ಕಾಸರಗೋಡು ಲೋಕಸಭಾ ಕ್ಷೇತ್ರ: ತ್ರಿಕೋನ ಹಣಾಹಣಿ


Team Udayavani, Apr 15, 2019, 6:30 AM IST

trikona

ಕಾಸರಗೋಡು: ಕಾಸರಗೋಡು ಲೋಕಸಭಾ ಕೇತ್ರದಲ್ಲಿ ಒಂಭತ್ತು ಮಂದಿ ಅಭ್ಯರ್ಥಿಗಳಿದ್ದರೂ ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆ ನಡೆಯುತ್ತಿದೆ.

ಎನ್‌ಡಿಎಯ ಬಿಜೆಪಿ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು, ಎಲ್‌ಡಿಎಫ್‌ನ ಸಿಪಿಎಂ ಅಭ್ಯರ್ಥಿ ಕೆ.ಪಿ.ಸತೀಶ್ಚಂದ್ರನ್‌, ಯುಡಿಎಫ್‌ನ ಕಾಂಗ್ರೆಸ್‌ ಅಭ್ಯರ್ಥಿ ರಾಜ್‌ಮೋಹನ್‌ ಉಣ್ಣಿತ್ತಾನ್‌ ಮಧ್ಯೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಜಿದ್ದಾಜಿದ್ದಿನ ತ್ರಿಕೋನ ಸ್ಪರ್ಧೆಯ ಕಣವಾಗಿರುವ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಚುನಾವಣಾ ಪ್ರಚಾರ ಕಾವೇರುತ್ತಿದೆ. ಸಿಪಿಎಂನ ಭದ್ರಕೋಟೆ ಎಂದೇ ಪರಿಗಣಿಸಿರುವ ಈ ಕ್ಷೇತ್ರದಲ್ಲಿ ಈ ಬಾರಿಯೂ ಗೆಲುವು ಶತಸಿದ್ಧ. ಈ ಮೂಲಕ ಗೆಲುವಿನ ಓಟ ಮುಂದುವರಿಯಲಿದೆ ಎಂದು ಸಿಪಿಎಂ ಅಭ್ಯರ್ಥಿ ಪಿ.ಕೆ.ಸತೀಶ್ಚಂದ್ರನ್‌ ವಿಶ್ವಾಸ ವ್ಯಕ್ತಪಡಿಸುತ್ತಾರೆ. ಅದೇ ವೇಳೆ ಕಾಸರಗೋಡು ಕ್ಷೇತ್ರವನ್ನು ಸಿಪಿಎಂನಿಂದ ಕಸಿದು ಕೊಳ್ಳುವುದು ಖಚಿತ ಎನ್ನುತ್ತಾರೆ ಕಾಂಗ್ರೆಸ್‌ ಅಭ್ಯರ್ಥಿ ರಾಜ್‌ಮೋಹನ್‌ ಉಣ್ಣಿತ್ತಾನ್‌. ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅಲೆಯಿಂದ ಕಾಸರಗೋಡು ಲೋಕಸಭಾ ಕ್ಷೇತ್ರದಲ್ಲಿ ಅಚ್ಚರಿಯ ಗೆಲುವು ಸಾಧಿಸುವುದಾಗಿ ಬಿಜೆಪಿ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಖಚಿತ ಭರವಸೆ ವ್ಯಕ್ತಪಡಿಸುತ್ತಾರೆ. ಈ ಮೂವರು ಅಭ್ಯರ್ಥಿಗಳಿಗೂ ಗೆಲುವಿನ ನಿರೀಕ್ಷೆಯನ್ನು ಹೊಂದಿದ್ದು, ತಮ್ಮದೇ ಆದ ಲೆಕ್ಕಾಚಾರ ಮುಂದಿಡುತ್ತಿದ್ದಾರೆ.

ಅಭಿವೃದ್ಧಿ ಮಂತ್ರ
ಹಿಂದಿನ ಕಾಂಗ್ರೆಸ್‌ ನೇತೃತ್ವದ ಐಕ್ಯರಂಗ ಸರಕಾರ ಕಾಸರಗೋಡಿನ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ನೀಡಿದೆ. ಈ ಹಿನ್ನೆಲೆಯಲ್ಲಿ ಡಾ|ಪ್ರಭಾಕರನ್‌ ಆಯೋಗ ನೇಮಿಸಿದೆ. ಆಯೋಗ ಶಿಫಾರಸಿನಂತೆ ಸಾಕಷ್ಟು ಅನುದಾನ ಕಾಸರಗೋಡಿಗೆ ಬಿಡುಗಡೆಗೊಳಿಸಿದೆ. ಕಾಸರಗೋಡಿನಲ್ಲಿ ಕೇಂದ್ರೀಯ ವಿಶ್ವವಿದ್ಯಾಲಯ, ವೈದ್ಯಕೀಯ ಕಾಲೇಜು, ಎಚ್‌ಎಎಲ್‌ ಮೊದಲಾದ ಅಭಿವೃದ್ಧಿ ಕೆಲಸಗಳ ಬಗ್ಗೆ ಕಾಂಗ್ರೆಸ್‌ ಅಭ್ಯರ್ಥಿ ರಾಜ್‌ಮೋಹನ್‌ ಉಣ್ಣಿತ್ತಾನ್‌ ಹೇಳುತ್ತಿದ್ದಾರೆ.

ಹಾಲಿ ಸಂಸದ ಪಿ.ಕರುಣಾಕರನ್‌ ಕಾಸರಗೋಡು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯನ್ನು ನಡೆಸಿದ್ದು, ಕರುಣಾಕರನ್‌ ಮಾಡಿರುವ ಅಭಿವೃದ್ಧಿ ಕೆಲಸದಿಂದ ಈ ಬಾರಿಯೂ ಗೆಲುವು ಸುಲಭವಾಗಲಿದೆ ಎಂದು ಕೆ.ಪಿ.ಸತೀಶ್ಚಂದ್ರನ್‌ ಅವರು ಭರವಸೆ ವ್ಯಕ್ತಪಡಿಸುತ್ತಾರೆ.ಕಾಸರಗೋಡು ಜಿಲ್ಲೆಯನ್ನೇ ನಡುಗಿಸಿದ ಎಂಡೋಸಲ್ಫಾನ್‌ ಸಿಂಪಡಣೆ, ಅಡಿಕೆ ಬೆಳೆ ಪ್ರಸ್ತಾಪ, ಕಸ್ತೂರಿ ರಂಗನ್‌ ವರದಿ, ಬೆಲೆಯೇರಿಕೆ, ಭ್ರಷ್ಟಾಚಾರ, ಶಬರಿಮಲೆ ಇವೇ ಮೊದಲಾದವು ಚುನಾವಣಾ ಪ್ರಚಾರದಲ್ಲಿ ಸ್ಥಾನ ಪಡೆದಿದೆ.

ಕಾಸರಗೋಡಿನ ವಾಣಿಜ್ಯ ಬೆಳೆ, ಸಾವಿರಾರು ಮಂದಿಯ ಜೀವನಕ್ಕೆ ದಾರಿ ತೋರಿದ ಅಡಿಕೆ ಕೃಷಿಕರು ಕಂಗಾಲಾಗಿದ್ದಾರೆ. ಅಡಿಕೆ ಕೃಷಿಕರ ಸಂರಕ್ಷಣೆಗಾಗಿ ಎಡರಂಗ ಸರಕಾರ ಮತ್ತು ಐಕ್ಯರಂಗ ಸರಕಾರ ಅಡಿಕೆ ಪ್ಯಾಕೇಜ್‌ ಘೋಷಿಸಿದೆ. ಆದರೆ ಈ ವರೆಗೂ ಅಡಿಕೆ ಕೃಷಿಕರಿಗೆ ಒಂದು ಪೈಸೆಯೂ ಲಭಿಸಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಎಂಡೋಸಲ್ಫಾನ್‌ ಸಿಂಪಡನೆ
ಎಂಡೋಸಲ್ಫಾನ್‌ ಸಿಂಪಡನೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ 11 ಗ್ರಾಮ ಪಂಚಾಯತ್‌ಗಳಲ್ಲಿ ದುಷ್ಪರಿಣಾಮ ಬೀರಿದ್ದು, ಎಂಡೋ ಸಂತ್ರಸ್ತರಿಗೆ ಮಾನವ ಹಕ್ಕು ಆಯೋಗ ಶಿಫಾರಸಿನಂತೆ ನೆರವು ನೀಡಬೇಕೆಂದು ನಿರಂತರ ಹೋರಾಟ ನಡೆದಿದ್ದರೂ, ರಾಷ್ಟ್ರೀಯ ಮಾನವ ಹಕ್ಕು ಶಿಫಾರಸಿನಂತೆ ಬಹುಪಾಲು ಆದೇಶಗಳು ಜಾರಿಯಾಗಿಲ್ಲ ಎಂದು ಬಿಜೆಪಿ ಆರೋಪಿಸುತ್ತಿದೆ.
ಒಟ್ಟಾರೆ ಈ ಚುನಾವಣೆಯಲ್ಲಿ ‌§ಳೀಯ ಸಮಸ್ಯೆಗಳ ಜೊತೆ ರಾಷ್ಟ್ರೀಯ ಸಮಸ್ಯೆಗಳು ಪ್ರಚಾರದಲ್ಲಿ ಪ್ರಮುಖ ಅಸ್ತÅವಾಗಿದೆ.

ಭಾಷಾ ಅಲ್ಪಸಂಖ್ಯಾತರ ಸಮಸ್ಯೆ
ಕಾಸರಗೋಡು ಲೋಕಸಭಾ ಕ್ಷೇತ್ರ ಸಪ್ತಭಾಷೆಗಳ ಸಂಗಮ ಭೂಮಿ. ಇಲ್ಲಿನ ಭಾಷಾ ಅಲ್ಪಸಂಖ್ಯಾತರು ಅನುಭವಿಸುತ್ತಿರುವ ಸಮಸ್ಯೆಗಳು ಹಲವು. ಕಾಸರಗೋಡಿನಲ್ಲಿ ಭಾಷಾ ಅಲ್ಪಸಂಖ್ಯಾತರು ಸಮಸ್ಯೆಗೆ ಸಿಲುಕಿದಾಗ ಭಾಷಾ ಅಲ್ಪಸಂಖ್ಯಾತರ ಪರವಾಗಿ ಹೋರಾಡಿ ವಿವಿಧ ಸವಲತ್ತುಗಳನ್ನು, ಹಕ್ಕುಗಳನ್ನು ಪಡೆಯಲು ಸಾಧ್ಯವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ರವೀಶ ತಂತ್ರಿ ಕುಂಟಾರು ಅವರು ಹೇಳುತ್ತಾರೆ. ಪಿಎಸ್‌ಸಿ ಗೆ ಮಲಯಾಳ ಕಡ್ಡಾಯಗೊಳಿಸಿದ ಸರಕಾರದ ನೀತಿಯ ವಿರುದ್ಧ ಹೋರಾಡಿ ಈ ಆದೇಶವನ್ನು ಹಿಂತೆಗೆದುಕೊಳ್ಳಲು ಬಿಜೆಪಿ ಯಶಸ್ವಿಯಾಗಿದೆ ಎಂದು ಬಿಜೆಪಿ ಚುನಾವಣಾ ಪ್ರಚಾರದಲ್ಲಿ ಪ್ರಮುಖ ವಿಷಯವಾಗಿ ಭಾಷಾ ಅಲ್ಪಸಂಖ್ಯಾತರು ಹೆಚ್ಚಿರುವ ಪ್ರದೇಶದಲ್ಲಿ ಬಳಸಿಕೊಳ್ಳುತ್ತಿದೆ. ಶಬರಿಮಲೆ ವಿಷಯ ಕೂಡಾ ಚುನಾವಣಾ ಪ್ರಚಾರಕ್ಕೆ ಬಳಸಿಕೊಳ್ಳಲಾಗಿದೆ. ಆಚಾರ ಅನುಷ್ಠಾನಗಳ ರಕ್ಷಣೆಗೆ ಕಟಿಬದ್ಧ ಎಂಬ ಪ್ರಚಾರವನ್ನೂ ನಡೆಸುತ್ತಿದೆ.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.