ಜಲಶಕ್ತಿ ಅಭಿಯಾನದಲ್ಲಿ ಕಾಸರಗೋಡು ಜಿಲ್ಲೆ ಸೇರ್ಪಡೆ


Team Udayavani, Jul 3, 2019, 5:57 AM IST

jala-shakti-abhyan

ಕಾಸರಗೋಡು: ದೇಶದ ಗ್ರಾಮೀಣ ಪ್ರದೇಶ ಸಹಿತ ಹಲವು ಭಾಗಗಳಲ್ಲಿ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಜಲ ಸಂರಕ್ಷಣೆ ಮತ್ತು ಮಳೆ ನೀರು ಸಂಗ್ರಹ ಉದ್ದೇಶವನ್ನು ಮುಂದಿಟ್ಟುಕೊಂಡು ಕೇಂದ್ರ ಸರಕಾರ ಆಯೋಜಿಸಿದ ಜಲಶಕ್ತಿ ಅಭಿಯಾನದಲ್ಲಿ ಕೇರಳ ರಾಜ್ಯದ ಕಾಸರಗೋಡು ಮತ್ತು ಪಾಲ್ಗಾಟ್ ಜಿಲ್ಲೆಯನ್ನು ಸೇರ್ಪಡೆಗೊಳಿಸಲಾಗಿದೆ.

ಈಗಾಗಲೇ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರು ಸೋಮವಾರ ‘ಜಲ ಶಕ್ತಿ ಅಭಿಯಾನ’ಕ್ಕೆ ಚಾಲನೆ ನೀಡಿದ್ದು, ಈ ಅಭಿಯಾನದ ಮೂಲಕ ನೀರಿನ ಸಂರಕ್ಷಣೆ ಮತ್ತು ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರ ಜಲಮೂಲಗಳ ಪುನಃಶ್ಚೇತನ, ನೀರಿನ ಮರುಬಳಕೆ, ಜಲಾನಯನ ಅಭಿವೃದ್ಧಿ ಹಾಗೂ ಅರಣ್ಯೀಕರಣ ನಡೆಯಲಿದೆ. ಸೆ. 15ರ ವರೆಗೆ ದೇಶದ 256 ಜಿಲ್ಲೆಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುವುದು. ಇದರಲ್ಲಿ ಕಾಸರ ಗೋಡು ಮತ್ತು ಪಾಲ್ಗಾಟ್ ಜಿಲ್ಲೆ ಒಳಗೊಂಡಿದೆ.

ಐಎಎಸ್‌ ಅಧಿಕಾರಿಗಳಿಗೆ ಹೊಣೆಗಾರಿಕೆ

ಈ ಯೋಜನೆಯನ್ನು ಸಾಕಾರಗೊಳಿಸಲು ಜಾಯಿಂಟ್ ಸೆಕ್ರೆಟರಿ ರ್‍ಯಾಂಕ್‌ನಲ್ಲಿರುವ 256 ಐ.ಎ.ಎಸ್‌. ಉದ್ಯೋಗಸ್ಥರಿಗೆ ಜವಾಬ್ದಾರಿ ವಹಿಸಿಕೊಡಲಾಗಿದೆ. ಜಲ ಸಂಪನ್ಮೂಲ ವಿನಿಯೋಗ ಉದ್ಯೋಗಸ್ಥರು, ವಿಜ್ಞಾನಿಗಳು, ಕೇಂದ್ರ ಸರಕಾರದ ಉದ್ಯೋಗಸ್ಥರು ಜಂಟಿಯಾಗಿ ನೀರಿನ ತೀವ್ರ ಅಭಾವ ಎದುರಿಸುತ್ತಿರುವ ಪ್ರದೇಶಗಳಲ್ಲಿ ಜಲ ಸಂರಕ್ಷಣೆಗೆ ಅಗತ್ಯವಾದ ಕ್ರಮಗಳ ಬಗ್ಗೆ ಅವಲೋಕನ ನಡೆಸಲಿದ್ದಾರೆ. ವಾರದಲ್ಲಿ ಮೂರು ಬಾರಿ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲೆಗಳ ನಿರ್ವಹಣೆಯ ಬಗ್ಗೆ ಅವಲೋಕಿಸುವರು. ಅತೀ ತೀವ್ರ ಮಟ್ಟದಲ್ಲಿ ಜಲ ಕ್ಷಾಮ ಉಂಟಾಗಿರುವ ಜಿಲ್ಲೆಗಳಲ್ಲಿ ನವಂಬರ್‌ 30ರ ವರೆಗೆ ಈ ಯೋಜನೆ ಮುಂದುವರಿಯಲಿದೆ. ಆಂಧ್ರ ಪ್ರದೇಶ ಮತ್ತು ತಮಿಳುನಾಡು ರಾಜ್ಯದ ಕೆಲವು ಜಿಲ್ಲೆಗಳೂ ಈ ಯೋಜನೆಯಲ್ಲಿ ಸೇರ್ಪಡೆಗೊಂಡಿದೆ.

