ಕಾಸರಗೋಡು ಮೆಡಿಕಲ್‌ ಕಾಲೇಜ್‌ ಕಟ್ಟಡಕ್ಕೆ  80 ಕೋ. ರೂ.ಮಂಜೂರು


Team Udayavani, Jul 8, 2018, 6:30 AM IST

07ksde10.jpg

ಕಾಸರಗೋಡು: ನನೆಗುದಿಗೆ ಬಿದ್ದಿರುವ, ಉಕ್ಕಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿದ ಕಾಸರಗೋಡು ಮೆಡಿಕಲ್‌ ಕಾಲೇಜು ಕಟ್ಟಡ ನಿರ್ಮಾಣ ಪ್ರಕ್ರಿಯೆಗೆ ಮತ್ತೆ ಜೀವ ಬಂದಿದ್ದು, ಆಸ್ಪತ್ರೆ ಬ್ಲಾಕ್‌ಗೆ 80 ಕೋಟಿ ರೂ. ಮಂಜೂರು ಮಾಡಲಾಗಿದೆ. ಗುತ್ತಿಗೆ ಒಪ್ಪಂದ ಪ್ರಕ್ರಿಯೆ ಪೂರ್ತಿಗೊಳಿಸಿ ಜು.11 ರಂದು ತಿರುವನಂತಪುರದಲ್ಲಿ ನಡೆಯಲಿರುವ ಟೆಕ್ನಿಕಲ್‌ ಸಮಿತಿ ಅಂಗೀಕಾರ ನೀಡಲಿದೆ.

ಕಾಸರಗೋಡು ಮೆಡಿಕಲ್‌ ಕಾಲೇಜು ಕಟ್ಟಡ ನಿರ್ಮಾಣ ಗಾಮಗಾರಿ ನಡೆಸಿ ಶೀಘ್ರದಲ್ಲೇ ಜನರ ಸೇವೆಗೆ ತೆರೆದುಕೊಡಬೇಕೆಂದು ಆಗ್ರಹಿಸಿ ಹಲವು ರಾಜಕೀಯ ಪಕ್ಷಗಳು, ಸಂಘಟನೆಗಳು ನಿರಂತರವಾಗಿ ಚಳವಳಿ ನಡೆಸಿತ್ತು. ಜು.5 ರಂದು ಬಿಜೆಪಿ ಕಾಸರಗೋಡು ಮತ್ತು ಮಂಜೇಶ್ವರ ಮಂಡಲ ಸಮಿತಿ ನೇತೃತ್ವದಲ್ಲಿ ಉಕ್ಕಿನಡ್ಕದ ಅಪೂರ್ಣ ಮೆಡಿಕಲ್‌ ಕಾಲೇಜು ಸಮುತ್ಛಯದಲ್ಲಿ ಹಟ್ಟಿ ನಿರ್ಮಿಸಿ ಜಾನುವಾರುಗಳನ್ನು ಕಟ್ಟಿ ಹಾಕಿ ಸರಕಾರದ ವಿಳಂಬ ನೀತಿಯನ್ನು ಪ್ರತಿಭಟಿಸಿತ್ತು. ಈ ಬೆನ್ನಿಗೆ 80 ಕೋಟಿ ರೂ. ಅನುಮತಿ ಲಭಿಸಿದೆ.

ತತ್‌ಕ್ಷಣ  ಕಾಮಗಾರಿ ಆರಂಭ
ಚೆನ್ನೈ ಕೇಂದ್ರೀಕರಿಸಿ ಕಾರ್ಯಾ ಚರಿಸುವ ಆರ್‌.ಆರ್‌.ಬಿಲ್ಡರ್ಸ್‌ ಎಂಬ ಸಂಸ್ಥೆಗೆ ಕಟ್ಟಡ ನಿರ್ಮಾಣ ಗಾಮಗಾರಿಯನ್ನು ವಹಿಸಿಕೊಡಲಾಗಿದೆ. ಕೆಲವು ದಿನಗಳ ಹಿಂದೆ ಸಂಸ್ಥೆಯ ಪ್ರಮುಖರು ಮೆಡಿಕಲ್‌ ಕಾಲೇಜು ಸಮುತ್ಛಯಕ್ಕೆ ಬಂದಿದ್ದು, ಭೂಮಿ ಪೂಜೆ ನಡೆಸಿದ್ದರು. ಮಳೆ ಕಡಿಮೆಯಾದ ತತ್‌ಕ್ಷಣ ನಿರ್ಮಾಣ ಕಾಮಗಾರಿ ಆರಂಭಿಸಲಿದೆ.

ಕಾಸರಗೋಡು ವಿಧಾನಸಭಾ ಕ್ಷೇತ್ರದ ಬದಿಯಡ್ಕ ಗ್ರಾಮ ಪಂ. ನ ಉಕ್ಕಿನಡ್ಕದಲ್ಲಿ ಕಾಸರಗೋಡು ಮೆಡಿಕಲ್‌ ಕಾಲೇಜು ನಿರ್ಮಾಣ ಕಾಮಗಾರಿ ಆರಂಭಿಸಿ ಅರ್ಧದಲ್ಲೇ ಮೊಟಕುಗೊಂಡಿದೆ. ಈ ಹಿಂದೆ ಈ ಕಾಲೇಜಿಗೆ ಕಾಸರಗೋಡು ಪ್ಯಾಕೇಜ್‌ನಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಆಡ್ಮಿನಿಸ್ಟ್ರೇಟಿವ್‌ ಬ್ಲಾಕ್‌ ನಿರ್ಮಾಣ ಕಾರ್ಯ ಆರಂಭಿಸಲಾಗಿದ್ದರೂ, ಆ ಬಳಿಕ ಕಾಮಗಾರಿ ನಿಲುಗಡೆಗೊಳಿಸಲಾಗಿತ್ತು. 

ನಬಾರ್ಡ್‌ನಿಂದ ಲಭಿಸಿದ 69 ಕೋಟಿ ರೂ.ಗೆ ಟೆಂಡರ್‌ ಆಗಿದ್ದರೂ, ಆ ಬಳಿಕ ರದ್ದುಗೊಳಿಸಲಾಗಿತ್ತು. ತಾಂತ್ರಿಕ ಕಾರಣದ ನೆಪದಲ್ಲಿ ಟೆಕ್ನಿಕಲ್‌ ಸಮಿತಿ ಟೆಂಡರ್‌ ರದ್ದುಗೊಳಿಸಿತ್ತು. ಇದರೊಂದಿಗೆ ಮೆಡಿಕಲ್‌ ಕಾಲೇಜು ಕಟ್ಟಡ ನಿರ್ಮಾಣ ಕಾಮಗಾರಿ ನಿಲುಗಡೆಗೊಂಡು ಈ ಕಾಲೇಜು ಇಲ್ಲಿಂದ ಬೇರೆಡೆಗೆ ಸ್ಥಳಾಂತರಗೊಳ್ಳುವ ಆತಂಕಕ್ಕೂ ಕಾರಣವಾಗಿತ್ತು. ಇದೀಗ ಮೆಡಿಕಲ್‌ ಕಾಲೇಜು ಕಟ್ಟಡ ನಿರ್ಮಾಣಕ್ಕೆ 80,26,77,000 ರೂ. ಅನುಮತಿ ಲಭಿಸಿದೆ.

ಉಕ್ಕಿನಡ್ಕದ ಆರು ಎಕರೆ ಸ್ಥಳದಲ್ಲಿ ಎಂಡೋ ಸಂತ್ರಸ್ತರ ಮತ್ತು ಇತರರ ಚಿಕಿತ್ಸೆಗಾಗಿ ಮೆಡಿಕಲ್‌ ಕಾಲೇಜು ನಿರ್ಮಾಣಕ್ಕೆ ಯೋಜಿಸಲಾಗಿತ್ತು. 2013ರ  ನ. 30 ರಂದು ಅಂದಿನ ಮುಖ್ಯಮಂತ್ರಿ ಉಮ್ಮನ್‌ಚಾಂಡಿ ಮೆಡಿಕಲ್‌ ಕಾಲೇಜಿಗೆ ಶಿಲಾನ್ಯಾಸ ಮಾಡಿದ್ದರು. ಎರಡು ವರ್ಷದೊಳಗೆ ಮೆಡಿಕಲ್‌ ಕಾಲೇಜು ಕಟ್ಟಡ ನಿರ್ಮಾಣಗೊಳ್ಳಲಿದೆ ಎಂದು ಘೋಷಿಸಲಾಗಿತ್ತು. ಅಂದು ಮೂಲ ಸೌಕರ್ಯ ಕಲ್ಪಿಸಲು ಒಂದು ಕೊನಿರ್ಮಾಣ ಕಾಮಗಾರಿ ಮೊಟಕುಗೊಂಡಿತ್ತು.

ನಿರಂತರ ಹೋರಾಟ 
ನಿರಂತರ ಹೋರಾಟ ನಡೆದಿದ್ದರೂ, ಪ್ರಯೋಜನವಾಗಲಿಲ್ಲ. ಬಿಜೆಪಿ ನೇತೃತ್ವದಲ್ಲಿ ಹಟ್ಟಿ ನಿರ್ಮಿಸಿ ಜಾನುವಾರು ಗಳನ್ನು ಕಟ್ಟಿ ಹಾಕುವ ಮೂಲಕ ನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿತ್ತು.

385 ಕೋಟಿ ರೂ ವೆಚ್ಚ ನಿರೀಕ್ಕೆ 
ಕಾಸರಗೋಡು ಮೆಡಿಕಲ್‌ ಕಾಲೇಜಿಗೆ ಒಟ್ಟು 385 ಕೋಟಿ ರೂ. ವೆಚ್ಚ ನಿರೀಕ್ಷಿಸಲಾಗಿದೆ. ವಿದ್ಯುದ್ದೀಕರಣಕ್ಕೆ  ಆರು ಕೋಟಿ ರೂ., ರೆಸಿಡೆನ್ಶಿಯಲ್‌ ಸೌಕರ್ಯಗಳಿಗೆ ಮತ್ತು ಹಾಸ್ಟೆಲ್‌ ಮೊದಲಾದ ಕಟ್ಟಡಗಳ ನಿರ್ಮಾಣಕ್ಕೆ 150 ಕೋಟಿ ರೂ. ವೆಚ್ಚ ನಿರೀಕ್ಷಿಸಲಾಗಿದೆ.

ಟಾಪ್ ನ್ಯೂಸ್

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kasaragod ಆನ್‌ಲೈನ್‌ ಟ್ರೇಡಿಂಗ್‌ ಮೂಲಕ 80.49 ಲಕ್ಷ ರೂ. ಲಪಟಾವಣೆ

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kerala: ದ್ವಿಚಕ್ರ ವಾಹನ ಹಿಂಬದಿ ಸವಾರ ಮಾತನಾಡಿದರೂ ದಂಡ!

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kumbla ಆತ್ಮಹತ್ಯೆ ಯತ್ನ ವೇಳೆ ಹಗ್ಗ ತುಂಡಾಗಿ ಬಿದ್ದು ಗಾಯಗೊಂಡಿದ್ದ ಮಹಿಳೆ ಸಾವು

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Kodagu: ಗಾಳಿ ಮಳೆಯ ಹೊಡೆತಕ್ಕೆ ಧರೆಗುರುಳಿದ ಮರಗಳು, ಕುಸಿದ ಧರೆ: ಹಲವೆಡೆ ಆತಂಕ ಸೃಷ್ಟಿ

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

Madikeri ಮಳೆಯಿಂದ ಉದುರುತ್ತಿರುವ ಕಾಫಿಕಾಯಿ: ಬೆಳೆಗಾರ ಕಂಗಾಲು

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Screenshot (2)

Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್‌. ರೈ

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.