ಕಾಸರಗೋಡು: ಸೋಮವಾರ 207 ಮಂದಿಗೆ ಕೋವಿಡ್ ಸೋಂಕು ದೃಢ


Team Udayavani, Oct 5, 2020, 11:01 PM IST

ಕಾಸರಗೋಡು: 207 ಪಾಸಿಟಿವ್‌

ಸಾಂದರ್ಭಿಕ ಚಿತ್ರ

ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 207 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಂದರ್ಭದಲ್ಲಿ 165 ಮಂದಿ ಗುಣಮುಖರಾಗಿದ್ದಾರೆ. 189 ಮಂದಿಗೆ ಸಂಪರ್ಕದ ಮೂಲಕ ತಗಲಿದೆ. ಬಾಧಿತರಲ್ಲಿ ಐವರು ವಿದೇಶದಿಂದಲೂ ಹಾಗೂ 13 ಮಂದಿ ಇತರ ರಾಜ್ಯಗಳಿಂದ ಬಂದವರು.

ಐವರ ಸಾವು
ಜಿಲ್ಲೆಯಲ್ಲಿ ಮತ್ತೆ ಐವರು ಕೊರೊನಾದಿಂದ ಮೃತಪಟ್ಟಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಮೃತರ ಸಂಖ್ಯೆ 101ಕ್ಕೇರಿದೆ. 62 ವರ್ಷದ ಕಾಸರಗೋಡು ಸೂರ್ಲು ಆರ್‌.ಡಿ. ನಗರದ ಆಲಂಗೋಡು ರೆಸಿಡೆನ್ಸ್‌ ಕಾಲನಿ ನಿವಾಸಿ, 52 ವರ್ಷ ನೀರ್ಚಾಲು ಚಿಮಿನಿಯಡ್ಕ ನಿವಾಸಿ, 61 ವರ್ಷದ ಚಟ್ಟಂಚಾಲು ಬೆಂಡಿಚ್ಚಾಲ್‌ ಬಾಲನಡ್ಕದ ನಿವಾಸಿ, 52ರ ಹರೆಯದ ಚೆರ್ವತ್ತೂರು ತುರುತ್ತಿ ಮುಳಕ್ಕೀಲ್‌ ನಿವಾಸಿ ಮತ್ತು 59ರ ಹರೆಯದ ಪಡನ್ನಕ್ಕಾಡ್‌ ಕುರುಂದೂರು ನಿವಾಸಿ ಮೃತಪಟ್ಟವರು.

ಕೇರಳದಲ್ಲಿ 5,042 ಪ್ರಕರಣ
ಕೇರಳದಲ್ಲಿ ಸೋಮವಾರ 5,042 ಮಂದಿಗೆ ಸೋಂಕು ದೃಢಪಟ್ಟಿದೆ. 23 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು ಮೃತರ ಸಂಖ್ಯೆ 859ಕ್ಕೇರಿದೆ.

67 ಪೊಲೀಸರಿಗೆ ಚಿಕಿತ್ಸೆ
ಕಾಸರಗೋಡು: ಕಾಸರಗೋಡು ನಗರ ಠಾಣೆಯ 67 ಮಂದಿ ಪೊಲೀಸರನ್ನು ಕೊರೊನಾ ಬಾಧಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ನಗರ ಠಾಣೆಯ ಪೊಲೀಸರು ಕ್ವಾರಂಟೈನ್‌ನಲ್ಲಿರುವುದರಿಂದ ಈ ಠಾಣೆಯ ಹೊಣೆಯನ್ನು ಆದೂರು ಠಾಣೆಯ ಇನ್‌ಸ್ಪೆಕ್ಟರ್‌ ವಿಶ್ವಂಭರನ್‌ ಮತ್ತು ವಿದ್ಯಾನಗರ ಠಾಣೆಯ ಎಸ್‌ಐ ವಿಜಯನ್‌ ಅವರಿಗೆ ವಹಿಸಲಾಗಿದೆ. ಇತರ ಠಾಣೆಗಳ ಪೊಲೀಸ್‌ ಸಿಬಂದಿಯನ್ನು ನಗರ ಠಾಣೆಗೆ ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ.

ಅಗ್ನಿ ಶಾಮಕ ದಳದ ನಾಲ್ವರಿಗೆ ಕೋವಿಡ್‌
ಕಾಸರಗೋಡು ಅಗ್ನಿಶಾಮಕ ದಳದ ನಾಲ್ವರಿಗೆ ಕೋವಿಡ್‌ ದೃಢಗೊಂಡಿದೆ. ಅಲ್ಲದೆ ಒಬ್ಬರ ಕುಟುಂಬದ ಮೂವರಿಗೆ ಸೋಂಕು ಬಾಧಿಸಿದೆ. ಈ ಕೇಂದ್ರದಲ್ಲಿ ಒಟ್ಟು 28 ಮಂದಿ ಇದ್ದು, 15 ಮಂದಿ ನಿಗಾದಲ್ಲಿದ್ದಾರೆ.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Theft: ಮನೆಯಿಂದ ಕಳವು; ಸಿಸಿ ಟಿವಿ ದೃಶ್ಯ ಕೇಂದ್ರೀಕರಿಸಿ ತನಿಖೆ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.