ಕಾಸರಗೋಡು ಭಾಗದ ಅಪರಾಧ ಸುದ್ದಿಗಳು


Team Udayavani, Aug 3, 2019, 5:13 AM IST

Crime-545

ಕಣ್ಣೂರು ವಿಮಾನ ನಿಲ್ದಾಣದಲ್ಲಿ
ಮತ್ತೆ ವಿದೇಶಿ ಕರೆನ್ಸಿ ವಶಕ್ಕೆ
ಕಾಸರಗೋಡು: ಕಣ್ಣೂರು ವಿಮಾನ ನಿಲ್ದಾಣದಲ್ಲಿ ಮತ್ತು ಪ್ರಯಾಣಿಕರಿಂದ ವಿದೇಶಿ ಕರೆನ್ಸಿಯನ್ನು ವಶಪಡಿಸಿಕೊ ಳ್ಳ‌ಲಾಗಿದೆ.

ಕಲ್ಲಿಕೋಟೆ ಕುರುವಂದೇರಿ ನಿವಾಸಿ ಅಬ್ದುಲ್ಲ ಕುಣಿಯಿಲ್‌(36) ಮತ್ತು ಪತ್ನಿ ಅಸ್ಲಾಮಿ (26) ಅವರಿಂದ 75,000 ಯು.ಎ.ಇ. ದಿರಂ ವಶಪಡಿಸಲಾಗಿದೆ. ಇದರ ಒಟ್ಟು ಮೌಲ್ಯ 13.61 ಲಕ್ಷ ರೂ. ಆಗಿದೆ. ಗೋ ಏರ್‌ನಲ್ಲಿ ದುಬಾೖಗೆ ತೆರಳಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಅಬ್ದುಲ್ಲ ಅವ‌ರಿಂದ 50 ಸಾವಿರ, ಅಸ್ಲಾಮಿಯಿಂದ 25 ಸಾವಿರ ದಿರಂ ಪತ್ತೆಯಾಯಿತು.

ಸಿ.ಐ.ಎಸ್‌.ಎಫ್‌ ಮತ್ತು ಕಸ್ಟಂಸ್‌ ಅಧಿಕಾರಿಗಳು ನಡೆಸಿದ ತಪಾಸಣೆಯ ಸಂದರ್ಭದಲ್ಲಿ ವಿದೇಶಿ ಕರೆನ್ಸಿ ಪತ್ತೆಯಾಗಿದ್ದು, ವಶಪಡಿಸಲಾಗಿದೆ. ಈ ಸಂಬಂಧ ಇವರ ವಿರುದ್ಧ ಕೇಸು ದಾಖಲಿಸಲಾಗಿದೆ. ಕಳೆದ ಮೂರು ದಿನಗಳಿಂದ ಐದು ಪ್ರಕರಣಗಳು ದಾಖಲಾಗಿದ್ದು, 29.30 ಲಕ್ಷ ರೂ. ಯ ವಿದೇಶಿ ಕರೆನ್ಸಿಯನ್ನು ವಶಪಡಿಸಲಾಗಿದೆ.

ಮನೆಯಿಂದ ಚಿನ್ನಾಭರಣ ಕಳವು
ಕಾಸರಗೋಡು: ಹೊಸದುರ್ಗ ಮಾಣಿಕೋತ್ತ್ನ ಜನವಾಸವಿಲ್ಲದ ಮನೆಯಿಂದ 25 ಪವನ್‌ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ.

ಕೊಲ್ಲಿ ಉದ್ಯೋಗಿ ಅರವಿಂದನ್‌ ಅವರ ಮನೆಯಿಂದ ಕಳವು ನಡೆದಿದ್ದು, ಅವರ ತಂದೆ ಅಪ್ಪಕುಂಞಿ ಅವರು ಹೊಸದುರ್ಗ ಪೊಲೀಸರಿಗೆ ದೂರು ನೀಡಿದ್ದಾರೆ.

2011ರಲ್ಲಿ ಅರವಿಂದನ್‌ ಕೊಲ್ಲಿಗೆ ಹೋಗಿದ್ದರು. ಅಂದಿನಿಂದ ಅವರ ಮನೆಗೆ ಬೀಗ ಜಡಿಯಲಾಗಿದೆ. ಮನೆಯ ಹಿಂಬದಿಯ ಕಿಟಕಿ ಸರಳನ್ನು ಮುರಿದು ಕಳ್ಳರು ಒಳ ಪ್ರವೇಶಿಸಿ ಕಳವು ಮಾಡಲಾಗಿದೆ.

ಲಾಟರಿ ಸ್ಟಾಲ್‌ಗೆ ಬೆಂಕಿ
ಉಪ್ಪಳ: ಇಲ್ಲಿನ ಬಸ್‌ ನಿಲ್ದಾಣದ ಶೌಚಾಲಯದ ಬಳಿ ಇರುವ ಲಾಟರಿ ಸ್ಟಾಲ್‌ಗೆ ಬೆಂಕಿ ಹಚ್ಚಲಾಗಿದೆ. ಸ್ಟಾಲ್‌ ಉರಿಯುತ್ತಿರುವುದನ್ನು ಕಂಡು ಪರಿಸರದ ವ್ಯಾಪಾರಿಗಳು ಮತ್ತು ಸ್ಥಳೀಯರು ಸೇರಿ ಬೆಂಕಿಯನ್ನು ಆರಿಸಿದ್ದಾರೆ. ಈ ಬಗ್ಗೆ ಮಂಜೇಶ್ವರ ಪೊಲೀಸರಿಗೆ ದೂರು ನೀಡಲಾಗಿದೆ.

17 ಬಾಟ್ಲಿ ಮದ್ಯ ವಶಕ್ಕೆ
ಅಡೂರು: ಇಲ್ಲಿನ ನಾಗತ್ತಮೂಲೆಯ ಮನೆಯೊಂದ ರಿಂದ 180 ಮಿ.ಲೀ. ನ 17 ಬಾಟ್ಲಿ ವಿದೇಶಿ ಮದ್ಯವನ್ನು ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ನಾಗತ್ತ ಮೂಲೆಯ ಚಂದ್ರ (30) ವಿರುದ್ಧ ಕೇಸು ದಾಖಲಿಸಲಾಗಿದೆ.

ನಕಲಿ ದಾಖಲೆ ನೀಡಿ ಬ್ಯಾಂಕ್‌ನಿಂದ
ಸಾಲ: ಕೇಸು ದಾಖಲು
ಕಾಸರಗೋಡು: ಸೊತ್ತಿನ ದಾಖಲೆಗಳ ನಕಲು ಪ್ರತಿ ಗ ಳನ್ನು ತೋರಿಸಿ ವಿವಿಧ ಬ್ಯಾಂಕ್‌ಗಳಿಂದ ಸಾಲ ಪಡೆದ ವ್ಯಕ್ತಿಯ ವಿರುದ್ಧ ನಗರಠಾಣೆ ಪೊಲೀಸರು ಕೇಸು ದಾಖಲಿಸಿದ್ದಾರೆ.

ಕರಂದಕ್ಕಾಡ್‌ನ‌ ಎಸ್‌ಬಿಐ ಬ್ಯಾಂಕ್‌ನ ಮ್ಯಾನೇಜರ್‌ ಪ್ರದೀಪ್‌ ಕುಮಾರ್‌ ದೂರು ನೀಡಿದ್ದು, ಬದಿಯಡ್ಕ ಬಳಿಯ ಕಜಂಪಾಡಿ ನಿವಾಸಿ ಅಚ್ಯುತ ಭಟ್‌ ಅವರ ಪುತ್ರ ಕೆ. ಸಂತೋಷ್‌(33) ವಿರುದ್ಧ ಪೊಲೀಸರು ಕೇಸು ದಾಖಲಿಸಿದ್ದಾರೆ.

ಈತ 2014ರ ಸೆ. 19ರಿಂದ ವಿವಿಧ ದಿನಗಳಲ್ಲಾಗಿ ನಕಲಿ ದಾಖಲೆಪತ್ರ ತೋರಿಸಿ 11 ಲಕ್ಷ ರೂ. ವರೆಗೆ ಸಾಲ ಪಡೆದಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಳವು : ಮೂವರ ಬಂಧನ
ಕಾಸರಗೋಡು: ಎರಡು ಅಂಗಡಿಗಳಿಗೆ ನುಗ್ಗಿ ಅಡಿಕೆ, ನಗದು ಇತ್ಯಾದಿಗಳನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಣ್ಣೂರು ಪುಲಿಕುರಂಬದ ತೊರಪ್ಪನ್‌ ಸಂತೋಷ್‌ (34), ಕಣ್ಣೂರು ಇರಿಟ್ಟಿಯ ಅಚ್ಚಾನ್‌ ಕುನ್ನಿನ ಮುನೀರ್‌ ಯಾನೆ ಬಾಬು (27) ಮತ್ತು ಕಣ್ಣೂರು ಅರಳಂನ ರಂಜು ರಾಜನ್‌ (24)ನನ್ನು ರಾಜಪುರಂ ಪೊಲೀಸರು ಬಂಧಿಸಿದ್ದಾರೆ.

