ಕಾಸರಗೋಡು ಜಿಲ್ಲೆ: 546 ಮಂದಿ ನಿಗಾದಲ್ಲಿ

ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಶೇಷ ಅಧಿಕಾರಿ ನೇಮಕ

Team Udayavani, Mar 20, 2020, 5:41 AM IST

ಕಾಸರಗೋಡು ಜಿಲ್ಲೆ: 546 ಮಂದಿ ನಿಗಾದಲ್ಲಿ

ಸಾಂದರ್ಭಿಕ ಚಿತ್ರ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ಬಾಧೆ ಶಂಕಿತ 546 ಮಂದಿ ನಿಗಾದಲ್ಲಿದ್ದಾರೆ. ಈ ಪೈಕಿ 537 ಮಂದಿ ಮನೆಗಳಲ್ಲೂ, 9 ಮಂದಿ ಆಸ್ಪತ್ರೆಗಳಲ್ಲೂ ಇದ್ದಾರೆ. ಹೊಸದಾಗಿ 21 ಮಂದಿ ಸೇರಿದಂತೆ ಈ ತನಕ 170 ಮಂದಿಯ ಸ್ಯಾಂಪಲ್‌ಗ‌ಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 66 ಪರೀಕ್ಷಾ ವರದಿಗಳು ನಿರೀಕ್ಷೆಯಲ್ಲಿವೆ. ಹೊಸದಾಗಿ ಯಾರಲ್ಲೂ ಸೋಂಕು ದೃಢವಾಗಿಲ್ಲ. ಕೋವಿಡ್-19 ಬಾಧಿಸಿರುವ ಯುವಕನೊಂದಿಗೆ ಸಂಪರ್ಕದಲ್ಲಿದ್ದ 42 ಮಂದಿ ಗುರುತು ಪತ್ತೆಹಚ್ಚಿದ್ದು, ಅವರು ನಿಗಾದಲ್ಲಿದ್ದಾರೆ.

ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಜಿಲ್ಲೆಯ ಗಡಿ ಪ್ರದೇಶಗಳ ಚೆಕ್‌ಪೋಸ್ಟ್‌ಗಳಲ್ಲಿ ವೈದ್ಯರು, ಜೂನಿಯರ್‌ ಹೆಲ್ತ್‌ ಇನ್‌ಸ್ಪೆಕ್ಟರ್‌ಗಳು, ಪೊಲೀಸರನ್ನೊಳಗೊಂಡ ತಂಡ
ಕಡ್ಡಾಯ ಸೂಕ್ಷ್ಮ ತಪಾಸಣೆ ನಡೆಸುತ್ತಿದೆ.

ಮಂಗಳೂರು ಮೂಲಕ ಕೇರಳಕ್ಕೆ ಬರುವವರನ್ನು ಹೆಚ್ಚುವರಿ ತಪಾಸಣೆಗೆ ಒಳಪಡಿಸಲಾಗುವುದು. ಮಂಗಳೂರು ವಿಮಾನ ನಿಲ್ದಾಣಗಳಲ್ಲಿ ವಿಶೇಷ ಅಧಿಕಾರಿಯನ್ನೂ ನೇಮಿಸಲಾಗಿದೆ. ಉತ್ಸವ ಇತ್ಯಾದಿ ಚಟುವಟಿಕೆಗಳು ಪೊಲೀಸರ ನಿಗಾದಲ್ಲಿ ನಡೆಯುತ್ತಿವೆ.

ಪ್ರತ್ಯೇಕ ವಾಹನ
ಮಂಗಳೂರು ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬರುವವರನ್ನು ಕರ್ನಾಟಕ ಸರಕಾರ ಪ್ರತ್ಯೇಕ ವಾಹನಗಳಲ್ಲಿ ತಲಪಾಡಿ ವರೆಗೆ ಕರೆತರುತ್ತಿದೆ. ಅಲ್ಲಿ ಮತ್ತೆ ಅವರ ಆರೋಗ್ಯ ತಪಾಸಣೆ ನಡೆಯುತ್ತಿದೆ.
ರೋಗಲಕ್ಷಣ ಹೊಂದಿರುವವರನ್ನು ಕಾಸರಗೋಡು ಸರಕಾರಿ ಜನರಲ್‌ ಆಸ್ಪತ್ರೆಗೆ ದಾಖಲಿಸಲಾಗು ತ್ತಿದೆ. ರೋಗಲಕ್ಷಣ ಇಲ್ಲದವರನ್ನು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಾಸರಗೋಡಿಗೆ ಕಳುಹಿಸಲಾಗುತ್ತಿದೆ.ಖಾಸಗಿ ವಾಹನದಲ್ಲಿ ತೆರಳಲು ಇಚ್ಛಿಸುವವರು ತಲಪಾಡಿಯಲ್ಲಿರುವ ವಿಶೇಷ ಕೌಂಟರ್‌ನಿಂದ ದೃಢೀಕರಣ ಪತ್ರ ಪಡೆದುಕೊಳ್ಳಬೇಕು.

