ಕೇರಳ ಸರಕಾರದಿಂದ ಕನ್ನಡ ಭಾಷೆ,ಸಂಸ್ಕೃತಿಗೆ ಮತ್ತೆ ಆಘಾತ: ಪುನರೂರು


Team Udayavani, Aug 11, 2018, 6:00 AM IST

10ksde6a.jpg

ಕಾಸರಗೋಡು: ಶತಮಾನ ಗಳಿಂದ ಕನ್ನಡ  ಭಾಷೆ ಮತ್ತು ಸಂಸ್ಕೃತಿಯನ್ನು ಉಸಿರಾಡುತ್ತಿದ್ದ ಕಾಸರಗೋಡಿನ ಕನ್ನಡಿಗರ ಮೇಲೆ ಕೇರಳ ಸರಕಾರ ಕಡ್ಡಾಯ ಮಲಯಾಳ ಕಲಿಕೆ ಆದೇಶ ಹೊರಡಿಸುವ ಮೂಲಕ ಮತ್ತೆ ಆಘಾತ ತಂದೊಡ್ಡಿದೆ. ಭಾಷಾ ಅಲ್ಪಸಂಖ್ಯಾಕ ಕನ್ನಡಿಗರಿಗೆ ನೀಡಿರುವ ಸಂವಿಧಾನಬದ್ಧ ಹಕ್ಕು ಸವಲತ್ತುಗಳನ್ನು ಕಸಿದುಕೊಳ್ಳುತ್ತಾ ಕಾಸರಗೋಡಿನಲ್ಲಿ ಕನ್ನಡ ಭಾಷೆ, ಸಂಸ್ಕೃತಿಯ ನಾಶಕ್ಕೆ ಪಣತೊಟ್ಟಿದೆ. ಇದರ ವಿರುದ್ಧ ಕಾಸರಗೋಡಿನ  ಕನ್ನಡಿಗರು ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕದ ಕನ್ನಡಿಗರ ಸಂಪೂರ್ಣ ಬೆಂಬಲ ಅಗತ್ಯವಿದೆ ಎಂದು ಧರ್ಮದರ್ಶಿ, ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಹೇಳಿದರು.

ಕಾಸರಗೋಡು ಕನ್ನಡ ಮಾಧ್ಯಮ ಶಾಲೆಗಳಲ್ಲಿ ಕಡ್ಡಾಯ ಮಲಯಾಳ ಕಲಿಸುವ ಆದೇಶದ ರದ್ದತಿ ಸಹಿತ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕೇಂದ್ರ ಹಾಗೂ ಕೇರಳ ಸರಕಾರದ ಮುಂದೆ ಕರ್ನಾಟಕ ಸರಕಾರ ಒತ್ತಡ ಹೇರಲು ಕನ್ನಡ ಹೋರಾಟ ಸಮಿತಿ ಕಾಸರಗೋಡು ಇದರ ಆಶ್ರಯದಲ್ಲಿ ಮಂಗಳೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆದ ಧರಣಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳ ಭವಿಷ್ಯದೊಂದಿಗೆ ಚೆಲ್ಲಾಟ
ಮಂಗಲ್ಪಾಡಿ ಶಾಲೆಯಲ್ಲಿ ಕನ್ನಡ ವಿದ್ಯಾರ್ಥಿಗಳಿಗೆ ಕನ್ನಡ ಜ್ಞಾನವಿಲ್ಲದ ಮಲಯಾಳ ಅಧ್ಯಾಪಕನನ್ನು ನೇಮಿಸುವ ಮೂಲಕ ಕನ್ನಡ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಕೇರಳ ಸರಕಾರ ಚೆಲ್ಲಾಟವಾಡುತ್ತಿದೆ. ಇದರ ವಿರುದ್ಧ ಕನ್ನಡ ಕಂದಮ್ಮಗಳು ನಡೆಸುತ್ತಿರುವ ಹೋರಾಟಕ್ಕೂ ಕರ್ನಾಟಕದ ಕನ್ನಡಿಗರು ಬೆಂಬಲ ನೀಡಬೇಕಾಗಿದೆ ಎಂದರು.

ಕಾಸರಗೋಡಿನಲ್ಲಿ ವಿದ್ಯಾರ್ಥಿಗಳ ಭವಿಷ್ಯ ಡೋಲಾಯಮಾನವಾಗಿದೆ. ಇದೀಗ ಮಂಗಲ್ಪಾಡಿ ಶಾಲೆಯಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮಲಯಾಳ ಅಧ್ಯಾಪಕನನ್ನು ನೇಮಿಸುವ ಮೂಲಕ ಕನ್ನಡ ವಿದ್ಯಾರ್ಥಿಗಳ ಭವಿಷ್ಯ ತೂಗುಯ್ನಾಲೆಗೆ ಸರಿಯುವಂತಾಗಿದೆ ಎಂದು ಕಾಸರಗೋಡು ಜಿಲ್ಲಾ ಸ್ಥಾಯೀ ಸಮಿತಿ ಅಧ್ಯಕ್ಷ ಹರ್ಷಾದ್‌ ಅವರು ಹೇಳಿದರು. ಕನ್ನಡಿಗರ ಅಸ್ತಿ¤ತ್ವ ಉಳಿಸಲು ಮತ್ತು ಕನ್ನಡಿಗರ ಸಂರಕ್ಷಣೆಗೆ ಕರ್ನಾಟಕ ಸರಕಾರ ನೇತೃತ್ವ ವಹಿಸಬೇಕೆಂದರು.

ಕಾಸರಗೋಡಿನ ಕನ್ನಡಿಗರು ವಲಸಿಗರಲ್ಲ. ಕನ್ನಡವನ್ನೇ ಉಸಿರಾಡುತ್ತಾ ಬಾಳಿ ಬದುಕಿದವರು. ಆದರೂ ಕೇರಳ ಸರಕಾರ ನಿರಂತರವಾಗಿ ಕನ್ನಡಿಗರ ಮೇಲೆ ಗದಾಪ್ರಹಾರ ನಡೆಸುತ್ತಿದೆ. ಇದರ ವಿರುದ್ಧ ನಡೆಯುತ್ತಿರುವ ಹೋರಾಟಕ್ಕೆ ಕರ್ನಾಟಕದ ಕನ್ನಡಿಗರು ನಮ್ಮ ಜೊತೆ ನಿಲ್ಲಬೇಕು ಎಂದು ಕನ್ನಡ ಹೋರಾಟ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ ಅವರು ಹೇಳಿದರು.

ಕಾಸರಗೋಡಿನ ಕನ್ನಡಿಗರು ನಮ್ಮವರೇ. ಅವರು ನಡೆಸಿಕೊಂಡು ಬರುತ್ತಿರುವ ಹೋರಾಟಕ್ಕೆ ಪೂರ್ಣ ಬೆಂಬಲ ನೀಡಬೇಕಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಅನಿಲ್‌ದಾಸ್‌ ಹೇಳಿದರು. ಕಾಸರಗೋಡಿನ ಕನ್ನಡಿಗರಿಗಾಗುತ್ತಿರುವ ಅನ್ಯಾಯದ ವಿರುದ್ಧ ತೀವ್ರ ಹೋರಾಟ ನಡೆಸುವುದಾಗಿ ಅವರು ಹೇಳಿದರು. ತುಳುನಾಡು ರಕ್ಷಣಾ ವೇದಿಕೆ ಅಧ್ಯಕ್ಷ ಯೋಗೀಶ್‌ ಶೆಟ್ಟಿ ಅವರು ಮಾತನಾಡಿ, ಕನ್ನಡಿಗರಿಗೆ ನ್ಯಾಯದೊರಕುವ ತನಕ ಹೋರಾಟ ನಡೆಯಲಿದೆ ಎಂದರು. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಳಗದ ಮೊಹಮ್ಮದ್‌ ಹಾಜಿ ಕುಕ್ಕುವಳ್ಳಿ, ರವೀಂದ್ರ ಶೆಟ್ಟಿ ಉಳಿತೊಟ್ಟು, ನಿಟ್ಟೆ ಶಶಿಧರ ಶೆಟ್ಟಿ, ಕರಾವಳಿ ಲೇಖಕಿಯರ ವಾಚಕರ ಸಂಘದ ಅರುಣಿ ನಾಗರಾಜ್‌, ಕರ್ನಾಟಕ ರಕ್ಷಣಾ ವೇದಿಕೆಯ ಮಧುಸೂದನ, ಕನ್ನಡ ಸಾಹಿತ್ಯ ಪರಿಷತ್‌ ಕೇರಳ ಗಡಿನಾಡ ಘಟಕ ಅಧ್ಯಕ್ಷ ಎಸ್‌.ವಿ.ಭಟ್‌, ಸಿರಿಗನ್ನಡ ಬಳಗದ ರಕ್ಷಿತ್‌ ಮೊದಲಾದವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಕನ್ನಡ ಹೋರಾಟ ಸಮಿತಿ ಸಂಚಾಲಕ ಎಂ.ವಿ.ಮಹಾಲಿಂಗೇಶ್ವರ ಭಟ್‌ ಅಧ್ಯಕ್ಷತೆ ವಹಿಸಿ ಮಂಗಳೂರಿನಲ್ಲಿ ಧರಣಿ ಮಾಡುವ ಉದ್ದೇಶವನ್ನು ತಿಳಿಸಿದರು. ಕನ್ನಡ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ಭಾಸ್ಕರ ಕೆ. ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಂಕಬೈಲು ಸತೀಶ್‌ ಅಡಪ ವಂದಿಸಿದರು.ಧರಣಿಯ ಬಳಿಕ ದ.ಕ.ಜಿಲ್ಲಾಡಳಿತಕ್ಕೆ ಕಾಸರಗೋಡು ಕನ್ನಡಿಗರ ಬೇಡಿಕೆಗಳ ಮನವಿಯನ್ನು ಸಲ್ಲಿಸಲಾಯಿತು.

ಹೋರಾಟದ ಧ್ವನಿ ದಿಲ್ಲಿಗೆ ತಲುಪಲಿ
ಸಂವಿಧಾನಬದ್ಧವಾಗಿ ಕಾಸರಗೋಡಿನ ಕನ್ನಡಿಗರಿಗೆ ಸರಕಾರದ ಆದೇಶ, ಸುತ್ತೋಲೆಗಳನ್ನು ಕನ್ನಡದಲ್ಲೇ ನೀಡಬೇಕೆಂದಿದ್ದರೂ ಇದ್ಯಾವುದನ್ನು ನೀಡದೆ ಕನ್ನಡಿಗರಿಗೆ ವಂಚಿಸುತ್ತಲೇ ಬಂದಿದೆ. ಎಲ್ಲ  ಸವಲತ್ತುಗಳನ್ನು ಕಸಿದುಕೊಳ್ಳುತ್ತಾ ಕನ್ನಡ ಭಾಷೆ, ಸಂಸ್ಕೃತಿಯ ನಾಶಕ್ಕೆ ಕೇರಳ ಸರಕಾರ ಮುಂದಾಗಿದೆ. ಇದರ ವಿರುದ್ಧ ನಡೆಯುತ್ತಿರುವ ಹೋರಾಟದ ಧ್ವನಿ ದಿಲ್ಲಿಗೂ ಕೇಳಿಸಬೇಕು. 
– ಪ್ರದೀಪ್‌ ಕುಮಾರ್‌ ಕಲ್ಕೂರ 
ಅಧ್ಯಕ್ಷ , ಕನ್ನಡ ಸಾಹಿತ್ಯ ಪರಿಷತ್‌ ದ.ಕ. ಜಿಲ್ಲೆ

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-madikeri-2

Madikeri: ಪ್ರೌಢ ಶಾಲಾ ವಿದ್ಯಾರ್ಥಿನಿಯ ಕೊಲೆ ಪ್ರಕರಣ; ಆರೋಪಿ ಪತ್ತೆಗೆ ತನಿಖೆ ಚುರುಕು

2-aranthodu

Missing Case: ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ಸುಳ್ಯದ ಅರಂತೋಡಿನಲ್ಲಿ ಪತ್ತೆ

7

Crime News: ಕಾಸರಗೋಡು ಅಪರಾಧ ಸುದ್ದಿಗಳು

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.