ಕಾಸರಗೋಡು: ಬತ್ತಿದ ಭತ್ತದ ಗದ್ದೆ; ಕೃಷಿಕರು ಕಂಗಾಲು


Team Udayavani, Jul 7, 2019, 5:26 AM IST

kangalu-1

ಬದಿಯಡ್ಕ: ತಡವಾಗಿ ಪ್ರಾರಂಭವಾದ ಮುಂಗಾರುಮಳೆ ರೈತರಲ್ಲಿ ಮೂಡಿಸಿದ ನಿರೀಕ್ಷೆ ಇಂದು ಬಿಸಿಲಲ್ಲಿ ಒಣಗಿ ಹೋಗುತ್ತಿದ್ದು ನಿರೀಕ್ಷೆಯ ಕಂಗಳಲ್ಲಿ ನಿರಾಸೆಯ ಕಣ್ಣೀರು ಸುರಿಯುವಂತೆ ಮಾಡಿದೆ. ಮಳೆ ಪ್ರಾರಂಭವಾದಂತೆ ಉತ್ತಮ ಮಳೆ-ಬೆಳೆಯ ನಿರೀಕ್ಷೆಯೊಂದಿಗೆ ಭತ್ತ ಕೃಷಿ ಆರಂಭಿಸಿದ ಕೃಷಿಕರು ನೀರಿಲ್ಲದೆ ಸಂದಿಗ್ಧತೆಯಲ್ಲಿ ಸಿಲುಕಿದ್ದಾರೆ. ಬೆಳೆದು ನಿಂತ ಭತ್ತದ ಹುಲ್ಲು(ನೇಜಿ) ಗಳನ್ನು ತೆಗೆದು ಗದ್ದೆಯಲ್ಲಿ ನಾಟಿ ಮಾಡುವ ಸಮಯವಾದರೂ ನೀರಿನ ಕೊರತೆಯಿಂದ ಗದ್ದೆಯ ಉಳುಮೆ ಹಾಗೂ ನಾಟಿ ಕೆಲಸ ಅರ್ಧದಲ್ಲೇ ಉಳಿದಿದ್ದು ಮಳೆ ಪ್ರಾರಂಭವಾದರೆ ಮಾತ್ರ ಇದನ್ನು ಮುಂದುವರಿಸಲು ಸಾಧ್ಯ.

ಮೋಟಾರ್‌ ಬಳಸಿ ಗದ್ದೆ ಕೃಷಿ

ನೀರ್ಚಾಲು, ಏಣಿಯರ್ಪು ಸೇರಿದಂತೆ ಜಿಲ್ಲೆಯ ಹಲವೆಡೆಗಳಲ್ಲಿ ನೇಜಿ ನೆಡುವ ಕೆಲಸ ಬಹುತೇಕ ಪೂರ್ತಿಗೊಂಡಿದೆ. ಮಳೆ ಇಲ್ಲದಿದ್ದರೂ ಮೋಟಾರ್‌ ಬಳಸಿ ಗದ್ದೆಗೆ ನೀರು ಹಾಯಿಸಿ ಕೃಷಿಕೆಲಸವನ್ನು ಮಾಡಲಾಗಿದೆ. ಆದರೆ ಬೇಳ, ಕೋಡಿಂಗಾರು, ವಿದ್ಯಾಗಿರಿ ಸೇರಿದಂತೆ ಜಿಲ್ಲೆಯಾದ್ಯಂತ ಮೋಟಾರ್‌ ಬಳಸಿ ನೀರು ಹಾಯಿಸಿ ಕೆಲಸ ಮುಂದುವರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಸುಡುಬಿಸಿಲ ಬೇಗೆ

ರಾತ್ರಿ ಕಾಲದಲ್ಲಿ ಸುರಿಯುವ ಸಣ್ಣ ಪುಟ್ಟ ಮಳೆಯ ನೀರನ್ನು ಹಗಲಿನ ಸುಡುಬಿಸಿಲು ಸಂಪೂರ್ಣವಾಗಿ ಹೀರಿಬಿಡುತ್ತದೆ. ಆದುದರಿಂದ ಗದ್ದೆಗಳಿಗೆ ನೀರು ಹಾಯಿಸುವುದು ಒಂದು ಸವಾಲಾಗಿದೆ.

ಎಷ್ಟೇ ನೀರು ಹಾಯಿಸಿದರೂ ಮಣ್ಣು ಹೀರಿಕೊಳ್ಳುವ ಕಾರಣ ಹೆಚ್ಚು ಹೆಚ್ಚು ನೀರು ಹಾಯಿಸಬೇಕಾದ ಅಗತ್ಯವಿದೆ. ಇದು ಹೆಚ್ಚು ಖರ್ಚಿಗೂ ದಾರಿಯಾಗುತ್ತಿದ್ದು ಈ ಬಾರಿ ಬೆಳೆಯಲ್ಲಿ ಉಂಟಾಗಬಹುದಾದ ಕುಸಿತದ ಭಯವಿರುವ ಕೃಷಿಕರಿಗೆ ಇದೊಂದು ಸವಾಲಾಗಿ ಪರಿಣಮಿಸಿದೆ.

ಅಕ್ಕಿ ಬೆಲೆ ಹೆಚ್ಚಬಹುದೇ?

