Kasaragod ; ತಾಯಿ, ಪತ್ನಿಯ ಕೊಲೆಗೈದು ವ್ಯಕ್ತಿ ಆತ್ಮಹತ್ಯೆ


Team Udayavani, Feb 17, 2024, 10:05 PM IST

Kasaragod ; ತಾಯಿ, ಪತ್ನಿಯ ಕೊಲೆಗೈದು ವ್ಯಕ್ತಿ ಆತ್ಮಹತ್ಯೆ

ಕಾಸರಗೋಡು: ತಾಯಿ ಹಾಗೂ ಪತ್ನಿಯನ್ನು ಕೇಬಲ್‌ನಿಂದ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆಗೈದು ಮಧ್ಯವಯಸ್ಕ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಂಞಂಗಾಡ್‌ನ‌ ಮುತ್ತಪ್ಪನ್‌ ಕ್ಷೇತ್ರ ಸಮೀಪದ ಹಬೀಬ್‌ ಕ್ವಾರ್ಟರ್ಸ್‌ನಲ್ಲಿ ನಡೆದಿದೆ.

ಕಾಂಞಂಗಾಡ್‌ ಬಸ್‌ ನಿಲ್ದಾಣ ಪರಿಸರದಲ್ಲಿ ವಾಚ್‌ ವರ್ಕ್ಸ್ ಅಂಗಡಿ ನಡೆಸುತ್ತಿದ್ದ ಸೂರ್ಯಪ್ರಕಾಶ್‌ (55), ಪತ್ನಿ ಗೀತಾ (48) ಮತ್ತು ತಾಯಿ ಲೀಲಾ (93) ಅವರ ಮೃತದೇಹ ಮನೆಯೊಳಗೆ ಪತ್ತೆಯಾಗಿದೆ. ಕ್ವಾರ್ಟರ್ಸ್‌ನ ಎರಡು ಕೊಠಡಿಯಲ್ಲಿ ಲೀಲಾ ಹಾಗೂ ಗೀತಾ ಅವರ ಮೃತದೇಹ ಮಲಗಿದ ಸ್ಥಿತಿಯಲ್ಲಿ ಕಂಡು ಬಂದಿದೆ. ಸೂರ್ಯಪ್ರಕಾಶ್‌ ಅವರ ಮೃತದೇಹ ಅಡುಗೆ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿತ್ತು. ಆರ್ಥಿಕ ಹೊರೆ ಘಟನೆಗೆ ಕಾರಣವೆನ್ನಲಾಗಿದೆ.

ಸೂರ್ಯಪ್ರಕಾಶ್‌ ಬರೆದಿಟ್ಟಿದ್ದೆನ್ನಲಾದ ಪತ್ರವೊಂದು ಮನೆಯಲ್ಲಿ ಲಭಿಸಿದ್ದು, ಆರ್ಥಿಕ ಸ್ಥಿತಿ ಹದಗೆಟ್ಟ ಬಗ್ಗೆ ಇದರಲ್ಲಿ ಉಲ್ಲೇಖೀಸಲಾಗಿದೆ. ಕುತ್ತಿಗೆ ಬಿಗಿದ ಕೇಬಲ್‌ ಸ್ಥಳದಲ್ಲಿ ಪತ್ತೆಹಚ್ಚಲಾಗಿದೆ. ದಂಪತಿಗೆ ಮೂವರು ಮಕ್ಕಳಿದ್ದು, ಇಬ್ಬರು ಹೆಣ್ಣು ಮಕ್ಕಳನ್ನು ವಿವಾಹ ಮಾಡಿಕೊಡಲಾಗಿದೆ. ಪುತ್ರ ಅಜಯ್‌ ಉದ್ಯೋಗ ನಿಮಿತ್ತ ಎರ್ನಾಕುಳಂನಲ್ಲಿ ವಾಸವಾಗಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ಹೊಸದುರ್ಗ ಪೊಲೀಸರು ತಲುಪಿ ತನಿಖೆ ನಡೆಸಿದರು.

ಪುತ್ರನಿಗೆ ಕೊನೆಯ ಕರೆ
ಎರ್ನಾಕುಳಂನಲ್ಲಿರುವ ಪುತ್ರ ಅಜಯ್‌ ಅವರಿಗೆ ಫೋನ್‌ ಮಾಡಿ “ಅಜ್ಜಿ ಹಾಗೂ ತಾಯಿ ನಮ್ಮನ್ನು ಬಿಟ್ಟು ತೆರಳಿದ್ದು, ನಾನೂ ಅವರ ದಾರಿಯಲ್ಲಿ ಸಾಗುತ್ತೇನೆ’ ಎಂದು ಸಾವಿಗೆ ಮುನ್ನ ಕರೆ ಮಾಡಿ ತಿಳಿಸಿದ್ದರು. ಇದರಿಂದ ಗಾಬರಿಗೊಂಡ ಅಜಯ್‌ ನೆರೆಮನೆಯ ಗೆಳೆಯನಿಗೆ ಫೋನ್‌ ಮಾಡಿ ಮನೆಯತ್ತ ತೆರಳಿ ನೋಡಲು ತಿಳಿಸಿದ್ದಾರೆ. ಇದರಂತೆ ಗೆಳೆಯ ಹೋಗಿ ನೋಡಿದಾಗ ಮೂವರ ಮೃತದೇಹ ಕಂಡು ಬಂದಿದೆ. ಇದರಿಂದ ಘಟನೆ ಬಯಲಾಯಿತು.

