ಕಾಸರಗೋಡು: ಭಾರೀ ಗಾಳಿ, ಮಳೆ; ವ್ಯಾಪಕ ನಷ್ಟ

ಮೂಸೋಡಿಯಲ್ಲಿ ಇನ್ನೊಂದು ಮನೆ ಸಮುದ್ರಪಾಲು, 5 ಕುಟುಂಬಗಳ ಸ್ಥಳಾಂತರ

Team Udayavani, Aug 8, 2019, 5:29 PM IST

Kasaragod

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ ರಾತ್ರಿಯಿಂದ ಗಾಳಿ, ಮಳೆ ಮತ್ತೆ ಬಿರುಸುಗೊಂಡಿದ್ದು ಭಾರೀ ನಷ್ಟ ಸಂಭವಿಸಿದೆಮೂಸೋಡಿಯಲ್ಲಿ ಇನ್ನೊಂದು ಮನೆ ಸಮುದ್ರಪಾಲಾಗಿದ್ದು, ಐದು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ ಜಿಲ್ಲಾಧಿಕಾರಿ ಡಾ|ಡಿ.ಸಜಿತ್‌ಬಾಬು ಶಾಲಾ ಕಾಲೇಜುಗಳಿಗೆ ರಜೆ ಸಾರಿದ್ದರು. ಅಂಗನವಾಡಿಗಳಿಗೂ, ಮದರಸಾಗಳಿಗೂ ರಜೆ ಸಾರಲಾಗಿತ್ತು. ಮಳೆಯ ಜತೆ ಭಾರೀ ಗಾಳಿ ಬೀಸುತ್ತಿರುವುದರಿಂದ ನಷ್ಟ ಹೆಚ್ಚಲು ಕಾರಣವಾಗಿದೆ.

ಮನೆಗಳು ಜಲಾವೃತ
ಕಾಸರಗೋಡು ನಗರಸಭೆಯ ಆಶ್ರಯ ಯೋಜನೆಯಲ್ಲಿ ಕೊರಕ್ಕೋಡು ಬಯಲಿನಲ್ಲಿ ನಿರ್ಮಿಸಲಾಗಿದ್ದ ಮನೆಗಳು ನೀರಿನಿಂದ ಆವೃತವಾಗಿದೆ. ಪಕ್ಕದ ಚಂದ್ರಗಿರಿ ಹೊಳೆ ತುಂಬಿ ತುಳುಕುತ್ತಿದೆ. ವಯಲಾಂಕುಳಿಯಲ್ಲಿ ಹೆಚ್ಚಿನ ಪ್ರದೇಶಗಳು ನೀರಿನಿಂದ ಆವೃತ್ತವಾಗಿದ್ದು, ಭತ್ತದ ಹೊಲಗಳೂ ನೀರಿನಲ್ಲಿ ಮುಳುಗಿವೆ. ಜಿಲ್ಲೆಯ ಮಲೆನಾಡ ಪ್ರದೇಶಗಳಲ್ಲಿ ಬಿರುಗಾಳಿಗೆ ಹಲವು ಕಂಗು ಮತ್ತು ತೆಂಗಿನ ಮರಗಳು ಬುಡಸಮೇತ ಮಗುಚಿ ಬಿದ್ದಿದೆ. ಇತರ ಕೃಷಿಗಳು ಹಾನಿಗೀಡಾಗಿವೆ.

ಬಂದಡ್ಕ ಚಾಮಕೊಚ್ಚಿ ಚಾಪಕ್ಕಲ್‌ನ ಕೋರ್ಪಾಳು ಅವರ ಮೇಲೆ ಮರ ಬಿದ್ದಿದೆ. ಮೀಯಪದವು ಕುಳವಯಲ್‌ನಲ್ಲಿ ಬಾಡೂರಿನ ಬಡುವನ್‌ ಕುಂಞಿ ಅವರ ಮನೆಯ ಪಕ್ಕದ ದೊಡ್ಡಿಗೆ ಸಿಡಿಲು ಬಡಿದು ದನ ಮತ್ತು ಕರು ಸಾವಿಗೀಡಾಗಿದೆ. ಮನೆಗೂ ಸಿಡಿಲು ಬಡಿದು ವಿದ್ಯುತ್‌ ಉಪಕರಣಗಳು, ವಯರ್‌ ಬೆಂಕಿಗಾಹುತಿಯಾಗಿದೆ. ಮನೆಗೂ ಹಾನಿಯಾಗಿದೆ.

