ಕಾಸರಗೋಡು ಜಿಲ್ಲೆ : ರವಿವಾರ ಒಂದೇ ದಿನ 5 ಪಾಸಿಟಿವ್‌ ಪತ್ತೆ

ಜಿಲ್ಲೆಯಲ್ಲಿ 762 ಮಂದಿ ನಿಗಾದಲ್ಲಿ

Team Udayavani, Mar 23, 2020, 7:00 AM IST

ಕಾಸರಗೋಡು ಜಿಲ್ಲೆ : ರವಿವಾರ ಒಂದೇ ದಿನ 5 ಪಾಸಿಟಿವ್‌ ಪತ್ತೆ

ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ ಮತ್ತೆ ಐವರಲ್ಲಿ ಕೋವಿಡ್‌ 19 ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯ ಒಟ್ಟು ಪಾಸಿಟಿವ್‌ ಪ್ರಕರಣಗಳ ಸಂಖ್ಯೆ 19 ಆಗಿದೆ.
ಕೇರಳ ರಾಜ್ಯದಲ್ಲಿ ರವಿವಾರ 15 ಪ್ರಕರಣ ದೃಢವಾಗಿದ್ದು, ರಾಜ್ಯದಲ್ಲಿ ಈ ವರೆಗೆ ಒಟ್ಟು 67 ಮಂದಿಯಲ್ಲಿ ಸೋಂಕು ದೃಢವಾಗಿದೆ.

ರಾಜ್ಯದಲ್ಲಿ ಕೋವಿಡ್‌ 19 ಸೋಂಕಿನಿಂದ ನಿಗಾದಲ್ಲಿರುವವರ ಸಂಖ್ಯೆ 762ಕ್ಕೆ ಏರಿದೆ. ಆಸ್ಪತ್ರೆಗಳಲ್ಲಿ 41 ಮಂದಿ ನಿಗಾದಲ್ಲಿದ್ದು, ಇನ್ನುಳಿದವರು ಮನೆಗಳಲ್ಲಿದ್ದಾರೆ.

ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಇಲಾಖೆ ನೇತೃತ್ವದಲ್ಲಿ ಐಸೊಲೇಶನ್‌ ಸೌಲಭ್ಯ ಏರ್ಪಡಿಸಲಾಗಿದೆ. ಪೆರಿಯ, ಪೂಡಂಗಲ್ಲು ಪ್ರದೇಶಗಳಲ್ಲಿ ಐಸೊಲೇಶನ್‌ ಸೆಂಟರ್‌ ಆರಂಭಿಸ ಲಾಗಿದೆ. ಕೇರ್‌ವೆಲ್‌ ಆಸ್ಪತ್ರೆ, ಜನರಲ್‌ ಆಸ್ಪತ್ರೆಗಳಲ್ಲಿ ಐಸೊಲೇಶನ್‌ ಸೌಲಭ್ಯ ಆರಂಭಿಸಲಾಗಿದೆ. ಜಿಲ್ಲಾ ಆಸ್ಪತ್ರೆಗೆ ಐಸೊಲೇಶನ್‌ ಸೌಲಭ್ಯವನ್ನು ವಿಸ್ತರಿಸಲಾಗಿದೆ.

ಕೋವಿಡ್‌ 19 ಪ್ರಕರಣಗಳ ಸಂಖ್ಯೆ ದಿನನಿತ್ಯ ಏರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಅತೀವ ಜಾಗರೂಕತೆ ಪಾಲಿಸಬೇಕು, ಆರೋಗ್ಯ ಕಾರ್ಯಕರ್ತರು ಸೂಚಿಸುವ ಕ್ರಮ ಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾ ವೈದ್ಯಾಧಿಕಾರಿ ತಿಳಿಸಿದ್ದಾರೆ.

ವಿದೇಶಗಳಿಂದ ಊರಿಗೆ ಮರಳುವವರು ಮತ್ತು ಅವರೊಂದಿಗೆ ಸಂಪರ್ಕ ಹೊಂದಿದವರು ಕಡ್ಡಾಯವಾಗಿ ಮನೆಗಳಲ್ಲಿ ನಿಗಾದಲ್ಲಿ ಇರಬೇಕು, ಕೋವಿಡ್‌ 19 ನಿಯಂತ್ರಣ ಕೊಠಡಿಯನ್ನು ಸಂಪರ್ಕಿಸಬೇಕು. ಕೊರೊನಾ ವೈರಸ್‌ ಸಾಮಾಜಿಕವಾಗಿ ಹರಡುವುದರಿಂದ ಜನಸಂಪರ್ಕ ನಡೆಸಕೂಡದು ಎಂದಿದ್ದಾರೆ.

ಕಾಸರಗೋಡಿನಲ್ಲಿ 144 ಸೆಕ್ಷನ್‌ ಜಾರಿ
ಕಾಸರಗೋಡು: ಕೋವಿಡ್‌ 19 ವೈರಸ್‌ ಹರಡುತ್ತಿರುವ ಹಿನ್ನೆಲೆ ಯಲ್ಲಿ ಕಾಸರಗೊಂಡು ಜಿಲ್ಲೆಯಲ್ಲಿ 144 ಸೆಕ್ಷನ್‌ ಜಾರಿಗೊಳಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಆದೇಶ ಹೊರಡಿಸಿದ್ದಾರೆ.

ರವಿವಾರ ರಾತ್ರಿ 9ರಿಂದ ಜಾರಿಗೆ ಬಂದಿದ್ದು ಮುಂದಿನ ಆದೇಶ ಬರುವ ತನಕ ಸೆಕ್ಷನ್‌ ಜಾರಿಯಲ್ಲಿರುವುದು. ವ್ಯಾಪಾರ ಸಂಸ್ಥೆಗಳು, ಬಾರ್ಬರ್‌ ಅಂಗಡಿಗಳು, ಬ್ಯೂಟಿ ಪಾರ್ಲರ್‌ಗಳನ್ನು ನಿಷೇಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗುಂಪು ಸೇರಬಾರದು. ಅನಗತ್ಯ ಪ್ರಯಾಣ ಮಾಡಬಾರದು ಎಂದು ಸೂಚಿಸಲಾಗಿದೆ.

ಬೆಳಗ್ಗೆ 11ರಿಂದ ಸಂಜೆ 5 ಗಂಟೆಯ ವರೆಗೆ ಹಾಲು, ಪೆಟ್ರೋಲ್‌ ಬಂಕ್‌, ಮೆಡಿಕಲ್‌ ಅಂಗಡಿಗಳು, ರೇಶನ್‌ ಅಂಗಡಿಗಳ ಸಹಿತ ಅಗತ್ಯ ವಸ್ತುಗಳ ಅಂಗಡಿಗಳು ಕಾರ್ಯಾಚರಿಸಲಿವೆ.

5 ಸಹಾಯವಾಣಿ
ಕಾಸರಗೋಡು ಜಿಲ್ಲೆಯಲ್ಲಿ ನೂತನವಾಗಿ 5 ಹೆಲ್ಪ್ಲೈನ್‌ 24 ತಾಸು ಲಭ್ಯವಾಗಲಿವೆ. ಕೋವಿಡ್‌ 19 ಸೋಂಕು ಸಂಬಂಧ ಎಲ್ಲ ಸಹಾಯಗಳಿಗೆ ಇವನ್ನು ಸಂಪರ್ಕಿಸಬಹುದು. ರೋಗಬಾಧೆಯ ಶಂಕೆಯಿದ್ದಲ್ಲಿ ಆಸ್ಪತ್ರೆಗೆ ನೇರವಾಗಿ ಭೇಟಿ ನೀಡುವ ಬದಲು ಸಹಾಯ ಕೇಂದ್ರಕ್ಕೆ ಕರೆ ಮಾಡಿ ಸಲಹೆ ಪಡೆಯಬಹುದು. ದೂರವಾಣಿ ಸಂಖ್ಯೆಗಳು: 046 72209901, 046 72209902, 046 72209903, 046 72209904, 046 72209906

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.