ಜಿಲ್ಲಾಧಿಕಾರಿ ಇಲ್ಲದೆ ಅನಾಥವಾದ ಕಾಸರಗೋಡು ಜಿಲ್ಲೆ !


Team Udayavani, Jul 27, 2018, 6:15 AM IST

kasaragod-map.jpg

ಕಾಸರಗೋಡು: ಪ್ರಾಕೃತಿಕ ವಿಕೋಪ ಸಹಿತ ವಿವಿಧ ದುರಂತಗಳಿಂದ ನಾಶ, ನಷ್ಟ  ಅನುಭ‌ವಿಸುತ್ತಿರುವ ಕಾಸರಗೋಡು ಜಿಲ್ಲೆಗೆ ಕಳೆದ ಎರಡು ವಾರಗಳಿಂದ ಜಿಲ್ಲಾಧಿಕಾರಿ ಇಲ್ಲದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ಜಿಲ್ಲೆಯ ಕೆಲವು ಪ್ರಮುಖ ಅಭಿವೃದ್ಧಿ ಯೋಜನೆಗಳು, ಕಾರ್ಯಕ್ರಮಗಳು, ಪರಿಹಾರ ಕ್ರಮಗಳು ಅಸ್ತವ್ಯಸ್ತಗೊಳ್ಳುತ್ತಿವೆ. ಆದರೂ ಕೇರಳ ಸರಕಾರ ಮಾತ್ರ ಈ ನಿಟ್ಟಿನಲ್ಲಿ ನಿರ್ಲಕ್ಷ್ಯ ನೀತಿ ಅನುಸರಿಸುತ್ತಿರುವುದು ಆಕ್ರೋಶಕ್ಕೆ ಕಾರಣವಾಗುತ್ತಿದೆ.

ಕಾಸರಗೋಡಿನ ಜಿಲ್ಲಾಧಿಕಾರಿಯಾಗಿದ್ದ  ಕೆ.ಜೀವನ್‌ಬಾಬು ಅವರನ್ನು  ಇಡುಕ್ಕಿ ಜಿಲ್ಲೆಗೆ ವರ್ಗಾಯಿಸಿ ಜು.4ರಂದು ಆದೇಶ ಹೊರಡಿಸಲಾಗಿತ್ತು. ಜು.10ರಂದು ಅವರು ಕಾಸರಗೋಡಿನಿಂದ ತೆರಳಿದ್ದರು. ಮರುದಿನ ಅಡಿಶನಲ್‌ ಡಿಸ್ಟ್ರಿಕ್ಟ್  ಮೆಜಿಸ್ಟ್ರೇಟ್‌ (ಎಡಿಎಂ) ಎನ್‌.ದೇವಿದಾಸ್‌ ಅವರಿಗೆ ಜಿಲ್ಲಾಧಿಕಾರಿ ಹುದ್ದೆಯ ಉಸ್ತುವಾರಿ ನೀಡಿ ಆದೇಶ ಹೊರಡಿಸಲಾಗಿತ್ತು. ಆದರೆ ಕಲೆಕ್ಟರ್‌ ಹುದ್ದೆಗೆ ಜಿಲ್ಲಾಧಿಕಾರಿಯ ನೇಮಕಾತಿ ಇನ್ನೂ  ನಡೆಯದಿರುವುದು ವಿಪರ್ಯಾಸವಾಗಿದೆ.

ಉಸ್ತುವಾರಿ ಸಚಿವರಿಂದಲೂ ಮಾಹಿತಿ ಇಲ್ಲ
ಕಂದಾಯ ಮತ್ತು  ವಸತಿ ನಿರ್ಮಾಣ ಖಾತೆ ಸಚಿವ ಇ. ಚಂದ್ರಶೇಖರನ್‌ ಅವರು ಕಾಸರಗೋಡು ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲಾಧಿಕಾರಿ ನೇಮಕಾತಿ ವಿಚಾರದಲ್ಲಿ  ವಿಳಂಬ ನೀತಿಗೆ ಅವರಿಂದಲೂ ಸ್ಪಷ್ಟ  ಮಾಹಿತಿ ಇಲ್ಲ. ಮಳೆ ಹಾನಿ ಹಿನ್ನೆಲೆಯಲ್ಲಿ  ಜಿಲ್ಲೆಯಲ್ಲಿ  ಇದುವರೆಗೆ ನಾಲ್ಕು ಕೋಟಿ ರೂ. ಗಳಿಗೂ ಹೆಚ್ಚು  ನಷ್ಟ  ಸಂಭವಿಸಿದೆ.  ಹಲವು ಮಂದಿ ಮೃತಪಟ್ಟಿದ್ದಾರೆ. ಇವರಿಗೆ ನಷ್ಟ ಪರಿಹಾರ ನೀಡುವ ಎಲ್ಲ  ಕ್ರಮಗಳೂ ವಿಳಂಬಗೊಳ್ಳುತ್ತಿವೆ. ಆದಕಾರಣ ಸಾರ್ವಜನಿಕ ವಲಯದಿಂದ ಪ್ರಬಲ ಹೋರಾಟದ ಮಾತುಗಳೂ ಕೇಳಿಬರುತ್ತಿವೆ.