ಈಗಾಗಲೇ ಅಕ್ಕಿ ಬೆಲೆ ಗಗನಕ್ಕೇರಿದೆ. ಈ ಬಾರಿಯ ಮಳೆ-ಬೆಳೆ ಸಮಸ್ಯೆ ಮುಂದಿನ ದಿನಗಳಲ್ಲಿ ಬಡವರ ಅನ್ನಕ್ಕೆ ಕಲ್ಲು ಹಾಕಲಿದೆಯೇ ಎಂಬ ಸಂದೇಹ ಮೂಡುತ್ತದೆ,

ಮಳೆ ಬಂದರೆ ಭತ್ತ ಬೆಳೆ

ಜಿಲ್ಲೆಯ ಇನ್ನು ಕೆಲವು ಭಾಗಗಳಲ್ಲಿ ಭತ್ತದ ಕೃಷಿ ಇನ್ನೂ ಆರಂಭವಾಗಿಲ್ಲ. ಉತ್ತಮ ಮಳೆ ಬಂದ ಅನಂತರವೇ ನೇಜಿ ಹಾಕುವ, ಬಿತ್ತನೆ ಮಾಡುವ ಕೆಲಸ ಆರಂಭಿಸುವುದಾಗಿ ನಿರ್ಧರಿಸಿರುವ ರೈತರು ಮಳೆಗಾಗಿ ಕಾಯುತ್ತಿದ್ದಾರೆ. ಕಾಲದೊಂದಿಗೆ ಬದಲಾಗುವ ಮಳೆ ಬೆಳೆ ಜನಸಾಮಾನ್ಯನ ನಿತ್ಯ ಬದುಕಿನ ಮೇಲೆ ಬೀರುವ ಪರಿಣಾಮ ಅಷ್ಟಿಷ್ಟಲ್ಲ.

ಜಿಲ್ಲೆಯಲ್ಲಿ ಅತೀ ಕಡಿಮೆ ಮಳೆ

ಕಾಸರಗೋಡು ಜಿಲ್ಲೆಯಲ್ಲಿ ಅತೀ ಕಡಿಮೆ ಮಳೆಯಾಗಿರುವುದು ಇಲ್ಲಿನ ಕೃಷಿಕರನ್ನು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಜೂನ್‌ ತಿಂಗಳಲ್ಲಿ ಕಡಿಮೆಯಾದರೂ ಮುಂದೆ ಹೆಚ್ಚು ಮಳೆ ಸುರಿಯಬಹುದೆಂಬ ಊಹೆಯಿಂದ ಹಲವೆಡೆಗಳಲ್ಲಿ ಕೃಷಿಕರು ಭತ್ತದ ಕೃಷಿ ಆರಂಭಿಸಿದ್ದಾರೆ. ಆದರೆ ಜುಲೈ ಮಾಸ ಪ್ರಾರಂಭವಾದರೂ ಮಳೆ ಬಿರುಸುಗೊಳ್ಳದಿರುವುದು ವ್ಯಾಪಕ ಆತಂಕಕ್ಕೆ ಕಾರಣವಾಗಿದೆ. ಸೌಲಭ್ಯ ಇರುವ ಕಡೆಗಳಲ್ಲಿ ಮೋಟಾರು ಮೂಲಕ ನೀರು ಹಾಯಿಸಿ ಗದ್ದೆ ಕೆಲಸ ಮಾಡಲಾಗುತ್ತಿದೆ. ಬೀಜ ಬಿತ್ತಿ 20-25ದಿನಗಳೊಳಗೆ ನೇಜಿ ತೆಗೆದು ಗದ್ದೆ ಉತ್ತು ಮತ್ತೆ ನಾಟಿ ಮಾಡಬೇಕು. ಇಲ್ಲವಾದಲ್ಲಿ ಫಸಲು ಕಡಿಮೆಯಾಗುತ್ತದೆ. ಆದರೆ ಈ ವರ್ಷ ನೇಜಿ ನೆಡಲು ಅಗತ್ಯವಾದ ಮಳೆ ಸುರಿಯದಿರುವುದು ಕೃಷಿಕರನ್ನು ಸಂಕಷ್ಟಕ್ಕೀಡು ಮಾಡಿದೆ.
ಲಾಭಕ್ಕಿಂತ ನಷ್ಟವೇ ಹೆಚ್ಚು

ಕಾರ್ಮಿಕರ ಕೊರತೆ, ಸರಕಾರದಿಂದ ಸೂಕ್ತ ಸೌಲಭ್ಯಗಳು ದೊರೆಯದಿರುವುದು, ಹೆಚ್ಚಾಗುತ್ತಿರುವ ಖರ್ಚು ಈಗಾಗಲೇ ಕೃಷಿಕರನ್ನು ಭತ್ತದ ಕೃಷಿಯಿಂದ ಹಿಂಜರಿಯುವಂತೆ ಮಾಡಿದೆ. ಕೆಲವೆಡೆಗಳಲ್ಲಿ ಭತ್ತದ ಗದ್ದೆಯಲ್ಲಿ ತೆಂಗು, ಕಂಗು ಬೆಳೆದಿರುವುದು ಕಾಣಬಹುದು.
– ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.