“ಕಣಿ ಕಾಣುವ ಹಬ್ಬ’ ಬಿಸು ಸಂಭ್ರಮದಿಂದ ಆಚರಣೆ


Team Udayavani, Apr 16, 2019, 6:30 AM IST

kani-kanuva-habba

ಕಾಸರಗೋಡು: ಸುಖ, ನೆಮ್ಮದಿ, ಸಂವೃದ್ಧಿಯ ಸಂಕೇತವಾದ ಸೌರಯುಗಾದಿ “ಕಣಿ ಕಾಣುವ ಹಬ್ಬ’ ಬಿಸುವನ್ನು ಸೋಮವಾರ ಸಂಭ್ರಮ, ಸಡಗರ, ಭಕ್ತಿ, ಶ್ರದ್ಧೆಯಿಂದ ನಾಡಿನಾದ್ಯಂತ ಆಚರಿಸಲಾಯಿತು. ತುಳುನಾಡಿನಲ್ಲಿ ಬಿಸು ಎಂದು ಕರೆಸಿಕೊಳ್ಳುವ ಹಬ್ಬ ಕೇರಳದಲ್ಲಿ ವಿಷು ಎಂಬ ಹೆಸರಿನಲ್ಲಿ ಕೊಂಡಾಡಲಾಯಿತು.

ವಿಷು ಅಥವಾ ಬಿಸು ಹಬ್ಬದ ಅಂಗವಾಗಿ ನಾಡಿನ ಪ್ರಧಾನ ದೇವಸ್ಥಾನಗಳಲ್ಲಿ ಬೆಳಗ್ಗಿನಿಂದಲೇ ಭಾರೀ ಸಂಖ್ಯೆಯಲ್ಲಿ ಭಕ್ತರು ನೆರೆದು ವಿಶೇಷ ಪೂಜೆ, ಪುನಸ್ಕಾರ ಸಲ್ಲಿಸಿದರು. ಮುಂಜಾನೆ ಎದ್ದು ಮನೆಗಳಲ್ಲಿ ಸಿದ್ಧಪಡಿಸಿದ ಕಣಿ ಕಂಡು ಆ ಬಳಿಕ ಹತ್ತಿರದ ದೇವಸ್ಥಾನ, ದೈವಸ್ಥಾನ, ಮಠ, ಮಂದಿರಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ದೇವಸ್ಥಾನಗಳಲ್ಲೂ ಕಣಿ ಸಿದ್ಧಪಡಿಸಲಾಗಿತ್ತು. ಕುಂಬಳೆ ಸೀಮೆಯ ಇತಿಹಾಸ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಬೆಳಗ್ಗಿನಿಂದಲೇ ದೇವರ ದರ್ಶನಕ್ಕೆ ಭಾರೀ ಸಂಖ್ಯೆಯಲ್ಲಿ ಭಕ್ತಾದಿಗಳು ನೆರೆದಿದ್ದರು. ವಿವಿಧ ದೇವಸ್ಥಾನಗಳಲ್ಲಿ ಕಣಿ ಸಿದ್ಧಪಡಿಸಿದ್ದು ನೋಡುಗರಿಗೆ ವಿಶೇಷವಾದ ಅನುಭವವನ್ನುಂಟು ಮಾಡಿತು. ನಾಡಿನಾದ್ಯಂತ ದೇವಸ್ಥಾನ, ದೈವಸ್ಥಾನ, ಮಂದಿರಗಳಲ್ಲೂ ಭಾರೀ ಸಂಖ್ಯೆಯಲ್ಲಿ ಭಕ್ತರು ನೆರೆದು ವಿಶೇಷ ಪೂಜೆ ಪುನಸ್ಕಾರ ನಡೆಸಿದರು.

ಹೊಸ ಬಟ್ಟೆ ತೊಟ್ಟು ಕಣಿಕಂಡು ಸಂತೋಷದಿಂದ ವಿಷು ಆಚರಿಸಿ ಸಂಬಂಧಿಕರಿಗೆ, ಗೆಳೆಯರಿಗೆ, ಆತ್ಮೀಯರಿಗೆ ಪರಸ್ಪರ ಶುಭಾಶಯ ಹೇಳಿದರು. ಸಂಜೆಯ ಹೊತ್ತು ವಿಶ್ರಾಂತಿ ಪಡೆಯಲು ಸಮುದ್ರ ಕಿನಾರೆಗೆ ತೆರಳಿ ಸಮುದ್ರದಲೆಯ ಸವಿಯನ್ನು ಸವಿದರು.

ಸಂಕಲ್ಪ
ವಿಷು ಹೊಸ ವರುಷದ ಶುರು ಸಂವೃದ್ಧಿ ಸಂಕಲ್ಪದ ದಿನ. ಯಾವುದೇ ಕಾರ್ಯದ ಆರಂಭಕ್ಕೆ ಕೃಷಿ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಈ ದಿನ ಶುಭ ದಿನ. ವರ್ಷವಿಡೀ ಸುಖ, ಸಮೃದ್ಧಿ ನೆಲೆಸಲಿ ಎಂಬ ಆಶಯದೊಂದಿಗೆ ಐಶ್ವರ್ಯದ ಸಂಕೇತವಾಗಿ ತುಳುನಾಡ ಜನರು ಮತ್ತು ಕೇರಳಿಯರು ವಿಷು ಹಬ್ಬವನ್ನು ಆಚರಿಸಿದರು. ಇದೇ ಹಬ್ಬ ತುಳು ನಾಡಿನಲ್ಲಿ “ಬಿಸು ಪರ್ಬ’ ಎಂದೇ ಖ್ಯಾತಿ ಪಡೆದಿದೆ.

ವಿಷು ಕಣಿಯ ವಿಶೇಷ ಬಲಿ
ಕುಂಬಳೆ ಸೀಮೆಯ ಅತಿ ಪುರಾತನವೂ, ಪ್ರಸಿದ್ಧವೂ ಆದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಎ. 15 ರಂದು ಮುಂಜಾನೆ ದೀಪೋತ್ಸವದ ಬಳಿಕ ವಿಷು ಕಣಿಯ ವಿಶೇಷ ಬಲಿ ನಡೆಯಿತು.

ವಿಶೇಷ ಬಲಿ ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಕ್ತರು ಭಾಗವಹಿಸಿದರು.
ಬಲಿ ಉತ್ಸವದ ಬಳಿಕ ರಾಜಾಂಗಣ ಪ್ರಸಾದ ನಡೆಯಿತು.

ಕಣಿ ಕಾಣುವುದು
ವರುಷದ ಆರಂಭದಲ್ಲಿ ಮೊದಲ ನೋಟಕ್ಕೆ ಆರಾಧ್ಯ ದೇವರನ್ನು ನೋಡುವ ಕ್ರಮವನ್ನು ಕಣಿ ಕಾಣುವುದು ಎನ್ನಲಾಗುತ್ತದೆ. ಕಣಿ ಎಂದರೆ ಶ್ರೇಯಸ್ಸು, ಶಕುನ, ಭವಿಷ್ಯ ಎಂಬ ಅರ್ಥಗಳೂ ಇವೆ. ಮನೆಯನ್ನು ಸಿಂಗರಿಸಿ ಹಿಂದಿನ ದಿನ ರಾತ್ರಿಯೇ ದೇವರ ವಿಗ್ರಹದ ಜತೆಗೆ ಕಣಿಯ ಸಾಮಗ್ರಿಗಳನ್ನು ಇರಿಸಿ ನವ ಧಾನ್ಯಗಳು, ಬಟ್ಟೆಬರೆ, ಬಂಗಾರದ ಆಭರಣ, ಫಲವಸ್ತುಗಳು ಇತ್ಯಾದಿಗಳೊಂದಿಗೆ ಸಾಂಪ್ರದಾಯಿಕ ಶೈಲಿಯಲ್ಲಿ ಪಾತ್ರೆಯಲ್ಲಿ ಬೆಳ್ತಿಗೆ ಅಕ್ಕಿ, ತೆಂಗಿನಕಾಯಿ ಮತ್ತು ಕನ್ನಡಿ ಇರಿಸಿ ಕಣಿಯನ್ನು ಸಿದ್ಧಪಡಿಸಲಾಗುತ್ತದೆ. ಎಲ್ಲರೂ ಬೆಳಗಿನ ಜಾವವೇ ಎದ್ದು, ಮಿಂದು ಹೊಸಬಟ್ಟೆ ಧರಿಸಿ ಗುರುಹಿರಿಯರಿಗೆ ವಂದಿಸಿ ನಂತರ ಕಣಿ ದರ್ಶನ ಪಡೆದು ಕೃತಾರ್ಥರಾದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.