ಜಿಲ್ಲಾಧಿಕಾರಿಯಾಗಿದ್ದ  ಕೆ. ಜೀವನ್‌ಬಾಬು ಆರಂಭಿಸಿದ್ದ  ಭೂಮಿಯ ರೀ ಸರ್ವೇ ಪ್ರಕ್ರಿಯೆಗಳು ಕೂಡ ಸ್ಥಗಿತಗೊಂಡಿವೆ. ಸಾಮಾನ್ಯ ಪರಿಸ್ಥಿತಿಯಲ್ಲಿ  ಕಂದಾಯ ವಿಭಾಗದ ಮುಖ್ಯಸ್ಥರಾಗಿ ಎಡಿಎಂ ಕಾರ್ಯಾಚರಿಸುತ್ತಾರೆ. ಎಕ್ಸಿಕ್ಯೂ ಟಿವ್‌ ಮೆಜಿಸ್ಟ್ರೇಟ್‌ ಆದ ಜಿಲ್ಲಾ ಮಟ್ಟದ ಅಧಿಕಾರಿಯು ಎಲ್ಲ  ಇಲಾಖೆಗಳ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸು ತ್ತಿದ್ದಾರೆ. ಜಿಲ್ಲೆಯೊಳಗಿನ ವಿಚಾರಗಳನ್ನು ಸಮಯೋಚಿತವಾಗಿ ಆಯಾ ರಾಜ್ಯ ಸರಕಾರಕ್ಕೆ ವರದಿ ಮಾಡುವ ಹೊಣೆಗಾರಿಕೆ ಜಿಲ್ಲಾಧಿಕಾರಿಯದ್ದಾಗಿದೆ.

ಸಭೆಗಳೇ ಇಲ್ಲ
ಇದರ ಹೊರತು ಜಿಲ್ಲಾ   ಮಟ್ಟದಲ್ಲಿರುವ ಸಮಿತಿಗಳ ಮುಖ್ಯಸ್ಥರಾಗಿ ಜಿಲ್ಲಾಧಿಕಾರಿ ಕರ್ತವ್ಯ ನಿಭಾಯಿಸಬೇಕು. ಈ ಸಮಿತಿಗಳಲ್ಲಿ ಹಲವು ಸಮಿತಿಗಳು ಜಿಲ್ಲಾಧಿಕಾರಿ ಇಲ್ಲದೆ ಸಭೆ ನಡೆಸಲಾಗದ ಸ್ಥಿತಿಯಲ್ಲಿವೆ. ಆದರೆ ಜಿಲ್ಲೆಯ ಉಸ್ತುವಾರಿ ಸಚಿವರು, ಮುಖ್ಯಮಂತ್ರಿ ಹಾಗೂ ರಾಜ್ಯ ಸರಕಾರ ಮಾತ್ರ ಈ ವಿಷಯದಲ್ಲಿ  ಮೌನಕ್ಕೆ ಶರಣಾಗಿರುವುದು ಅಚ್ಚರಿ ಮೂಡಿಸುತ್ತಿದೆ. ಎಂಡೋಸಲ್ಫಾನ್‌ ಬಾಧಿತ ಜಿಲ್ಲೆ  ಎಂಬ ಹಣೆಪಟ್ಟಿ  ಇದ್ದರೂ ಜಿಲ್ಲಾ  ಕಲೆಕ್ಟರ್‌ ನೇಮಕಾತಿ ವಿಚಾರದಲ್ಲಿ  ಸರಕಾರದ ಕಡೆಯಿಂದ ವಿಳಂಬ ಧೋರಣೆ ಮುಂದುವರಿಯುತ್ತಿರುವುದು ಉತ್ತಮ ಬೆಳವಣಿಗೆಯಲ್ಲ.

ತಾಂತ್ರಿಕ ಅಡಚಣೆ ಇರುವುದಿಲ್ಲ 
ಜಿಲ್ಲಾಧಿಕಾರಿ ಅನುಪಸ್ಥಿತಿಯಲ್ಲಿ ಜಿಲ್ಲೆಯ ಯಾವುದೇ ಕಾರ್ಯ ಯೋಜನೆಗಳು ಸ್ಥಗಿತಗೊಂಡಿಲ್ಲ. ಪ್ರಸ್ತುತ ಸಮರ್ಪಕ ವ್ಯವಸ್ಥೆ ಇರುವುದರಿಂದ ಎಲ್ಲ  ಯಥಾ ವತ್ತಾಗಿ ನಡೆಯುತ್ತಿವೆ. ಜಿಲ್ಲಾಧಿ ಕಾರಿಯ ಹೊಣೆಗಾರಿಕೆಯನ್ನು  ಎಡಿಎಂಗೆ ಒಪ್ಪಿಸಿ ಕೇರಳ ಸರಕಾರವು ಆದೇಶ ಹೊರಡಿಸಿ ರುವುದರಿಂದ ತಾಂತ್ರಿಕ ಅಡಚಣೆಗಳು ಇರುವುದಿಲ್ಲ. ಮತ್ತೂಂದೆಡೆ ಕಾಸರಗೋಡು ಜಿಲ್ಲೆಯ ಯಾವುದೇ ಯೋಜನೆಗಳು, ಪರಿಹಾರ ಕ್ರಮಗಳು ಜಿಲ್ಲಾಧಿ ಕಾರಿ ಇಲ್ಲ  ಎಂಬ ನೆಲೆಯಲ್ಲಿ  ವಿಳಂಬಗೊಳ್ಳುತ್ತಿಲ್ಲ ಎಂದು ಎಡಿಎಂ ಎನ್‌. ದೇವಿದಾಸ್‌ ಹೇಳಿದ್ದಾರೆ.

ಬದಲಿ ಡಿಸಿ ವ್ಯವಸ್ಥೆ ಮಾಡದೆ ವರ್ಗಾವಣೆ
ಸಾಮಾನ್ಯವಾಗಿ ಯಾವುದೇ ಜಿಲ್ಲೆಯ ಜಿಲ್ಲಾಧಿಕಾರಿಯನ್ನು  ವರ್ಗಾಯಿಸುವಾಗ ನೂತನ ಜಿಲ್ಲಾಧಿಕಾರಿಯನ್ನು ನೇಮಿಸಿ ಆದೇಶ ಹೊರಡಿಸಲಾಗುತ್ತದೆ. ಆದರೆ ಇಲ್ಲಿ  ಅದು ಕೂಡ ನಡೆದಿಲ್ಲ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅಮೇರಿಕ ಪ್ರವಾಸದಲ್ಲಿದ್ದುದರಿಂದ ಆದೇಶ ವಿಳಂಬಗೊಂಡಿರುವುದಾಗಿ ಮೊದಲು ಹೇಳಲಾಗಿತ್ತಾದರೂ ಅವರು ಹಿಂದಿರುಗಿ ಬಂದು ವಾರ ಒಂದು ಕಳೆದರೂ ನೇಮಕಾತಿ ಕ್ರಮ ನಡೆದಿಲ್ಲ.

ಟಾಪ್ ನ್ಯೂಸ್

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

Uppala ರೈಲ್ವೇ ಇಲಾಖೆಯ ಸ್ಥಳದಿಂದ ಮರ ಕಳವು : ಆರೋಪಿ ಬಂಧನ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಮೋದಿ ಸರಕಾರದಿಂದ ಭ್ರಷ್ಟಾಚಾರ ನಿಯಂತ್ರಣ: ಎ.ಪಿ. ಅಬ್ದುಲ್ಲ ಕುಟ್ಟಿ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

ಇಂದು ಕೇಂದ್ರ ಸಚಿವ ರಾಜನಾಥ್‌ ಸಿಂಗ್‌ ಕಾಸರಗೋಡಿಗೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

BJP FLAG

400 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವು ಕಷ್ಟ: ಎಬಿಪಿ ಸಮೀಕ್ಷೆ ಭವಿಷ್ಯ

IND VS PAK

ಸಮಸ್ಯೆ ಸೌಹಾರ್ದವಾಗಿ ಬಗೆಹರಿಸಿಕೊಳ್ಳಿ: ಭಾರತ, ಪಾಕ್‌ಗೆ ಅಮೆರಿಕ ಸಲಹೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.