ನೇಣು ಬಿಗಿದು ಮಹಿಳೆ ಆತ್ಮಹತ್ಯೆ
ಬದಿಯಡ್ಕ: ಮೂಲತಃ ಪುತ್ತೂರು ಕಡಬ ನಿವಾಸಿ ಹಾಗೂ ಅಡ್ಯನಡ್ಕ ಚವರ್ಕಾಡ್‌ನ‌ಲ್ಲಿ ವಾಸಿಸುತ್ತಿರುವ ನರಸಿಂಹ ಭಟ್‌ ಅವರ ಪುತ್ರಿ, ಭೀಮೇಶ್‌ ಅವರ ಪತ್ನಿ ವಿ. ವಿನುತಾ (36) ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದರೋಡೆ ಪ್ರಕರಣ : 7 ವರ್ಷ ಕಠಿನ ಸಜೆ, ದಂಡ
ಕಾಸರಗೋಡು: 2022ರ ಮಾರ್ಚ್‌ 9ರಂದು ಹಾಡುಹಗಲೇ ಹೊಸದುರ್ಗ ಕಾಞರಪೊಯಿಲಿನ ಅನಿಲ್‌ ಕುಮಾರ್‌ ಅವರ ಮನೆಗೆ ನುಗ್ಗಿ ಅವರ ಪತ್ನಿ ಬಿಜಿತಾ ಅವರ ತಲೆಗೆ ಹೊಡೆದು ಗಂಭೀರ ಗಾಯಗೊಳಿಸಿ ಅವರ ಮೈಮೇಲಿದ್ದ ಚಿನ್ನದ ಒಡವೆಗಳನ್ನು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದುರ್ಗ ಮಡಿಕೈಯ ಕರುಕ್ಕವಳಪ್ಪಿನ್‌ ಅಶೋಕನ್‌ (45)ಗೆ ಹೊಸದುರ್ಗ ಅಸಿಸ್ಟೆಂಟ್‌ ಸೆಶನ್ಸ್‌ ನ್ಯಾಯಾಲಯ 7 ವರ್ಷ ಸಜೆ ಹಾಗು 25 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ನೇಣು ಬಿಗಿದು
ಮಹಿಳೆ ಆತ್ಮಹತ್ಯೆ
ಕಾಸರಗೋಡು: ಹೊಸದುರ್ಗ ಮುತ್ತಪ್ಪನ್‌ ಕಾವು ಸಮೀಪದ ಬಾಡಿಗೆ ಮನೆಯೊಂದರಲ್ಲಿ ವಾಸಿಸುತ್ತಿರುವ ನಿಬಿನ್‌ ಅವರ ಪತ್ನಿ ಮಂಜು (27) ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಯುವಕನ ಕೊಲೆ ಪ್ರಕರಣ:
ತಲೆಮರೆಸಿಕೊಂಡ ಆರೋಪಿಗಳಿಗೆ ಶೋಧ
ಉಪ್ಪಳ: 2022ರ ಜೂನ್‌ 26ರಂದು ಪುತ್ತಿಗೆ ಮುಗುವಿನ ನಿವಾಸಿ, ಕೊಲ್ಲಿ ಉದ್ಯೋಗಿಯಾಗಿದ್ದ ಅಬೂಬಕರ್‌ ಸಿದ್ದಿಕ್‌ ಅವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿ ತಲೆಮರೆಸಿಕೊಂಡ ಆರು ಮಂದಿ ಆರೋಪಿಗಳಿಗಾಗಿ ಪೊಲೀಸರು ಶೋಧ ತೀವ್ರಗೊಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಬಂಧಿತ ಆರೋಪಿ ಅಬೂಬಕರ್‌ ಸಿದ್ದಿಕ್‌ ಯಾನೆ ನೂರ್‌ಶನನ್ನು ವಿಚಾರಣೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಮಹಿಳೆಯ ಕುತ್ತಿಗೆಯಿಂದ
ಎಗರಿಸಿದ್ದು ನಕಲಿ ಚಿನ್ನ !
ಬದಿಯಡ್ಕ: ಸ್ಕೂಟರ್‌ನಲ್ಲಿ ಬಂದ ವ್ಯಕ್ತಿಯೋರ್ವ ಪಾದಚಾರಿ ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿ ಪರಾರಿಯಾಗಿದ್ದು, ಈ ಸರ ನಕಲಿ ಚಿನ್ನವಾಗಿದೆ !

ನೀರ್ಚಾಲು ಪೂವಾಳೆಯ ಗಿರಿಜಾ (68) ಅವರ ಕುತ್ತಿಗೆಯಿಂದ ಸರ ಸೆಳೆದು ಪರಾರಿಯಾಗಿದ್ದಾನೆ.

ಗಿರಿಜಾ ರಸ್ತೆ ಬದಿ ನಡೆದು ಹೋಗುತ್ತಿದ್ದಾಗ ಈ ಘಟನೆ ನಡೆದಿದೆ.

ಈ ಸರವನ್ನು ಇತ್ತೀಚೆಗೆ 900 ರೂ. ನೀಡಿ ಖರೀದಿಸಿದ್ದಾಗಿದೆ ಎಂದು ತಿಳಿದು ಬಂದಿದೆ. ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.