![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
Kasaragod ವಿದ್ಯಾರ್ಥಿ ಸಾವು ಪ್ರಕರಣ: ಸರಕಾರದಿಂದ ಸ್ಪಷ್ಟೀಕರಣ ಕೇಳಿದ ಹೈಕೋರ್ಟ್
Team Udayavani, Apr 13, 2024, 9:14 PM IST
![Kasaragod ವಿದ್ಯಾರ್ಥಿ ಸಾವು ಪ್ರಕರಣ: ಸರಕಾರದಿಂದ ಸ್ಪಷ್ಟೀಕರಣ ಕೇಳಿದ ಹೈಕೋರ್ಟ್](https://www.udayavani.com/wp-content/uploads/2024/04/courts-1-620x421.jpg)
ಕಾಸರಗೋಡು: ಪೊಲೀಸರು ಹಿಂಬಾಲಿಸುತ್ತಿದ್ದ ವೇಳೆ ಕಾರು ಮಗುಚಿ ಬಿದ್ದು ವಿದ್ಯಾರ್ಥಿ ಸಾವಿಗೀಡಾದ ಘಟನೆ ಬಗ್ಗೆ ಹೈಕೋರ್ಟ್ ರಾಜ್ಯ ಸರಕಾರದಿಂದ ಸ್ಪಷ್ಟೀಕರಣ ಕೇಳಿದೆ.
ಕಳೆದ ವರ್ಷ ಆ.25ರಂದು ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ಲಸ್ ಟು ವಿದ್ಯಾರ್ಥಿ ಕುಂಬಳೆ ಪೇರಾಲ್ ಕಣ್ಣೂರು ನಿವಾಸಿ ಫರ್ಹಾಸ್(17) ಶಾಲೆಯಲ್ಲಿ ನಡೆದ ಓಣಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಸ್ನೇಹಿತರ ಜತೆ ಕಾರಿನಲ್ಲಿ ಮರಳುತ್ತಿದ್ದರು. ಆಗ ಆ ದಾರಿಯಾಗಿ ಬಂದ ಪೊಲೀಸರು ಯಾವುದೋ ಅನುಮಾನದಿಂದ ಆ ಕಾರನ್ನು ತಮ್ಮ ವಾಹನದಲ್ಲಿ ಹಿಂಬಾಲಿಸಿರುವುದಾಗಿ ಆರೋಪಿಸಲಾಗಿತ್ತು. ಆ ವೇಳೆ ಆ ಕಾರು ಅಪಘಾತಕ್ಕೀಡಾಗಿ ಅದರಲ್ಲಿದ್ದ ಫರ್ಹಾಸ್ ಗಂಭೀರ ಗಾಯಗೊಂಡು ಬಳಿಕ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೇ ಆ.29ರಂದು ಸಾವು ಸಂಭವಿಸಿತ್ತು.
ಆ ಘಟನೆಗೆ ಸಂಬಂಧಿಸಿ ಕಾರನ್ನು ಹಿಂಬಾಲಿಸಿದ ಪೊಲೀಸರ ವಿರುದ್ಧ ಇಲಾಖಾ ಮಟ್ಟದ ತನಿಖೆ ನಡೆಸಿ ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಮಾತ್ರವಲ್ಲದೆ, ನಷ್ಟ ಪರಿಹಾರವನ್ನೂ ನೀಡಬೇಕೆಂದು ಕೋರಿ ಮೃತ ಫರ್ಹಾಸ್ನ ತಾಯಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅದನ್ನು ಪರಿಶೀಲಿಸಿದ ಹೈಕೋರ್ಟ್ ಆ ಬಗ್ಗೆ ಸ್ಪಷ್ಟೀಕರಣ ನೀಡುವ ಅಫಿದವಿತ್ ಸಲ್ಲಿಸುವಂತೆ ರಾಜ್ಯ ಸರಕಾರದ ಕಾರ್ಯದರ್ಶಿ ಮತ್ತು ಕಾಸರಗೋಡು ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದೆ.
ಟಾಪ್ ನ್ಯೂಸ್
![Chikkamagaluru; ಮಲೆನಾಡು ಭಾಗದಲ್ಲಿ ವಾರದಿಂದ ಕರೆಂಟ್, ನೆಟ್ ವರ್ಕ್ ಇಲ್ಲ! ಜನರ ಪರದಾಟ](https://www.udayavani.com/wp-content/uploads/2024/07/chikka-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.