Crime News: ಕಾಸರಗೋಡು ಅಪರಾಧ ಸುದ್ದಿಗಳು
Team Udayavani, May 9, 2024, 7:47 PM IST
ಮಿನಿ ಟೆಂಪೋ ಢಿಕ್ಕಿ: ವ್ಯಕ್ತಿ ಸಾವು:
ಮಂಜೇಶ್ವರ: ರಸ್ತೆ ದಾಟುತ್ತಿದ್ದ ಮಧ್ಯ ವಯಸ್ಕರೋರ್ವರು ಟೆಂಪೋ ಢಿಕ್ಕಿ ಹೊಡೆದು ಸಾವಿಗೀಡಾದ ಘಟನೆ ನಡೆದಿದೆ.
ಉದ್ಯಾವರ ನಿವಾಸಿ ಅಬ್ದುಲ್ ಹಮೀದ್ (52) ಮೃತಪಟ್ಟವರು.
ಮೇ 8ರಂದು ರಾತ್ರಿ ಉದ್ಯಾವರ 10ನೇ ಮೈಲು ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡ್ಡದಾಟುತ್ತಿದ್ದಾಗ ಮಂಗಳೂರು ಭಾಗದಿಂದ ಬಂದ ಮಿನಿ ಟೆಂಪೋ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿ ಟೆಂಪೋವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಚಾಲಕನ ವಿರುದ್ಧ ಕೇಸು ದಾಖಲಿಸಿದ್ದಾರೆ.
ಹಿಂದಕ್ಕೆ ಚಲಿಸಿದ ಟಿಪ್ಪರ್: ವೃದ್ಧ ಸಾವು:
ಕಾಸರಗೋಡು: ಹಿಂದಕ್ಕೆ ಚಲಿಸಿದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದು ಕೋಳಿಚ್ಚಾಲ್ ಕರೋಟ್ಪುರದ ವರ್ಗೀಸ್ (96) ಮೃತಪಟ್ಟರು. ಕೋಳಿಚ್ಚಾಲ್ ಸೇತುವೆ ನಿರ್ಮಾಣ ನಡೆಯುವ ಸ್ಥಳದಲ್ಲಿ ಮಣ್ಣು ಇಳಿಸಿ ಹಿಂದಕ್ಕೆ ಚಲಿಸಿದ ಟಿಪ್ಪರ್ ವರ್ಗೀಸ್ ಅವರಿಗೆ ಢಿಕ್ಕಿ ಹೊಡೆಯಿತು. ಗಂಭೀರ ಗಾಯಗೊಂಡ ಅವರನ್ನು ಚೆರುಪುಳದ ಆಸ್ಪತ್ರೆಗೆ ತಲುಪಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ.
ರೈಲಿನಿಂದ ಬಿದ್ದು ಬಾಲಕನಿಗೆ ಗಾಯ:
ಕಾಸರಗೋಡು: ಮಂಗಳೂರಿನಿಂದ ಕಣ್ಣೂರಿಗೆ ಸಂಚರಿಸುತ್ತಿದ್ದ ರೈಲು ಗಾಡಿ ಕಳನಾಡು ಸುರಂಗ ದಾಟಿದ ಕೆಲವೇ ಕ್ಷಣದಲ್ಲಿ ತೃಕ್ಕರಿಪುರ ಪರಿಸರದ ನಿವಾಸಿ 17 ವರ್ಷದ ಬಾಲಕ ರೈಲು ಗಾಡಿಯಿಂದ ಬಿದ್ದು ಗಾಯಗೊಂಡಿದ್ದು, ಕಾಸರಗೋಡು ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆ ಮೇಲೆ ಮಗುಚಿದ ಕಾರು ಅಧ್ಯಾಪಕ, ಪತ್ನಿ ಅಪಾಯದಿಂದ ಪಾರು:
ಕಾಸರಗೋಡು: ನಿಯಂತ್ರಣ ತಪ್ಪಿದ ಕಾರೊಂದು ಮನೆ ಮೇಲೆ ಮಗುಚಿ ಬಿದ್ದ ಘಟನೆ ಅಟ್ಟೆಂಗಾನದಲ್ಲಿ ನಡೆದಿದೆ. ಮನೆಯ ಸನ್ಶಿàಟ್ನಲ್ಲಿ ನೇತಾಡುತ್ತಿದ್ದ ಕಾರಿನಿಂದ ಕೋಡೋಂ ಅಂಬೇಡ್ಕರ್ ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಅಧ್ಯಾಪಕ ಹರೀಶ್ (40) ಮತ್ತು ಪತ್ನಿಯನ್ನು ರಕ್ಷಿಸಲಾಯಿತು. ಕಾರಕ್ಕಡಿಯ ಸುಭಾಶ್ ಅವರ ಮನೆ ಮೇಲೆ ಕಾರು ಮಗುಚಿ ಬಿದ್ದಿತ್ತು.
ಬಾಲಕಿಗೆ ಬೆದರಿಕೆ : ಪೋಕ್ಸೋ ಕೇಸು ದಾಖಲು :
ಕಾಸರಗೋಡು: ಇನ್ಸ್ಟಾಗ್ರಾಂನಲ್ಲಿ ಪರಿಚಯಗೊಂಡ 16ರ ಹರೆಯದ ಬಾಲಕಿಯನ್ನು ಪುಸಲಾಯಿಸಿ ಆಕೆಯ ನಗ್ನ ಫೋಟೋ ಪಡೆದುಕೊಂಡು ಬ್ಲ್ಯಾಕ್ವೆುಮೇಲ್ ಹಾಗೂ ಬೆದರಿಕೆ ನೀಡುತ್ತಿದ್ದ ಕಾಸರಗೋಡು ನಿವಾಸಿ ಕೈಲಾಸ್ ವಿರುದ್ಧ ನೀಲೇಶ್ವರ ಪೊಲೀಸರು ಪೋಕ್ಸೋ ಕೇಸು ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.