Kasaragod ಬಸ್ ಮಗುಚಿ ಬಿದ್ದು ಚಾಲಕನ ಸಾವು : 20 ಮಂದಿಗೆ ಗಾಯ
Team Udayavani, Mar 20, 2024, 12:43 AM IST
ಕಾಸರಗೋಡು: ಪೆರಿಯ ಚಾಲಿಂಗಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ಸೊಂದು ಮಗುಚಿ ಬಿದ್ದು ಚಾಲಕ ಸಾವಿಗೀಡಾಗಿ, ವಿದ್ಯಾರ್ಥಿಗಳು ಸಹಿತ 20 ಮಂದಿ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ. ಚಾಲಕ ಮನ್ನಿಪ್ಪಾಡಿ ಧೂಮಾವತಿ ರಸ್ತೆ ನಿವಾಸಿ ಚೇತನ್ ಕುಮಾರ್ (37) ಸಾವಿಗೀಡಾದರು.
ಮಂಗಳೂರಿನಿಂದ ಕಣ್ಣೂರಿಗೆ ಪ್ರಯಾಣಿಸುತ್ತಿದ್ದಾಗ ಪುಲ್ಲೂರು-ಪೆರಿಯ ಪಂಚಾಯತ್ ಕಚೇರಿ ಸಮೀಪದಲ್ಲಿ ಮಗುಚಿ ಬಿದ್ದಿದೆ. ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ಧಿ ಅಂಗವಾಗಿ ಟೋಲ್ ಬೂತ್ ಸ್ಥಾಪಿಸುವ ಅಂಗವಾಗಿ ಚಾಲಿಂಗಾಲ್ ಮೊಟ್ಟದಲ್ಲಿ ರಸ್ತೆ ತಿರುವು ನೀಡಲಾಗಿತ್ತು. ಇಲ್ಲಿನ ತಿರುವಿನಲ್ಲಿ ಬಸ್ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದು, ಬಸ್ಸಿನಡಿನಲ್ಲಿ ಸಿಕ್ಕಿ ಹಾಕಿಕೊಂಡಿದ್ದವರನ್ನು ಅಗ್ನಿಶಾಮಕ ದಳ, ಪೊಲೀಸರು ಹಾಗು ಸ್ಥಳೀಯರು ಸೇರಿ ಮೇಲೆಕ್ಕೆತ್ತಿದ್ದರು. ಸಣ್ಣ ಪುಟ್ಟ ಗಾಯಗೊಂಡ ವಿದ್ಯಾರ್ಥಿಗಳ ಸಹಿತ 20 ಮಂದಿ ಪ್ರಯಾಣಿಕರನ್ನು ಕಾಂಞಂಗಾಡ್ನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು