ಕಾಸರಗೋಡು: ಮೂವರಿಗೆ ಸೋಂಕು ; 6 ಮಂದಿ ಗುಣಮುಖ
Team Udayavani, Jun 8, 2020, 8:01 AM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಜಿಲ್ಲೆಯಲ್ಲಿ ರವಿವಾರ ಮೂವರಿಗೆ ಕೊರೊನಾ ಪಾಸಿಟಿವ್ ವರದಿಯಾಗಿದೆ. ಬಾಧಿತರಲ್ಲಿ ಇಬ್ಬರು ಮಹಾರಾಷ್ಟ್ರದಿಂದ, ಒಬ್ಬರು ಕುವೈಟ್ನಿಂದ ಆಗಮಿಸಿದವರು. ಕುವೈಟ್ನಿಂದ ಆಗಮಿಸಿದ್ದ ಕಾಂಞಂಗಾಡ್ ನಗರಸಭೆ ವ್ಯಾಪ್ತಿಯ 38 ವರ್ಷದ ವ್ಯಕ್ತಿ, ಮಹಾರಾಷ್ಟ್ರದಿಂದ ಬಂದ ಚೆರುವತ್ತೂರು ಗ್ರಾಮ ಪಂಚಾಯತ್ನ 33 ವರ್ಷದ ವ್ಯಕ್ತಿ ಮತ್ತು ಪುಲ್ಲೂರು – ಪೆರಿಯ ಗ್ರಾ.ಪಂ.ನ 63 ವರ್ಷದ ವ್ಯಕ್ತಿ ಬಾಧಿತರು ಎಂದು ಜಿಲ್ಲಾ ವೈದ್ಯಾಧಿಕಾರಿ
ಡಾ| ಎ.ವಿ. ರಾಮದಾಸ್ ತಿಳಿಸಿದ್ದಾರೆ.
ಇದೇ ವೇಳೆ ಉಕ್ಕಿನಡ್ಕದ ಕಾಸರಗೋಡು ಮೆಡಿಕಲ್ ಕಾಲೇಜಿನಲ್ಲಿ ದಾಖಲಾಗಿದ್ದ 6 ಮಂದಿ ಸೋಂಕು ಮುಕ್ತರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.ಮಹಾರಾಷ್ಟ್ರದಿಂದ ಆಗಮಿಸಿದ್ದ ಕುಂಬಳೆ ಗ್ರಾ.ಪಂ. ವ್ಯಾಪ್ತಿಯ 56, 46, 57 ವರ್ಷದ ವ್ಯಕ್ತಿಗಳು, ಮಂಗಲ್ಪಾಡಿಯ 33 ವರ್ಷದ ವ್ಯಕ್ತಿ, ದುಬಾೖಯಿಂದ ಬಂದಿದ್ದ ಮಧೂರು ಪಂಚಾಯತ್ ನ 68 ವರ್ಷದ ವ್ಯಕ್ತಿ, ಕೋಡೋಂ-ಬೇಳೂರು ಪಂಚಾಯತ್ನ 32 ವರ್ಷದ ವ್ಯಕ್ತಿ ಗುಣಮುಖರಾದವರು.
ಕೇರಳದಲ್ಲಿ 107 ಪ್ರಕರಣ
ಕೇರಳದಲ್ಲಿ ರವಿವಾರ 107 ಮಂದಿಗೆ ಕೊರೊನಾ ಸೋಂಕು ದೃಢವಾಗಿದೆ. ಅವರಲ್ಲಿ 71 ಮಂದಿ ವಿದೇಶದಿಂದ, 28 ಮಂದಿ ಇತರ ರಾಜ್ಯಗಳಿಂದ ಬಂದವರು. ಮೃತ ವೈದ್ಯರಿಗೆ ಸೋಂಕು ಇರಲಿಲ್ಲ ತಮಿಳುನಾಡಿನಿಂದ ಬಂದು ಕ್ವಾರಂಟೈನ್ನಲ್ಲಿರುವಾಗ ಮೃತಪಟ್ಟ ಆಯುರ್ವೇದ ವೈದ್ಯ ತಳಂಗರೆ ಗಝಲಿ ನಗರದ ರಾಮಚಂದ್ರನ್ ವೈದ್ಯರ್ (76) ಅವರಿಗೆ ಕೋವಿಡ್ ಪರೀಕ್ಷೆಯಲ್ಲಿ ನೆಗೆಟಿವ್ ಫಲಿತಾಂಶ ಬಂದಿದೆ. ಮೃತ ದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಯಿತು.