಧಾನಬದ್ಧ ಹಕ್ಕುಗಳನ್ನು ಯಥಾ ಸ್ಥಿತಿ ಸಂರಕ್ಷಿಸಬೇಕು, ಭಾಷಾ ಅಲ್ಪಸಂಖ್ಯಾಕರಿಗೆ ಕೊಡಮಾಡಿದ ಎಲ್ಲ ಸವಲತ್ತುಗಳನ್ನು ನೀಡಬೇಕೆಂದು ಹೇಳಿದೆ.

ಭಾಷಾ ಅಲ್ಪಸಂಖ್ಯಾಕರು 1950ಕ್ಕೆ ಮುನ್ನವೇ ಕೇರಳದಲ್ಲಿ ವಾಸಿಸಲು ಆರಂಭಿಸಿದ್ದಾರೆ ಎಂದು ಸ್ಪಷ್ಟಪಡಿಸುವ ದಾಖಲೆಗಳು ಬೇಕಾಗಿರುವುದರಿಂದ ವಿವಿಧ ಸರ್ಟಿಫಿಕೆಟ್‌ಗಳು ಲಭಿಸಲು ಸಮಸ್ಯೆಗಳಿವೆ. ಈ ಹಿನ್ನೆಲೆಯಲ್ಲಿ ಕಾಲಾವಧಿಯನ್ನು 1950ಕ್ಕೆ ಬದಲಾಗಿ 1970ಕ್ಕೆ ಬದಲಾಯಿಸಬೇಕೆಂದು ಶಿಫಾರಸು ಮಾಡಿದೆ.

ತುಳು ಭಾಷೆ ಮಾತನಾಡುವವರನ್ನು ಭಾಷಾ ಅಲ್ಪಸಂಖ್ಯಾಕ ವಿಭಾಗದಲ್ಲಿ ಸೇರ್ಪಡೆ ಗೊಳಿಸದಿರುವುದರಿಂದ ಅವರಿಗೆ ಪ್ರತ್ಯೇಕ ಸವಲತ್ತುಗಳನ್ನು ನೀಡಬೇಕು. ಅಲ್ಪಸಂಖ್ಯಾಕ ಭಾಷೆ ಮಾತನಾಡುವ ಜನರಿರುವ ಪ್ರದೇಶಗಳ ಸರಕಾರಿ ಕಚೇರಿಗಳ ನಾಮ ಫಲಕಗಳಲ್ಲಿ ಅಂತಹ ಭಾಷೆಗಳನ್ನು ಸೇರ್ಪಡೆಗೊಳಿಸಬೇಕು. ಎಲ್ಲ ಅರ್ಜಿ ನಮೂನೆಗಳು, ಕೈಪಿಡಿಗಳು ಭಾಷಾ ಅಲ್ಪಸಂಖ್ಯಾಕ ಭಾಷೆಗಳಲ್ಲೂ ಲಭಿಸಬೇಕು.

ಅಧ್ಯಾಪಕರ ಅರ್ಹತೆ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ, ಪ್ಲಸ್‌ ವನ್‌, ಪ್ಲಸ್‌ ಟು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳನ್ನು ಕನ್ನಡ, ತಮಿಳು ಭಾಷೆಗಳಲ್ಲೂ ನೀಡಬೇಕು. ಸರಕಾರಿ ವೆಬ್‌ಸೈಟ್‌ಗಳಲ್ಲೂ ಈ ಭಾಷೆಗಳನ್ನು ಸೇರ್ಪಡೆಗೊಳಿಸಬೇಕು. ಕೊಂಕಣಿ ಭಾಷೆಯನ್ನು ಅಲ್ಪಸಂಖ್ಯಾಕ ಭಾಷೆಯಾಗಿ ಪರಿಗಣಿಸಬೇಕು ಮೊದಲಾದವು ಸರಕಾರಕ್ಕೆ ಸಲ್ಲಿಸಿದ ಶಿಫಾರಸಿನಲ್ಲಿದೆ. ಭಾಷಾ ಅಲ್ಪಸಂಖ್ಯಾಕ ಸ್ಪೆಷಲ್‌ ಆಫೀಸರ್‌ ಡಾ| ನಡುವಟ್ಟಂ ಗೋಪಾಲಕೃಷ್ಣನ್‌ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಈ ವರದಿಯನ್ನು ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.