ಕಾಸರಗೋಡು: ಬಾಯಿಯೊಳಗಿತ್ತು 29 ಪವನ್‌ ಚಿನ್ನ


Team Udayavani, Nov 8, 2022, 7:23 AM IST

ಕಾಸರಗೋಡು: ಬಾಯಿಯೊಳಗಿತ್ತು 29 ಪವನ್‌ ಚಿನ್ನ

ಕಾಸರಗೋಡು: ಬಾಯಿಯೊಳಗೆ 29 ಪವನ್‌ ಚಿನ್ನಾಭರಣಗಳನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ಪೆರುಂಬಳ ನಿವಾಸಿಯನ್ನು ಕರಿಪೂರ್‌ ವಿಮಾನ ನಿಲ್ದಾಣದಿಂದ ಪೊಲೀಸರು ಬಂಧಿಸಿದ್ದಾರೆ. ಪೆರುಂಬಳ ನಿವಾಸಿ ಅಬ್ದುಲ್‌ ಅಪ್ಸಲ್‌ (24)ನನ್ನು ಬಂಧಿಸಲಾಗಿದೆ. ಆತ ದುಬಾೖಯಿಂದ ಕರಿಪೂರ್‌ ವಿಮಾನ ನಿಲ್ದಾಣಕ್ಕೆ ಬಂದಾಗ ಕಾರ್ಯಾಚರಣೆ ನಡೆಸಲಾಗಿದೆ. ನಾಲಗೆ ಅಡಿ ಭಾಗದಲ್ಲಿ 233 ಗ್ರಾಂ ಚಿನ್ನವನ್ನು ಎಂಟು ತುಂಡುಗಳನ್ನಾಗಿ ಬಚ್ಚಿಟ್ಟು ಸಾಗಾಟ ನಡೆಸಿರುವುದು ಪತ್ತೆಯಾಗಿದೆ.

ಅಪಘಾತ ನಡೆಸಿ ಅಪಹರಣ
ಕಾಸರಗೋಡು: ಇನ್ನೋವಾ ಕಾರಿನಲ್ಲಿ ಬೈಕನ್ನು ಹಿಂಬಾಲಿಸಿ ಕೊಂಡು ಬಂದ ತಂಡ ಕಾರನ್ನು ಬೈಕಿಗೆ ಢಿಕ್ಕಿ ಹೊಡೆಸಿ ಬೈಕಿನಲ್ಲಿದ್ದ ಯುವಕನನ್ನು ಅಪಹರಿಸಿದ್ದಾರೆೆ. ನ. 7ರಂದು ಬೆಳಗ್ಗೆ 7 ಗಂಟೆಗೆ ಕಾಸರ ಗೋಡು-ಕಾಂಞಂಗಾಡ್‌ ಕೆಎಸ್‌ಟಿಪಿ ರಸ್ತೆಯ ಚಳಿಯಂಗೋಡು ಕೋಟರುವದಲ್ಲಿ ಘಟನೆ ನಡೆದಿದೆ. ಕಾಸರಗೋಡಿನಿಂದ ಮೇಲ್ಪರಂಬಕ್ಕೆ ತೆರಳುತ್ತಿದ್ದ ಬೈಕನ್ನು ಮಹಾರಾಷ್ಟ್ರ ನೋಂದಣಿಯ ಕಾರು ಹಿಂಬಾಲಿಸಿಕೊಂಡು ಬಂದು ಬೈಕ್‌ಗೆ ಢಿಕ್ಕಿ ಹೊಡೆಸಿ ಸವಾರನನ್ನು ಅಪಹರಿಸಿದೆ. ಬೈಕ್‌ ಕುಂಡಂಕುಳಿ ನಿವಾಸಿಯದ್ದೆಂದು ತಿಳಿದುಬಂದಿದೆ. ಬೈಕನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಎಲ್ಲ ಠಾಣೆ ಗಳಿಗೆ ಮಾಹಿತಿ ನೀಡಲಾಗಿದೆ.

18 ಕೋಟಿ ರೂ. ದರೋಡೆ: ಬಂಧನ
ಕುಂಬಳೆ: ಕರ್ನಾಟಕದ ಯಲ್ಲಾಪುರದಲ್ಲಿ ವ್ಯಾಪಾರಿಗೆ ಹಲ್ಲೆ ಮಾಡಿ 18 ಕೋಟಿ ರೂ. ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಕುಂಬಳೆ ಶಿರಿಯಕುನ್ನು ನಿವಾಸಿ ಕಬೀರ್‌ (35)ನನ್ನು ಕುಂಬಳೆಯಿಂದ ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವನಿಗಾಗಿ ಶೋಧ ನಡೆಸುತ್ತಿದ್ದಾರೆ.

ಗಾಂಜಾ ಸೇವನೆ: ಇಬ್ಬರು ವಶಕ್ಕೆ
ಮಂಗಳೂರು: ರಥಬೀದಿ ಬಳಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಬಜಾಲ್‌ನ ಗಗನ್‌ (22) ಮತ್ತು ಜಲ್ಲಿಗುಡ್ಡೆಯ ವಿಜೀತ್‌ (21)ನನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ನ. 6ರ ರಾತ್ರಿ ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಪತಿ, ಸಂಬಂಧಿಕರಿಂದ ಹಲ್ಲೆ ; ದೂರು
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕುವೆಟ್ಟು ಗ್ರಾಮದ ಮದ್ದಡ್ಕ ಸಾರ್ಗ ಅಪಾರ್ಟ್‌ಮೆಂಟ್‌ನಲ್ಲಿ ಪತಿ ಹಾಗೂ ಸಂಬಂಧಿಕರಿಂದ ಪತ್ನಿಗೆ ಹಲ್ಲೆ ನಡೆದಿರುವ ಕುರಿತು ದೂರು ದಾಖಲಾಗಿದೆ.