ಜಿಲ್ಲಾಧಿಕಾರಿ ವಿಶೇಷ ಸಭೆ
ಡಿಸಿ ಕಚೇರಿಯಲ್ಲಿ ಗುರುವಾರ ವಿಶೇಷ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ಅವರು ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಜನಜಾಗೃತಿ ಸಮಿತಿಗಳನ್ನು ತುರ್ತಾಗಿ ಬಲಪಡಿಸಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲಿ 776 ಜನಜಾಗೃತಿ ಸಮಿತಿಗಳು ಕಾರ್ಯಾಚರಿಸುತ್ತಿವೆ. ಮನೆಗಳಲ್ಲಿ ನಿಗಾದಲ್ಲಿರುವವರು ಆರೋಗ್ಯ ಇಲಾಖೆ ಮತ್ತು ರಾಜ್ಯ ಸರಕಾರದ ನಿರ್ಬಂಧಗಳನ್ನು ಉಲ್ಲಂಘಿಸಿ ಮನೆಯಿಂದ ಹೊರಗಿಳಿದರೆ ತತ್‌ಕ್ಷಣ ಕೊರೊನಾ ನಿಯಂತ್ರಣ ಘಟಕಕ್ಕೆ ಮಾಹಿತಿ ನೀಡಬೇಕು. ಅಂಥವರ ಮೇಲೆ ವಿಶೇಷ ನಿಗಾ ಇಡಲಾಗುವುದು ಎಂದರು.

ಹೆಚ್ಚುವರಿ ಸೌಲಭ್ಯ
ಕೋವಿಡ್-19 ಸೋಂಕು ಲಕ್ಷಣ ಹೊಂದಿದವರಿಗಾಗಿ ಹೆಚ್ಚುವರಿ ಸೌಲಭ್ಯ ಒದಗಿಸಲು ಜಿಲ್ಲಾ ಮಟ್ಟದ ಅವಲೋಕನ ಸಮಿತಿ ನಿರ್ಧರಿಸಿದೆ. ವಿದೇಶದಿಂದ ಮರಳಿ ರೋಗ ಲಕ್ಷಣ ಇಲ್ಲದವರ ಮೇಲೆ ನಿಗಾ ಇಡಲು ಕಾಸರಗೋಡು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆ, ಕಾಂಞಂಗಾಡ್‌ ಜಿಲ್ಲಾ ಆಸ್ಪತ್ರೆ ಬಳಿಯ ಬಲ್ಲ ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ವ್ಯವಸ್ಥೆ ಏರ್ಪಡಿಸಲಾಗಿದೆ.

ಸಭೆಯಲ್ಲಿ ಎಸ್‌ಪಿ ಪಿ.ಎಸ್‌. ಸಾಬು, ಡಿಎಚ್‌ಒ ಡಾ| ಎ.ವಿ. ರಾಮದಾಸ್‌, ಸಹಾಯಕ ಜಿಲ್ಲಾ ವೈದ್ಯಾಧಿಕಾರಿ ಡಾ| ಎ.ಟಿ. ಮನೋಜ್‌, ಹೆಚ್ಚುವರಿ ದಂಡನಾಧಿಕಾರಿ ಎನ್‌. ದೇವಿದಾಸ್‌ ಉಪಸ್ಥಿತರಿದ್ದರು.

ಅಧಿಕೃತರಿಂದ ಖರೀದಿಸಿ
ಕೆಲವೆಡೆ ವೈವಿಧ್ಯಮಯ ಹ್ಯಾಂಡ್‌ ಸ್ಯಾನಿಟೈಸರ್‌, ಹ್ಯಾಂಡ್‌ ರಬ್‌ಗಳು, ದುಬಾರಿ ಬೆಲೆಗೆ ಮಾರಾಟಗೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಅವುಗಳಲ್ಲಿ ಕೆಲವು ಸೌಂದರ್ಯ ವರ್ಧಕಗಳಾಗಿದ್ದು, ಕೊರೊನಾದಂಥಾ ಸೋಂಕು ಸಹಿತ ರೋಗಾಣುಗಳ ನಾಶಕ್ಕೆ ಪರಿಣಾಮಕಾರಿಯಲ್ಲ. ಅಡ್ಡ ಪರಿಣಾಮದ ಭೀತಿಯೂ ಇದೆ. ಆದ್ದರಿಂದ ಡ್ರಗ್‌ ಲೈಸನ್ಸ್‌ ಇರುವ ಸಂಸ್ಥೆಗಳು ಉತ್ಪಾದಿಸುವ ಹ್ಯಾಂಡ್‌ ಸಾನಿಟೈಸರ್‌ಗಳನ್ನು ಮಾತ್ರ ಬಳಸಬೇಕೆಂದು ಕಣ್ಣೂರು ಅಸಿಸ್ಟೆಂಟ್‌ ಡ್ರಗ್‌ ಕಂಟ್ರೋಲರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.