ಸುಮಾರು ಒಂದು ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ. ಆಲಂಪಾಡಿ ಅನಾಥಾಲಯದ ಬಳಿಯ ಅಬ್ದುಲ್‌ ಖಾದರ್‌ ಅವರ ಹೆಂಚು ಹಾಸಿದ ಮನೆಯ ಮೇಲ್ಛಾವಣಿ ಬಿರುಗಾಳಿಯಿಂದ ಕುಸಿದು ಬಿದ್ದಿದೆ. ಬಂದಡ್ಕ ಚಾಪಕ್ಕಲ್‌ ತೂಕ್ಕೂಟ್‌ ನಾಯ್ಕ ಅವರ ಬೈಕ್‌ನ ಮೇಲೆ ಮರ ಬಿದ್ದು ಹಾನಿಗೀಡಾಗಿದೆ. ಬಿರುಗಾಳಿಗೆ ಕುತ್ತಿಕೋಲ್‌ ವಿದ್ಯುತ್‌ ಕಚೇರಿ ಸಂಪರ್ಕ ಮೊಟಕುಗೊಂಡಿದೆ. ಪಾಲಾರ್‌ನಲ್ಲಿ ಎರಡು, ಚಾಮಕೊಚ್ಚಿ, ಮಲ್ಲಂಪಾರೆ ಮತ್ತು ಮಾಕಟ್ಟೆಯಲ್ಲಿ ಒಂದರಂತೆ ವಿದ್ಯುತ್‌ ಕಂಬ ಕುಸಿದು ಬಿದ್ದಿದೆ.

ವೆಳ್ಳರಿಕುಂಡು ತಾಲೂಕಿನಲ್ಲಿ ಅತೀ ಹೆಚ್ಚು ಮಳೆ ಸುರಿಯುತ್ತಿದೆ. ಅಲ್ಲಿ ಭಾರೀ ನಾಶನಷ್ಟ ಸಂಭವಿಸಿದೆ. ಚೆರ್ವತ್ತೂರು ಮತ್ತು ಸಮೀಪ ಪ್ರದೇಶಗಳಲ್ಲಿ ಬಿರುಗಾಳಿಗೆ ಮೇಲ್ಸೇತುವೆ ರಸ್ತೆಯ ಕೃಷಿ ಭವನ ಬಳಿ ನಿಲ್ಲಿಸಲಾಗಿದ್ದ ಕುಟ್ಟಮತ್ತ್ ಪೊನ್ನಲದ ಟಿ.ಮೋಹನ್‌ ಅವರ ಕಾರಿನ ಮೇಲೆ ಮರ ಬಿದ್ದು ಸಂಪೂರ್ಣ ಹಾನಿಗೀಡಾಗಿದೆ. ಅಲ್ಲೇ ಪಕ್ಕದ ದಿನೇಶ್‌ ಉತ್ಪನ್ನಗಳ ಸ್ಟಾಲ್‌ನ ಎದುರುಗಡೆಯ ಶೀಟ್‌ ಹಾನಿಗೀಡಾಗಿದೆ. ಬೈಕ್‌ ಕೂಡಾ ಹಾನಿಯಾಗಿದೆ. ಹೊಸದುರ್ಗ ಮಡಿಕೈಯ ತಂಡಾರ ಕಾತ್ಯಾìಯಿನಿ ಅವರ ಮನೆ ಮೇಲೆ ಮರ ಬಿದ್ದು ಹಾನಿಗೀಡಾಗಿದೆ.

ಅಂಗಡಿಗೆ ನುಗ್ಗಿದ ನೀರು
ಬುಧವಾರ ರಾತ್ರಿ ಸುರಿದ ಮಳೆಯಿಂದ ಹಳೆ ಬಸ್‌ ನಿಲ್ದಾಣದಲ್ಲಿರುವ ಕೆಲವು ಅಂಗಡಿಯೊಳಗೆ ನೀರು ನುಗ್ಗಿದೆ. ಹೊಟೇಲ್‌ ಸಹಿತ ಆರು ಅಂಗಡಿಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದೆ.