ಜಿಲ್ಲಾಡಳಿತದಿಂದ ಇಬ್ಭರು ಸದಸ್ಯರು

ಕಾಸರಗೋಡು ಜಿಲ್ಲೆಯ ಉಸ್ತುವಾರಿ ವಹಿಸಿರುವ ಅಧಿಕಾರಿಗಳಿಗೆ ನೆರವಾಗಲು ಆಯಾ ಜಿಲ್ಲಾಡಳಿತ ಕೂಡ ಇಬ್ಬರು ಸದಸರ್ಯನ್ನು ಈ ಕೆಲಸಕ್ಕೆ ನೇಮಕ ಮಾಡಬೇಕಾಗಿದೆ. ಈ ಇಬ್ಬರು ಸದಸ್ಯರು ಕೇಂದ್ರ ತಂಡದೊಂದಿಗೆ ಕೈಜೋಡಿಸಲಿದ್ದಾರೆ.

ಪ್ರಧಾನಿಯಾಗಿ ಎರಡನೇ ಭಾರಿ ಅಧಿಕಾರ ವಹಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರು ‘ಮನ್‌ ಕಿ ಬಾತ್‌’ ಕಾರ್ಯಕ್ರಮದಲ್ಲಿ ಜಲ ಸಂರಕ್ಷಣೆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗುವಂತೆ ದೇಶದ ಜನತೆಗೆ ಕಳೆದ ರವಿವಾರವಷ್ಟೇ ಕರೆ ನೀಡಿದ್ದರು.

ನೀರಿಗಾಗಿ ಹಾಹಾಕಾರ

256 ಜಿಲ್ಲೆಗಳ 1,598 ವಲಯಗಳನ್ನು ಕೇಂದ್ರೀಕರಿಸಿ ಜಲ ಸಂರಕ್ಷಣೆ ಕೈಗೊಳ್ಳುವ ಯೋಜನೆಯಾಗಿರುವ ಜಲಶಕ್ತಿ ಅಭಿಯಾನದಿಂದ ದೇಶದಲ್ಲಿ ತೀವ್ರವಾಗಿ ನೀರಿನ ಅಭಾವ ಎದುರಿಸುತ್ತಿರುವ ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಪರಿಹರಿಸಲು ಅಗತ್ಯದ ಕ್ರಮ ಸಾಕಾರಗೊಳ್ಳಲಿದೆ. ಕೇರಳದ ಕಾಸರಗೋಡು ಜಿಲ್ಲೆಯಲ್ಲಿ ಪ್ರಸ್ತುತ ವರ್ಷ ನೀರಿನ ಸಮಸ್ಯೆ ತೀವ್ರ ಬಿಗಡಾಯಿಸಿದ್ದು, ನೀರಿಗಾಗಿ ಹಾಹಾಕಾರವಿದೆ. ಈ ವರ್ಷ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಭಾರೀ ಕುಸಿದಿದ್ದು, ಕಳೆದ ವರ್ಷ ಈ ಕಾಲಘಟ್ಟದಲ್ಲಿ ಲಭಿಸಿದ ಮಳೆಯ ಶೇ.30 ಕೂಡಾ ಈ ಬಾರಿ ಲಭಿಸಿಲ್ಲ ಎಂದು ಅಂದಾಜಿಸಲಾಗಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.