ಕುಳೂರು ಕ್ರಿಯೇಷನ್ ಅರ್ಪಿಸುವ ಕಿರುಚಿತ್ರದ ಪೋಸ್ಟರ್ ಬಿಡುಗಡೆ
Team Udayavani, Sep 25, 2020, 2:01 AM IST
ಮಂಜೇಶ್ವರ: ಕುಳೂರು ಕ್ರಿಯೇಷನ್ ಬ್ಯಾನರಡಿಯಲ್ಲಿ ಕಿರುಚಿತ್ರವೊಂದು ತಯಾರಾಗಿದ್ದು ಇದರ ಪೋಸ್ಟರ್ ಬಿಡುಗಡೆ ನಡೆಯಿತು.
‘ಕಂಟಕ’ ಎಂಬ ಈ ಕಿರುಚಿತ್ರಕ್ಕೆ ಮೋಹನ್ ಶೆಟ್ಟಿ ಮಜ್ಜಾರ್ ಬಂಡವಾಳ ಹಾಕುತ್ತಿದ್ದು ಇದರ ಚಿತ್ರೀಕರಣ ಕುಳೂರಿನ ಸುತ್ತಮುತ್ತಲ ಪ್ರದೇಶದಲ್ಲಿ ನಡೆದಿದೆ.
ಈ ಕಿರುಚಿತ್ರಕ್ಕೆ ಜಯರಾಜ್ ಶೆಟ್ಟಿ ಚಾರ್ಲ ಕಥೆ ರಚಿಸಿದ್ದು, ಸಂಭಾಷಣೆ ಹಾಗೂ ನಿರ್ದೇಶನವನ್ನು ಪುಷ್ಪರಾಜ್ ಶೆಟ್ಟಿ ಕುಳೂರು, ಚಿತ್ರಕಥೆ ಹಾಗೂ ಅಸೋಶಿಯೇಟ್ ನಿರ್ದೇಶಕರಾಗಿ ಶಶಿಕುಮಾರ್ ಕುಳೂರು, ಪ್ರೊಡಕ್ಷನ್ ಮೆನೇಜರ್ ಆಗಿ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯ ನಿರ್ವಹಿಸಿರುವರು.
ಬಾತು ಕುಲಾಲ್ರವರ ಕ್ಯಾಮೆರಾ ಕೈಚಳಕ ಹಾಗೂ ಎಡಿಟಿಂಗ್, ನಾಗಾರ್ಜುನ್ ಮಂಗಲ್ಪಾಡಿಯವರ ಡಬ್ಬಿಂಗ್ನಲ್ಲಿ ಈ ಕಿರು ಚಿತ್ರ ಮೂಡಿಬರಲಿದೆ.
ಈ ಕಿರು ಚಿತ್ರದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮದಲ್ಲಿ ವಾರ್ಡ್ ಸದಸ್ಯೆ ಚಂದ್ರಾವತಿ ವಿ.ಪಿ. ಅವರು ಪೋಸ್ಟರನ್ನು ಕುಳೂರು ಶಾಲಾ ಮುಖ್ಯೋಪಾಧ್ಯಾಯರಾದ ಸತ್ಯನಾರಾಯಣ ಶರ್ಮರವರಿಗೆ ಹಸ್ತಾಂತರಿಸಿದರು.
ಬಳಿಕ ಪೋಸ್ಟರನ್ನು ಬಿಡುಗಡೆ ಮಾಡಿದ ಸತ್ಯನಾರಾಯಣ ಶರ್ಮರವರು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮೊಹಮ್ಮದ್ ಕಂಚಿಲರವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ, ಪುಷ್ಪರಾಜ್ ಕುಳೂರು ಉಪಸ್ಥಿತರಿದ್ದರು. ಅಧ್ಯಾಪಕ ಜಯಪ್ರಶಾಂತ್ ಪಾಲೆಂಗ್ರಿ ಸ್ವಾಗತಿಸಿದರು. ಶಶಿಕುಮಾರ್ ಕುಳೂರು ವಂದಿಸಿದರು. ಈ ಕಿರು ಚಿತ್ರ ಅತೀ ಶೀಘ್ರದಲ್ಲಿ ಬಿಡುಗಡೆಗೊಳ್ಳಲಿದ್ದು, ‘ಕುಳೂರು ಕ್ರಿಯೇಷನ್’ನ ಚೊಚ್ಚಲ ಕಾಣಿಕೆಯಾಗಿದ್ದು, ಎಲ್ಲರ ಸಹಕಾರವನ್ನು ಚಿತ್ರ ತಂಡ ವಿನಂತಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