ಕಡಲ್ಕೊರೆತ ತೀವ್ರ
ಮೂಸೋಡಿಯಲ್ಲಿ ಬುಧವಾರ ರಾತ್ರಿ ಅಬ್ದುಲ್ಲ ಅವರ ಮನೆ ಸಮುದ್ರ ಪಾಲಾಗಿದೆ. ನೆಫೀಸ ಅವರ ಮನೆ ಯಾವುದೇ ಕ್ಷಣದಲ್ಲೂ ನೀರು ಪಾಲಾಗುವ ಭೀತಿ ಉಂಟಾಗಿದೆ. ಈ ಪರಿಸರದ ಅಬ್ಟಾಸ್‌, ಮೊಹಮ್ಮದ್‌ ಹನೀಫ್‌, ಅಬ್ದುಲ್‌ ಮಜೀದ್‌, ಮೊದು, ಮರಿಯುಮ್ಮ ಕುಟುಂಬಗಳನ್ನು ಸಮೀಪದ ಶಾಲೆಗೆ ಸ್ಥಳಾಂತರಿಸಲಾಗಿದೆ. ಅಲ್ಲದೆ ಇನ್ನೂ 8 ಮನೆಗಳು ಅಪಾಯದಂಚಿನಲ್ಲಿವೆ. ಮಣಿಮುಂಡ, ಶಾರದಾನಗರ, ಹನುಮಾನ್‌ ನಗರದಲ್ಲೂ ಕಡಲ್ಕೊರೆತ ಭೀತಿ ಉಂಟಾಗಿದೆ.

ಮಂಗಲ್ಪಾಡಿ ಪಂಚಾಯತ್‌ ವ್ಯಾಪ್ತಿಯ ಶಿರಿಯದಲ್ಲಿ ಕಡಲ್ಕೊರೆತ ವ್ಯಾಪಕಗೊಂಡಿದೆ. ಈ ಪರಿಸರದ ಮೊದೀನ್‌ ಕುಂಞಿ, ಉಸ್ಮಾನ್‌, ಬೀಫಾತಿಮ್ಮ, ಮರಿಯುಮ್ಮ, ಹಾಜಿರ, ಅಶ್ರಫ್‌, ಯೂಸಫ್‌ ಅವರ ಮನೆ ಅಪಾಯದಂಚಿನಲ್ಲಿದೆ.

ಜಿಲ್ಲೆಯಲ್ಲಿ 2015.776 ಮಿ.ಮೀ. ಮಳೆ
ಜಿಲ್ಲೆಯಲ್ಲಿ ಬಿರುಸಿನ ಮಳೆ ಆರಂಭಗೊಂಡ ನಂತರ ಈ ವರೆಗೆ 2015.776 ಮಿ.ಮೀ. ಮಳೆ ಬಿದ್ದಿದೆ. ಕಳೆದ 24 ತಾಸುಗಳಲ್ಲಿ 57.662 ಮಿ.ಮೀ. ಮಳೆ ಸುರಿದಿದೆ. ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 13 ಮನೆಗಳು ಪೂರ್ಣರೂಪದಲ್ಲಿ, 186ಮನೆಗಳು ಭಾಗಶ: ಹಾನಿಗೊಂಡಿವೆ. ಕಳೆದ 24 ತಾಸುಗಳಲ್ಲಿ 8 ಮನೆಗಳು ಅರ್ಧಾಂಶ ನಾಶವಾಗಿವೆ. ಜಿಲ್ಲೆಯಲ್ಲಿ ಈವರೆಗೆ 2,46,87,600 ರೂ.ನ ಕೃಷಿ ನಾಶ ಗಣನೆ ಮಾಡಲಾಗಿದೆ. 348.52606 ಹೆಕ್ಟೇರ್‌ ಕೃಷಿ ಜಾಗಕ್ಕೆ ಹಾನಿಯಾಗಿದೆ.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.