ಕಾಸರಗೋಡು-ಕೊಚ್ಚುವೇಲಿ: 66,405 ಕೋಟಿ ರೂ. ಯೋಜನೆ

ಹೈಸ್ಪೀಡ್‌ ರೈಲು : ತಜ್ಞರ ತಂಡದಿಂದ ಅಧ್ಯಯನ

Team Udayavani, Nov 21, 2019, 4:55 AM IST

gg-7

ಕಾಸರಗೋಡು: ಕೇರಳ ರಾಜ್ಯದ ಮಹತ್ವಾಕಾಂಕ್ಷೆಯ ಯೋಜನೆಯಾದ ಕಾಸರಗೋಡು- ಕೊಚ್ಚುವೇಲಿ ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆಯನ್ನು ಸಾಕಾರಗೊಳಿಸಲು ತಜ್ಞರ ತಂಡ ಕಾಸರಗೋಡು ಸಹಿತ ವಿವಿಧೆಡೆಗೆ ಭೇಟಿ ನೀಡಿ ಸಮೀಕ್ಷೆ ನಡೆಸಲಿದೆ. ಈಗಾಗಲೇ ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆಯ ಸಾಧ್ಯತೆಯ ಬಗ್ಗೆ ಕೇರಳ ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕೇರಳ ರೈಲ್ವೇ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌ತಜ್ಞರ ತಂಡ ಮಲಬಾರ್‌ ಪ್ರದೇಶಕ್ಕೆ ಮುಂದಿನ ತಿಂಗಳು ಭೇಟಿ ನೀಡಿ ಪರಿಶೋಧಿಸಲಿದೆ. ಆ ಬಳಿಕ ಜನವರಿ ತಿಂಗಳಲ್ಲಿ ವರದಿಯನ್ನು ಸಮರ್ಪಿಸಲಿದೆ.

ಪ್ಯಾರಿಸ್‌ನ ಸಿಸ್ಟ್ರ ಕಂಪೆನಿ ಈಗಾಗಲೇ ಕೇರಳದಲ್ಲಿ ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆ ಸಾಕಾರಗೊಳಿಸುವ ಬಗ್ಗೆ ಅಧ್ಯಯನ ವರದಿ ಸಲ್ಲಿಸಿದೆ. ಹೈಸ್ಪೀಡ್‌ ರೈಲು ಯೋಜನೆಯ ಕುರಿತಾಗಿ ಪ್ರಸ್ತಾವ ಬಂದ ಐದು ವರ್ಷಗಳ ಬಳಿಕ ಸಾಧ್ಯತೆ ಅಧ್ಯಯನ ವರದಿಯನ್ನು ಸಲ್ಲಿಸಲಾಗಿದೆ. ಕಾಸರಗೋಡಿನಿಂದ ಕೊಚ್ಚುವೇಲಿ ತನಕ ನಾಲ್ಕು ಹಂತಗಳಲ್ಲಿ ಯೋಜನೆಯನ್ನು ಸಾಕಾರಗೊಳಿಸಲು ಯೋಜಿಸಲಾಗಿದೆ.

ಪ್ರಥಮ ಅಲೈನ್‌ಮೆಂಟ್‌ನಲ್ಲಿ ಪ್ರಸ್ತುತ ಇರುವ ರೈಲು ಹಳಿಗೆ ಸಮಾನಾಂತರವಾಗಿ ಮೇಲ್ಭಾಗದಲ್ಲಿ ರೈಲು ಹಳಿ ನಿರ್ಮಿಸುವ ಯೋಜನೆ ಬಗ್ಗೆ ಚಿಂತಿಸಲಾಗಿತ್ತು. ಆದರೆ ರೈಲು ಹಳಿಯಲ್ಲಿ ಸಮಾನಾಂತರವಾಗಿ ಕಾಂಕ್ರೀಟ್‌ ಕಂಬಗಳನ್ನು ನಿರ್ಮಿಸಿ ಆಗಸದಲ್ಲಿ ಹಳಿ ಬರುವ ಸಂದರ್ಭದಲ್ಲಿ ನಗರ ಪ್ರದೇಶದ ಕಟ್ಟಡಗಳನ್ನು ಮುರಿದು ತೆಗೆಯಬೇಕಾದ ಪರಿಸ್ಥಿತಿ ಎದುರಾಗಲಿದೆ. ಇದು ಭೂಸ್ವಾಧೀನಕ್ಕಿಂತ ಅಧಿಕ ವೆಚ್ಚವಾಗಲಿದೆ. ಈ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ ಜಿಲ್ಲೆಗಳಲ್ಲಿ ಅಲೈನ್‌ಮೆಂಟ್‌ ಬದಲಾಯಿಸ ಲಾಯಿತು. ಪ್ರಸ್ತುತ ಇರುವ ರೈಲು ಹಳಿಗೆ ಸಮಾನಾಂತರವಾಗಿ ನಗರಗಳನ್ನು ಬಿಟ್ಟು ನೂತನ ಅಲೈನ್‌ಮೆಂಟ್‌ ಅನುಸರಿಸಿ ಸಾಧ್ಯತಾ ಅಧ್ಯಯನ ವರದಿಯನ್ನು ತಯಾರಿಸಲಾಗಿದೆ. ಇದರಂತೆ ಹೆಚ್ಚಿನ ಪ್ರಮಾಣದಲ್ಲಿ ಭೂಸ್ವಾಧೀನ ಮಾಡಬೇಕಾಗಿ ಬರಲಿದೆ.

ಕಾಲಾವಧಿಯಲ್ಲಿ ಯೋಜನೆ ಸಾಕಾರ
ಹೈಸ್ಪೀಡ್‌ ರೈಲು ಕಾರಿಡಾರ್‌ ಯೋಜನೆಯ ಒಟ್ಟು ವೆಚ್ಚದ ಶೇ.26 ರಷ್ಟು ಕೇಂದ್ರ ಮತ್ತು ರಾಜ್ಯ ಸರಕಾರ ವಹಿಸಲಿದೆ. ಉಳಿದ ಮೊತ್ತವನ್ನು ಜಪಾನ್‌ ಬ್ಯಾಂಕ್‌, ಎ.ಡಿ.ಬಿ.ಐ. ಮೊದಲಾದ ಸಂಸ್ಥೆಗಳಿಂದ ಸಾಲ ಪಡೆಯಲಾಗುವುದು. ಮೂರು ವರ್ಷಗಳೊಳಗೆ ಭೂಸ್ವಾಧೀನ ಸಾಧ್ಯವಾದರೆ ನಿರೀಕ್ಷೆಯಂತೆ ನಿಗದಿತ ಕಾಲಾವಧಿಯಲ್ಲಿ ಯೋಜನೆ ಸಾಕಾರಗೊಳ್ಳಲಿದೆ.
– ವಿ.ಅಜಿತ್‌ ಕುಮಾರ್‌, ಎಂ.ಡಿ. ಕೇರಳ ರೈಲ್ವೇ ಡೆವಲಪ್‌ಮೆಂಟ್‌ ಕಾರ್ಪೊರೇಶನ್‌.

-ಹೈಸ್ಪೀಡ್‌ ರೈಲುಗಳಿಗೆ ಕಾಸರಗೋಡು, ಕಣ್ಣೂರು, ಕಲ್ಲಿಕೋಟೆ, ತಿರೂರು, ತೃಶ್ಶೂರು, ಎರ್ನಾಕುಳಂ, -ಕೋಟ್ಟಯಂ, ಚೆಂಗನ್ನೂರು, ಕೊಲ್ಲಂ, ಕೊಚ್ಚುವೇಲಿಯಲ್ಲಿ ನಿಲುಗಡೆ ನೀಡಲಾಗುವುದು.
-ಮಹತ್ವಾಕಾಂಕ್ಷೆಯ ಈ ಯೋಜನೆಗೆ ಒಟ್ಟು ವೆಚ್ಚ 66,405 ಕೋಟಿ ರೂ.
-ಮಾರ್ಗ: ಕಾಸರಗೋಡು-ಕೊಚ್ಚುವೇಳಿ ಒಟ್ಟು ದೂರ 532 ಕಿ.ಮೀ.
-ಭೂಸ್ವಾಧೀನಕ್ಕೆ ಅಗತ್ಯದ ಮೊತ್ತ 7,720 ಕೋಟಿ ರೂ. 2024ರಲ್ಲಿ ಈ ಯೋಜನೆ ಸಾಕಾರ

ಪ್ರದೀಪ್‌ ಬೇಕಲ್‌

ಟಾಪ್ ನ್ಯೂಸ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.