ಕಾಸರಗೋಡಿನಲ್ಲಿ ಕನ್ನಡ ಚಿರಂಜೀವಿ : ಬಾಲಕೃಷ್ಣ ಅಗ್ಗಿತ್ತಾಯ

ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ ಲಾಂಛನ ಬಿಡುಗಡೆ

Team Udayavani, Sep 17, 2019, 5:44 AM IST

16KSDE1

ಕಾಸರಗೋಡು: ಕಾಸರಗೋಡಿನ ಕನ್ನಡ ರಂಗಭೂಮಿ, ಸಾಹಿತ್ಯ ಮೊದಲಾದ ಪ್ರಕಾರಗಳಿಗೆ ಗಾಢ ಇತಿಹಾಸವಿದೆ. ಇದು ಗಟ್ಟಿಯಾದ ಕನ್ನಡ ಸಾಹಿತ್ಯ. ಸಾಹಿತ್ಯವು ಮಾನಸಿಕ ಸಮಾಧಾನ ನೀಡುತ್ತದೆ. ಕಾಸರಗೋಡಿನಲ್ಲಿ ಯಾವುದೇ ಶಕ್ತಿಗೆ ಕನ್ನಡ ಭಾಷೆಯ ದಮನ ಸಾಧ್ಯವಿಲ್ಲ.

ಜಿಲ್ಲೆಯಲ್ಲಿ ಕನ್ನಡ ಚಿರಂಜೀವಿ. ಚುಟುಕು ಸಾಹಿತ್ಯಕ್ಕೆ ಪ್ರಾಸಬದ್ಧತೆಯೇ ಜೀವಾಳವಾಗಿದ್ದು, ವ್ಯಾಕರಣ ಬದ್ಧತೆಯ ಚೌಕಟ್ಟು ಅನಿವಾರ್ಯವಲ್ಲ. ಕನ್ನಡಿಗರು ತಮ್ಮ ಮಕ್ಕಳನ್ನು ಕನ್ನಡ ಶಾಲೆಗೆ ಸೇರಿಸಬೇಕು. ಇದರಿಂದ ಕನ್ನಡದ ಶಕ್ತಿ ವೃದ್ಧಿಸುತ್ತದೆ ಎಂದು ನಿವೃತ್ತ ಉಪಜಿಲ್ಲಾಧಿಕಾರಿ ಬಿ.ಬಾಲಕೃಷ್ಣ ಅಗ್ಗಿತ್ತಾಯ ಹೇಳಿದರು.

ಅವರು ಕಾಸರಗೋಡು ಪಾರೆಕಟ್ಟೆಯ ಕನ್ನಡ ಗ್ರಾಮದಲ್ಲಿ ಸೆ.29ರಂದು ಕಾಸರಗೋಡು ಜಿಲ್ಲಾ ಹಾಗೂ ತಾಲ್ಲೂಕು ಚುಟುಕು ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆಯುವ 5ನೇ ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನದ ಲಾಂಛನ ಬಿಡುಗಡೆ, ಸಿದ್ಧತಾ ಸಭೆ ಹಾಗೂ ಹಾಸ್ಯ ಚುಟುಕು ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಚುಟುಕು ಗೋಷ್ಠಿಯನ್ನು ಉದ್ಘಾಟಿಸಿದ ಸಾಹಿತಿ, ಪತ್ರಕರ್ತ ವಿರಾಜ್‌ ಅಡೂರು ಮಾತನಾಡಿ, ಕಾಸರಗೋಡಿನಲ್ಲಿ ಕನ್ನಡವನ್ನು ಮುಂದಿನ ತಲೆಮಾರಿಗೆ ದಾಟಿಸುವ ನಿಟ್ಟಿನಲ್ಲಿ ಮಕ್ಕಳಲ್ಲಿ ಕನ್ನಡ ಜಾಗೃತಿ ಮೂಡಿಸಬೇಕು. ಶಾಲೆಗಳಲ್ಲಿ ಕನ್ನಡದ ಕಂಪು ಹರಡುವ ಶಿಬಿರಗಳನ್ನು ನಡೆಸಬೇಕು. ಮಕ್ಕಳಲ್ಲಿ ಕನ್ನಡ ಸಾಹಿತ್ಯ ಹಾಗೂ ಭಾಷಾಪ್ರೇಮ ಅರಳಿಸುವುದರಿಂದ ಮುಂದಿನ ಒಂದು ತಲೆಮಾರಿಗೆ ಕನ್ನಡವನ್ನು ಶಕ್ತವಾಗಿ ದಾಟಿಸಿದಂತಾಗುತ್ತದೆ. ಜಿಲ್ಲೆಯ ಎಲ್ಲಾ ಕನ್ನಡಪರ ಸಂಘಟನೆಗಳೂ ಕೂಡಾ ಒಂದೇ ಮನಸ್ಥಿತಿಯಲ್ಲಿ ಸೇರಿ ಒಗ್ಗಟ್ಟಿನಿಂದ ಹೋರಾಟ ಮಾಡಿದಲ್ಲಿ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಅನೇಕ ಸರಕಾರಿ ಸೌಲಭ್ಯಗಳನ್ನು ಪಡೆಯಬಹುದು. ಪ್ರಸ್ತುತ ಎಲ್ಲಾ ಕನ್ನಡ ಸಂಘಟನೆಗಳೂ ಕೂಡಾ ಏಕಾಂಗಿಯಾಗಿ ಪ್ರತ್ಯಪ್ರತ್ಯೇಕವಾಗಿ ಹೋರಾಟ ಮಾಡುವುದರಿಂದ ನಿರೀಕ್ಷಿಸಿದ ಫಲಿತಾಂಶ ಪಡೆಯಲು ಕಷ್ಟವಾಗಿದೆ. ಇಂತಹಾ ಸಮ್ಮೇಳನಗಳು ಈ ಪ್ರತ್ಯೇಕತವಾದವನ್ನು ಅಳಿಸಿ, ಏಕಮನೋಭಾವವನ್ನು ಅರಳಿಸಲಿ ಎಂದು ಹೇಳಿದರು. ದಿವಾಕರ ಅಶೋಕನಗರ, ಕಾವ್ಯಕುಶಲ ಕನ್ನಡ ಹಾಡುಗಳನ್ನು ಹಾಡಿದರು.

ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಶಿವರಾಮ ಕಾಸರಗೋಡು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಈ ಸಮ್ಮೇಳನದಲ್ಲಿ ಕಾಸರಗೋಡು ದಸರಾ ನಾಡಹಬ್ಬ ಆಚರಣೆಗೆ ಚಾಲನೆ, ಸಮ್ಮೇಳನದ ಸರ್ವಾಧ್ಯಕ್ಷರ ಮೆರವಣಿಗೆ, ನಾಡಿನ ವಿವಿಧ ಕಲಾವಿದರಿಂದ ಕಲಾ ಪ್ರದರ್ಶನ, ಲೇಖಕರಿಂದ ಪುಸ್ತಕ ಪ್ರದರ್ಶನ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಭಜನಾ ಸಂಕೀರ್ತನೆ, ಸಾಧಕರಿಗೆ ಗೌರವ ಪ್ರಶಸ್ತಿ, ಜಿಲ್ಲಾ ಮಟ್ಟದ ಮಕ್ಕಳ ಕಾವ್ಯಸೌರಭ, ಅಂತರ್‌ರಾಜ್ಯ ಕಾವ್ಯ ಸಂಭ್ರಮ, ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ಮೊದಲಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ಹೇಳಿದ‌ರು.

ಸಮ್ಮೇಳನದ ಪ್ರಚಾರ ಫಲಕಗಳನ್ನು ಕಾಸರಗೋಡು ನಗರಸಭೆ ಕೌನ್ಸಿಲರ್‌ ಕೆ.ಶಂಕರ್‌ ಬಿಡುಗಡೆ ಮಾಡಿದರು. ಜಗದೀಶ್‌ ಕೂಡ್ಲು ವಂದಿಸಿದರು. ಕಾರ್ಯಕ್ರಮದಲ್ಲಿ ಕಾಸರಗೋಡಿನ ಕನ್ನಡ ಪ್ರೇಮಿಗಳು ಅನೇಕ ಮಂದಿ ಭಾಗವಹಿಸಿದ್ದರು.

ಚುಟುಕು ಹಾಸ್ಯ ಕವಿಗೋಷ್ಠಿ
ಈ ಸಂದರ್ಭದಲ್ಲಿ ನಡೆದ ಚುಟುಕು ಹಾಸ್ಯ ಕವಿಗೋಷ್ಠಿಯಲ್ಲಿ ವಿ.ಬಿ.ಕುಳಮರ್ವ, ವಿರಾಜ್‌ ಅಡೂರು, ರಾಮಕೃಷ್ಣ ನಡುಬೆಟ್ಟು, ಪ್ರಭಾವತಿ ಕೆದಿಲಾಯ, ಶಂಕರನಾರಾಯಣ ಭಟ್‌, ಕೆ.ನರಸಿಂಹ ಭಟ್‌ ಏತಡ್ಕ, ಸೌಮ್ಯ ಗುರು ಕಾರ್ಲೆ, ಪುರುಷೋತ್ತಮ ಭಟ್‌ ಪುದುಕೋಳಿ, ರಿತೇಶ್‌ ಕಿರಣ್‌ ಕಾಟುಕುಕ್ಕೆ, ಚಂದ್ರಿಕಾ ಶೆಣೈ ಮುಳ್ಳೇರಿಯ ಗುರುಪ್ರಸಾದ್‌ ಕೋಟೆಕಣಿ, ರಾಧಾಕೃಷ್ಣ ಕೆ.ಉಳಿಯತ್ತಡ್ಕ, ಸುಭಾಶ್‌ ಪೆರ್ಲ, ಪುರುಷೋತ್ತಮ ನಾೖಕ್‌, ದಯಾನಂದ ಬೆಳ್ಳೂರಡ್ಕ, ಶೇಖರ, ಯೋಗೀಶ್‌ ಕೋಟೆಕಣಿ, ಕುಶಲ ಪಾರೆಕಟ್ಟೆ, ಸತೀಶ್‌ ಕೂಡ್ಲು, ಸತ್ಯನಾರಾಯಣ, ಶ್ರೀಕಾಂತ್‌ ಕಾಸರಗೋಡು ಭಾಗವಹಿಸಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.