Kasaragodu Crime: ತಂದೆಯ ಕೊಲೆ: ಪುತ್ರ ಪೊಲೀಸ್ ವಶಕ್ಕೆ
Team Udayavani, Apr 2, 2024, 9:00 PM IST
ಕಾಸರಗೋಡು: ತೆಂಗಿನ ಕಾಯಿ ಸುಲಿಯುವ ಉಪಕರಣದಿಂದ ತಲೆಗೆ ಹೊಡೆದು ತಂದೆಯನ್ನು ಕೊಲೆಗೈದ ಘಟನೆ ಪಳ್ಳಿಕ್ಕೆರೆಯಲ್ಲಿ ನಡೆದಿದೆ.
ಇಲ್ಲಿನ ಸೈಂಟ್ ಮೇರೀಸ್ ಶಾಲೆ ಸಮೀಪದ ಕೋಟಮತ್ತ್ ವೀಟಿಲಿನ ಪಿ.ಅಪ್ಪಕುಂಞಿ(65) ಕೊಲೆಗೀಡಾಗಿದ್ದು, ಈ ಸಂಬಂಧ ಪುತ್ರ ಪಿ.ಟಿ. ಪ್ರಮೋದ್ (37)ನನ್ನು ಬೇಕಲ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಎ. 1ರಂದು ಸಂಜೆ ಮನೆಗೆ ಬಂದ ಪ್ರಮೋದ್ ತೆಂಗಿನಕಾಯಿ ಸುಲಿಯುವ ಉಪಕರಣದಿಂದ ಅಪ್ಪಕುಂಞಿ ಅವರ ತಲೆಗೆ ಹೊಡೆದ ಕಾರಣ ಗಂಭೀರ ಗಾಯಗೊಂಡಿದ್ದರು.
ತತ್ಕ್ಷಣ ಸ್ಥಳೀಯರು ಧಾವಿಸಿ ಬಂದು ಗಾಯಾಳು ಅಪ್ಪಕುಂಞಿ ಅವರನ್ನು ಜಿಲ್ಲಾ ಸಹಕಾರಿ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ಕೊಡಿಸಿದರೂ ಫಲಕಾರಿಯಾಗದೆ ಸೋಮವಾರ ರಾತ್ರಿ ಮೃತಪಟ್ಟರು.
ಕಳೆದ ರವಿವಾರ ಮಧ್ಯಾಹ್ನವೂ ಪುತ್ರ ಪ್ರಮೋದ್ ಹಲ್ಲೆ ಮಾಡಿದ್ದನೆಂದು ಅಪ್ಪಕುಂಞಿ ಬೇಕಲ ಪೊಲೀಸರಿಗೆ ದೂರು ನೀಡಿದ್ದರು.
ಈ ಸಂಬಂಧ ಬೇಕಲ ಪೊಲೀಸರು ಕೊಲೆ ಯತ್ನ ದಾಖಲಿಸಿದ್ದರು. ತನ್ನ ವಿರುದ್ಧ ಕೇಸು ನೀಡಿದ್ದರಿಂದ ಪ್ರಮೋದ್ ತಂದೆಯನ್ನು ಕೊಲೆಗೈಯಲು ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ
Sandalwood: ಪ್ರೇಕ್ಷಕಳಾಗಿ ಕಾಂಗರೂ ನನಗೆ ಇಷ್ಟವಾಯಿತು..
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು