ಜಿಲ್ಲೆಯಾದ್ಯಂತ ಧಾರಾಕಾರ ಮಳೆ:ಗುಡ್ಡೆ ಕುಸಿದು ನಾಲ್ಕು ಮನೆಗಳಿಗೆ ಹಾನಿ


Team Udayavani, Jul 8, 2018, 6:00 AM IST

7mul1.jpg

ಕಾಸರಗೋಡು/ ಮುಳ್ಳೇರಿಯ: ಶುಕ್ರವಾರ ರಾತ್ರಿಯಿಂದ ಧಾರಾಕಾರ ಮಳೆಯಾಗುತ್ತಿದ್ದು, ಬೆಳ್ಳೂರು ಗ್ರಾಮ ಪಂಚಾಯತ್‌ನ ವಿವಿಧೆಡೆ ಗುಡ್ಡೆ ಕುಸಿದು ನಾಲ್ಕು ಮನೆಗಳಿಗೆ ಹಾನಿಯಾಗಿದೆ.

ಕಿನ್ನಿಂಗಾರಿನಲ್ಲಿ ರಾಮಣ್ಣ ಪೂಜಾರಿ ಅವರ ಹೊಸ ಮನೆ ಮೇಲೆ ಸಮೀಪದ ಗುಡ್ಡೆ ಕುಸಿದು ಬಿದ್ದಿದೆ. ಶುಕ್ರವಾರ ರಾತ್ರಿ 12 ಗಂಟೆಗೆ ಈ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಹೊಸ ಕಾಂಕ್ರೀಟ್‌ ಮನೆಯ ನಿರ್ಮಾಣ ಪೂರ್ಣಗೊಂಡಿತ್ತು. ಇದೀಗ ಗುಡ್ಡೆ ಕುಸಿದ ಪರಿಣಾಮವಾಗಿ ಮನೆಗೆ ಹಾನಿಯಾಗಿದ್ದು ಸುಮಾರು ಒಂದೂವರೆ ಲಕ್ಷ ರೂ. ನಾಶನಷ್ಟ ಅಂದಾಜಿಸಲಾಗಿದೆ.

ಬೆಳ್ಳೂರು-ಬಸ್ತಿ ಬಳಿಯ ಪಂಬೆಜಾಲು ವಾಸು ಗೌಡ ಅವರ ಮನೆಗೆ ಶುಕ್ರವಾರ ರಾತ್ರಿ 1 ಗಂಟೆಗೆ ಸಮೀಪದ ಗುಡ್ಡ ಜರಿದು ಬಿದ್ದು, ಮನೆಯ ಛಾವಣಿ ಬಹುತೇಕ ಕುಸಿದಿದೆ. ಶಬ್ದ ಕೇಳಿ ಎಚ್ಚೆತ್ತು ಮನೆಯಿಂದ ಹೊರಗೆ ಓಡಿದುದರಿಂದ ಸಂಭವನೀಯ ಭಾರೀ ಅಪಾಯ ತಪ್ಪಿದೆ. ಘಟನೆಯಿಂದ ಭಾರೀ ನಾಶನಷ್ಟ ಸಂಭವಿಸಿದೆ.ಕಿನ್ನಿಂಗಾರು ಸಮೀಪದ ಬೆಳೇರಿ ಕೊರಗಪ್ಪ ಪೂಜಾರಿ ಅವರ ಮನೆಗೂ ಗುಡ್ಡ ಜರಿದು ಬಿದ್ದಿದೆ. ಕಿನ್ನಿಂಗಾರಿನಲ್ಲಿ ಅಪ್ಪ ಕುಂಞಿ ಬೆಳ್ಚಪ್ಪಾಡರ ಮನೆ ಬಳಿಯ ಕಂಪೌಂಡ್‌ ಗೋಡೆ ಕುಸಿದು ಬಿದ್ದಿದೆ.

ಗುತ್ಯಡ್ಕ-ಕಕ್ಕೆಬೆಟ್ಟು-ಕಾಯರ್‌ಪದವುಗೆ ತೆರಳುವ ರಸ್ತೆಗೆ ಗುಡ್ಡೆ ಜರಿದು ರಸ್ತೆತುಂಬಾ ಮಣ್ಣು ತುಂಬಿ ರಸ್ತೆತಡೆಉಂಟಾಗಿದೆ. ನಾಗರಿಕರು ಸಕಾಲಿಕ ಕಾರ್ಯಚರಣೆ ನಡೆಸಿ ಮಣ್ಣು ತೆರವುಗೊಳಿಸಿದರು.

ಗುತ್ಯಡ್ಕ ಸಮೀಪದ ರೋಹಿತ್‌ ಅವರ ಕೃಷಿತೋಟಕ್ಕೆ ಸಮೀಪದ ಗುಡ್ಡ ಜರಿದು  ಸುಮಾರು 10ರಬ್ಬರ್‌ ಗಿಡ ಹಾಗೂ 10 ಕಂಗು ಮುರಿದುಹೋಗಿದೆ.ಬೆಳ್ಳೂರಿನಲ್ಲಿ ಅಮರಾವತಿ ಅವರ ಹೆಂಚಿನ ಮನೆಯ ಛಾವಣಿ ಶುಕ್ರವಾರ ರಾತ್ರಿ ಗಾಳಿ ಮಳೆಗೆ ಹಾನಿಗೀಡಾಗಿದೆ.ಬೆಳ್ಳೂರು ಸಮೀಪದ ಎಡಮೊಗರು ಎಂಬಲ್ಲಿರುವ ದೆ„ವಸ್ಥಾನದ ಸಮೀಪದ ಗುಡ್ಡೆ ಜರಿದಿದೆ.ಹಾನಿ ಗೀಡಾದ ಸ್ಥಳಗಳಿಗೆ ಜನಪ್ರತಿನಿ ಧಿಗಳು ಹಾಗೂ ಕೃಷಿ, ಹಾಗೂ ಗ್ರಾಮಾ ಕಾರಿಗಳು, ಹಾಗೂ ಇನ್ನಿತರರು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿಯಿಂದ ಪದೇ ಪದೇ ಭಾರೀ ಮಳೆಯಾಗುತ್ತಿದ್ದು, ಅಪಾರ ನಾಶನಷ್ಟ ಸಂಭವಿಸಿದೆ. ಮಳೆಯಿಂದಾಗಿ ಅಲ್ಲಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡ ಬಿದ್ದಿದ್ದು, ಬಸ್‌, ಲಾರಿ, ದ್ವಿಚಕ್ರ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿಕೊಂಡಿದೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Madikeri ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ಸಾವು

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Sea ಹಠಾತ್‌ ಉಬ್ಬರ ಸಾಧ್ಯತೆ: ರೆಡ್‌ ಅಲರ್ಟ್‌ ಘೋಷಣೆ

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Manjeshwar ಹಟ್ಟಿ ಬೆಂಕಿಗಾಹುತಿ: ಹಸುಗಳು ಪಾರು

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

Kasaragod 6.96 ಕೋಟಿ ರೂ. ಅಮಾನ್ಯ ನೋಟು : ಕ್ರೈಂ ಬ್ಯಾಂಚ್‌ ತನಿಖೆ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.