ಫಾತಿಮಾ (29) ಹಲ್ಲೆಗೊಳಗಾದವರು. ಅವರ ಪತಿ ಮಹಮ್ಮದ್‌ ಸಾದಿಕ್‌ ಹಾಗೂ ಆತನ ತಂದೆ ಸಯ್ಯದ್‌ ಬ್ಯಾರಿ, ತಾಯಿ ಐಸಮ್ಮ, ತಂಗಿಯರಾದ ರಾಜಿಯಾ ಹಾಗೂ ಸಾಯಿದಾ ಸಹಿತ ಇತರರು ಹಲ್ಲೆ ನಡೆಸಿರುವುದಾಗಿ ದೂರಲಾಗಿದೆ.

ಫಾತಿಮಾ ಹಾಗೂ ಮಹಮ್ಮದ್‌ ಸಾದಿಕ್‌ 12 ವರ್ಷಗಳ ಹಿಂದೆ ವಿವಾಹವಾಗಿದ್ದು, ಪತಿ-ಪತ್ನಿಯರ ಮಧ್ಯೆ ಪರಸ್ಪರ ಸಣ್ಣ ಪುಟ್ಟ ವಿಚಾರಗಳಿಗೆ ಜಗಳವಾಗುತ್ತಿತ್ತು. ನ. 4ರಂದು ಅಪಾರ್ಟ್‌ಮೆಂಟ್‌ನ ಬಾಡಿಗೆ ಮನೆಯಲ್ಲಿದ್ದ ವೇಳೆ ಮನೆ ಕಟ್ಟಲು ತವರು ಮನೆಯಿಂದ ಹಣ ತರುವಂತೆ ಪತಿ ಹಾಗೂ ಪತಿಯ ಮನೆಮಂದಿ ಮನೆಯೊಳಗೆ ಏಕಾಏಕಿ ಪ್ರವೇಶಿಸಿ ಅವಾಚ್ಯ ಶಬ್ದಗಳಿಂದ ಬೈದಿದ್ದು, ಅತ್ತೆ ಹಾಗೂ ನಾದಿನಿಯವರು ಹಲ್ಲೆ ನಡೆಸಿರುವುದಾಗಿ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಮನೆ ಮಾರಾಟದ ವಿಚಾರ: ಆತ್ಮಹತ್ಯೆ
ಮಲ್ಪೆ: ಮನೆ ಮಾರಾಟದ ವಿಚಾರದಲ್ಲಿ ಪದೇ ಪದೇ ಜಗಳವಾಡುತ್ತಿದ್ದ ಮಲ್ಪೆ ತೆಂಕನಿಡಿಯೂರು ಗ್ರಾಮದ ರವಿ ಎಂ.ಎಸ್‌. ಅವರ ಪುತ್ರ ಸಾಗರ್‌ (20) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಂಬಲಪಾಡಿಯಲ್ಲಿ ಎನಿಮೆಶನ್‌ ಕೆಲಸ ಮಾಡಿಕೊಂಡಿದ್ದ ಆತನಿಗೆ ಮದ್ಯಪಾನ ಮಾಡುವ ಚಟವಿತ್ತು. ಸೋಮವಾರ ಮುಂಜಾನೆ ಬಚ್ಚಲು ಮನೆಯ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಗೋಳಿಯಂಗಡಿ: ಬೈಕ್‌ ಢಿಕ್ಕಿ; ವೃದ್ಧ ಸಾವು
ಸಿದ್ದಾಪುರ: ಬೆಳ್ವೆ ಗ್ರಾಮದ ಗೋಳಿಯಂಗಡಿ ಸುರಭಿ ಹೊಟೇಲ್‌ ಬಳಿಯ ಮಣ್ಣು ರಸ್ತೆಯಲ್ಲಿ ನಿಂತಿದ್ದ ರಾಮ ನಾಯ್ಕ (70) ಅವರಿಗೆ ಬೈಕ್‌ ಢಿಕ್ಕಿಯಾಗಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಮೃತಪಟ್ಟಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಮ್ಯಾನೇಜರ್‌ಗೆ ವೈಟರ್‌ನಿಂದ ಹಲ್ಲೆ
ಕುಂದಾಪುರ: ಇಲ್ಲಿನ ಫಿಶ್‌ ಮಾರ್ಕೆಟ್‌ ರಸ್ತೆಯಲ್ಲಿರುವ ಬಾರ್‌ ಆ್ಯಂಡ್‌ ರೆಸ್ಟೋರೆಂಟ್‌ ಒಂದರಲ್ಲಿ ವೈಟರ್‌ ಆಗಿದ್ದ ಮಂಜುನಾಥ ಇತರ 3 ಜನರನ್ನು ಕರೆದುಕೊಂಡು ಬಂದು ವೇತನದ ವಿಚಾರದಲ್ಲಿ ಜಗಳ ಮಾಡಿದ್ದಾರೆ. ಈ ಸಂದರ್ಭ ಮ್ಯಾನೇಜರ್‌ ಸಂತೋಷ್‌ ಕುಮಾರ್‌ ಶೆಟ್ಟಿ ಅವರಿಗೆ ಆರೋಪಿಗಳು ಹಲ್ಲೆ ಮಾಡಿದ್ದು, ಮಾಲಕರಿಗೆ ಜೀವ ಬೆದರಿಕೆ ಹಾಕಿದ್ದಾಗಿ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.