2019ರ ಜೂ. 24ರಂದು ರಾಜಪುರಂ ಒಡಯಂಚಾಲ್‌ನ ಅಯರಾಟ್‌ ಬಾಲನ್‌ ಅವರ ಅಂಗಡಿಯಿಂದ ನಾಲ್ಕುವರೆ ಕಿಲೋ ಅಡಿಕೆ, ಒಂದೂವರೆ ಕ್ವಿಂಟಾಲ್‌ ಕಾಳು ಮೆಣಸು ಮತ್ತು ಒಂದು ಲಕ್ಷ ರೂ. ಕಳವು ಮಾಡಿದ ಮತ್ತು ಅಲ್ಲೇ ಪಕ್ಕದ ಜೋಸೆಫ್‌ ಅವರ ಅಂಗಡಿಯಿಂದ ದಿನಸಿ ಸಾಮಗ್ರಿಗಳನ್ನು ಕಳವು ಮಾಡಿದ ಪ್ರಕರಣದ ಆರೋಪಿಗಳಾಗಿದ್ದಾರೆ.

ಕೊಲೆ: ದೋಷಾರೋಪ ಪಟ್ಟಿ ಸಲ್ಲಿಕೆ
ಕಾಸರಗೋಡು: ಮೂಲತಃ ಮೊಗ್ರಾಲ್‌ ಪುತ್ತೂರು ಬಳ್ಳಿàರ್‌ ನಿವಾಸಿ ಹಾಗೂ ತೆಕ್ಕಿಲ್‌ ಬೇವಿಂಜೆ ಸ್ಟಾರ್‌ ನಗರದಲ್ಲಿ ವಾಸಿಸುತ್ತಿದ್ದ ಮೊಹಮ್ಮದ್‌ ಕುಂಞಿ (32) ಅವರನ್ನು ಕುತ್ತಿಗೆ ಬಿಗಿದು ಕೊಲೆಗೈದು ಮೃತದೇಹವನ್ನು ಹೊಳೆಗೆಸೆದ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಡಿ.ಸಿ.ಆರ್‌.ಬಿ. ಡಿವೈಎಸ್‌ಪಿ ಜೈಸನ್‌ ಅಬ್ರಹಾಂ ಕಾಸರಗೋಡು ಪ್ರಥಮ ದರ್ಜೆ ಮೆಜಿಸ್ಟ್ರೇಟ್‌ ನ್ಯಾಯಾಲಯ (1)ಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಕೊಲೆಗೈಯ್ಯಲ್ಪಟ್ಟ ಮೊಹಮ್ಮದ್‌ ಕುಂಞಿಯ ಪತ್ನಿ ಬೇವಿಂಜೆ ಸ್ಟಾರ್‌ನಗರ ನಿವಾಸಿ ಸಕೀನಾ (35) ಮತ್ತು ಆಕೆಯ ಸ್ನೇಹಿತ ಆಸ್ತಿ ಬ್ರೋಕರ್‌ ಮೂಲತಃ ಮುಳಿಯಾರು ಬೋವಿಕ್ಕಾನ ಆಲನಡ್ಕ ನಿವಾಸಿ ಎನ್‌.ಎ. ಉಮ್ಮರ್‌ (41) ಮತ್ತು ಸಕೀನಾಳ 16 ವರ್ಷ ಪ್ರಾಯದ ಪುತ್ರ ಕೊಲೆ ಪ್ರಕರಣದ ಆರೋಪಿಗಳಾಗಿದ್ದಾರೆ.

ಪುತ್ರ ಅಪ್ರಾಪ್ತ ವಯಸ್ಕನಾಗದ ಕಾರಣ ಆತನ ಮೇಲಿನ ಕೇಸನ್ನು ಪ್ರತ್ಯೇಕಿಸಿ ಜುವೆನೈಲ್‌ ನ್ಯಾಯಾಲಯಕ್ಕೆ ವಹಿಸಲಾಗಿದೆ.

ಟಾಪ್ ನ್ಯೂಸ್

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.