![Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ](https://www.udayavani.com/wp-content/uploads/2024/07/missing-4-415x273.jpg)
Kasaragodu Crime: ತಂದೆಯ ಕೊಲೆ: ಪುತ್ರ ಪೊಲೀಸ್ ವಶಕ್ಕೆ
Team Udayavani, Apr 2, 2024, 9:00 PM IST
![9-kasaragodu](https://www.udayavani.com/wp-content/uploads/2024/04/9-kasaragodu-620x372.jpg)
ಕಾಸರಗೋಡು: ತೆಂಗಿನ ಕಾಯಿ ಸುಲಿಯುವ ಉಪಕರಣದಿಂದ ತಲೆಗೆ ಹೊಡೆದು ತಂದೆಯನ್ನು ಕೊಲೆಗೈದ ಘಟನೆ ಪಳ್ಳಿಕ್ಕೆರೆಯಲ್ಲಿ ನಡೆದಿದೆ.
ಇಲ್ಲಿನ ಸೈಂಟ್ ಮೇರೀಸ್ ಶಾಲೆ ಸಮೀಪದ ಕೋಟಮತ್ತ್ ವೀಟಿಲಿನ ಪಿ.ಅಪ್ಪಕುಂಞಿ(65) ಕೊಲೆಗೀಡಾಗಿದ್ದು, ಈ ಸಂಬಂಧ ಪುತ್ರ ಪಿ.ಟಿ. ಪ್ರಮೋದ್ (37)ನನ್ನು ಬೇಕಲ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಎ. 1ರಂದು ಸಂಜೆ ಮನೆಗೆ ಬಂದ ಪ್ರಮೋದ್ ತೆಂಗಿನಕಾಯಿ ಸುಲಿಯುವ ಉಪಕರಣದಿಂದ ಅಪ್ಪಕುಂಞಿ ಅವರ ತಲೆಗೆ ಹೊಡೆದ ಕಾರಣ ಗಂಭೀರ ಗಾಯಗೊಂಡಿದ್ದರು.
ತತ್ಕ್ಷಣ ಸ್ಥಳೀಯರು ಧಾವಿಸಿ ಬಂದು ಗಾಯಾಳು ಅಪ್ಪಕುಂಞಿ ಅವರನ್ನು ಜಿಲ್ಲಾ ಸಹಕಾರಿ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಸೋಮವಾರ ರಾತ್ರಿ ಮೃತಪಟ್ಟರು.
ಕಳೆದ ರವಿವಾರ ಮಧ್ಯಾಹ್ನವೂ ಪುತ್ರ ಪ್ರಮೋದ್ ಹಲ್ಲೆ ಮಾಡಿದ್ದನೆಂದು ಅಪ್ಪಕುಂಞಿ ಬೇಕಲ ಪೊಲೀಸರಿಗೆ ದೂರು ನೀಡಿದ್ದರು.
ಈ ಸಂಬಂಧ ಬೇಕಲ ಪೊಲೀಸರು ಕೊಲೆ ಯತ್ನ ದಾಖಲಿಸಿದ್ದರು. ತನ್ನ ವಿರುದ್ಧ ಕೇಸು ನೀಡಿದ್ದರಿಂದ ಪ್ರಮೋದ್ ತಂದೆಯನ್ನು ಕೊಲೆಗೈಯಲು ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
![Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ](https://www.udayavani.com/wp-content/uploads/2024/07/missing-4-415x273.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ](https://www.udayavani.com/wp-content/uploads/2024/07/online-2-150x90.jpg)
Kasaragod ಆನ್ಲೈನ್ ಟ್ರೇಡಿಂಗ್ ಮೂಲಕ 80.49 ಲಕ್ಷ ರೂ. ಲಪಟಾವಣೆ
![Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!](https://www.udayavani.com/wp-content/uploads/2024/07/bike-6-150x100.jpg)
Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!
![Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು](https://www.udayavani.com/wp-content/uploads/2024/07/Gangolli-5-150x84.jpg)
Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು
![Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ](https://www.udayavani.com/wp-content/uploads/2024/07/kodagu-1-150x113.jpg)
Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ
![Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು](https://www.udayavani.com/wp-content/uploads/2024/07/coffee-150x102.jpg)
Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.