ಕಾಸರಗೋಡು: ದಾರಿಯಲ್ಲಿ ಸಿಕ್ಕಿದ ಹಣ ಮರಳಿಸಿದ ಯುವಕರು
Team Udayavani, Jan 25, 2023, 5:45 AM IST
ಕಾಸರಗೋಡು: ರಸ್ತೆ ಬದಿಯಲ್ಲಿ ಬಿದ್ದು ಸಿಕ್ಕಿದ 50 ಸಾವಿರ ರೂ.ಗಳನ್ನು ಪೊಲೀಸರಿಗೆ ಹಸ್ತಾಂತರಿಸಿ ಯುವಕರು ಪ್ರಾಮಾಣಿಕತೆ ಮೆರೆದಿದ್ದಾರೆ.
ಕೆಪಿ ಆ್ಯಂಡ್ ಎಂಐ ಸೊಸೈಟಿಯ ನೌಕರ ಬ್ಯಾಂಕ್ನಿಂದ ಹಣವನ್ನು ಪಡೆದುಕೊಂಡು ಹೋಗುವಾಗ ಬಿದ್ದುಹೋಗಿತ್ತು. ಅದೇ ದಾರಿಯಲ್ಲಿ ಸಾಗುತ್ತಿದ್ದ ಚೆಮ್ನಾಡು ಅರಮಂಗಾನದ ಶಂಕರನ್ ಮತ್ತು ರೂಪೇಶ್ ಕೈಂದಾರ್ ಅವರಿಗೆ ಅದು ಲಭಿಸಿದ್ದು, ಕೂಡಲೇ ಕಾಸರಗೋಡು ನಗರ ಠಾಣೆಯ ಪೊಲೀಸರಿಗೆ ಹಸ್ತಾಂತರಿಸಿದರು.
ಈ ಮಧ್ಯೆ ಹಣ ಕಳೆದು ಹೋಗಿರುವ ಬಗ್ಗೆ ಸೊಸೈಟಿಯ ಕಾರ್ಯದರ್ಶಿ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟರಲ್ಲಿ ಯುವಕರ ಮೂಲಕ ಹಣ ಕೈಸೇರಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಳಿಕ ಹಣವನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.
ಯುವಕರ ಮಾದರಿ ಕಾರ್ಯವನ್ನು ಪೊಲೀಸರು, ಸೊಸೈಟಿಯ ಅ ಧಿಕಾರಿಗಳು ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್