ಸಂಪೂರ್ಣ ಕೊಚ್ಚಿ ಹೋದ ಕಯ್ಯಾರು ಪರಂಬಳ – ಜೋಡುಕಲ್ಲು ರಸ್ತೆ


Team Udayavani, Jun 3, 2018, 6:00 AM IST

02ksde16.jpg

ಕಾಸರಗೋಡು: ಕಯ್ಯಾರು ಪರಂಬಳ – ಜೋಡುಕಲ್ಲು ರಸ್ತೆ ಸಂಪೂರ್ಣ ಕೊಚ್ಚಿ ಹೋಗಿದ್ದು,  ಪ್ರಮುಖ ರಸ್ತೆಯ ದುರಸ್ತಿ ಬಗ್ಗೆ ಕಿಂಚಿತ್ತೂ  ಗಮನ ಹರಿಸಿಲ್ಲ. ಕಳೆದ ಎರಡು ಮೂರು ವರ್ಷಗಳಿಂದ ಈ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು, ಜನ – ವಾಹನ ಸಂಚಾರಕ್ಕೆ ಹರಸಾಹಸ ಮಾಡಬೇಕಾದ ಸ್ಥಿತಿ ತಲೆದೋರಿದೆ.

2013 ರಲ್ಲಿ ಮಂಜೇಶ್ವರ ಶಾಸಕರ ವಿಶೇಷ ಅನುದಾನದಿಂದ ಸುಮಾರು 1.65 ಕೋಟಿ ರೂ. ವೆಚ್ಚದಲ್ಲಿ  ಕಾಮಗಾರಿ ನಡೆಸಲಾಗಿತ್ತು. ಆದರೆ ಕಳಪೆ ಕಾಮಗಾರಿಯಿಂದ ಒಂದೇ ವರ್ಷದಲ್ಲಿ ರಸ್ತೆ ಕೊಚ್ಚಿ ಹೋಗಿದ್ದು, ಈಗ ರಸ್ತೆ ತೋಡಾಗಿ ಪರಿಣಮಿಸಿದೆ.

ಕಯ್ಯಾರು  ಡೋನ್‌ ಬೋಸ್ಕೊ  ಶಾಲೆ,  ಕ್ರಿಸ್ತರಾಜ ದೇವಾಲಯ, ಮಸೀದಿ, ಕಜೆ ಶ್ರೀ ಜನಾರ್ದನ ದೇವಸ್ಥಾನ, ಶ್ರೀ ಮಹಮ್ಮಾಯಿ ದೇವಸ್ಥಾನ, ಅಂಗನವಾಡಿ  ಹಾಗೂ ಸಾವಿರಾರು ಮನೆಗಳು ಈ ಪ್ರದೇಶದಲ್ಲಿದ್ದು, ಜೊತೆಗೆ ಬಾಯಾರು – ಉಪ್ಪಳ, ಬಂದ್ಯೋಡು -ಪೆರ್ಮುದೆ ಸಂಪರ್ಕ ರಸ್ತೆ ಕೂಡಾ ಆಗಿದೆ. 

ಇದಲ್ಲದೆ  ಶಾಲೆಗಳಿದ್ದು ದಿನಂಪ್ರತಿ  ಸಾವಿರಾರು ಮಕ್ಕಳ ಆಶ್ರಯವಾಗಿದೆ ಈ ರಸ್ತೆ. ಮಳೆ ಬರುತ್ತಿದಂತೆ ಹೊಂಡಗಳಲ್ಲಿ ನೀರು ತುಂಬಿಕೊಂಡಿದ್ದು, ಯಾವುದು ರಸ್ತೆ, ಯಾವುದು ಹೊಂಡ ಎಂಬುದು ತಿಳಿಯದ ಸ್ಥಿತಿ ಕೂಡಾ ಉಂಟಾಗಿದೆ. ಶಾಲಾ ಮಕ್ಕಳು ಜೀವ ಕೈಯಲ್ಲಿ ಹಿಡಿದುಕೊಂಡು ಶಾಲೆಗೆ  ತಲಪಬೇಕಾದ  ಸ್ಥಿತಿ ಉಂಟಾಗಿದೆ.

ಸಾಮಾನ್ಯವಾಗಿ ರಸ್ತೆಗಳು ಹದೆಗೆಟ್ಟಲ್ಲಿ ತೇಪೆ ಹಚ್ಚಿ ದುರಸ್ತಿಗೊಳಿಸಿ  ಸಾಮಾನ್ಯವಾಗಿ ಸಂಚಾರ ಯೋಗ್ಯ ಗೊಳಿಸಲಾಗುತ್ತಿದೆ. ಆದರೆ  ಕಳೆದ ಆರು  ವರ್ಷದಲ್ಲಿ ಈ ರಸ್ತೆ ಬಗ್ಗೆ ಆಡಳಿತ ಸಮಿತಿ, ಅ ಧಿಕಾರಿಗಳು ಕಣ್ಣೆತ್ತಿ ನೋಡಿಲ್ಲ. ವರ್ಷ  ಕಳೆದಂತೆ  ಹೊಂಡಗಳ ಪ್ರಮಾಣ ಹೆಚ್ಚುತ್ತಲೇ ಇದೆ. ಆದರೆ ಅದನ್ನು ಮುಚ್ಚುವ, ದುರಸ್ತಿಗೊಳಿಸುವ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ .ವಾಹನಗಳು ಮಾತ್ರವಲ್ಲ ನಡೆದಾಡಲು ಈ ರಸ್ತೆ ಅಯೋಗ್ಯವಾಗಿದೆ. ವಾಹನಗಳ ಬಿಡಿ ಭಾಗಗಳು ಕಳಚುತ್ತಿದ್ದು, ಸಂಚಾರವೇ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪೈವಳಿಕೆ ಗ್ರಾಮ ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ ಅಧೀನತೆಯಲ್ಲಿ ಈ ರಸ್ತೆ ಇದ್ದು ಈ ಬಾರಿಯ ಮುಂಗಡಪತ್ರದಲ್ಲಿ ಪಂಚಾಯತ್‌ ನಾಲ್ಕು ಲಕ್ಷ ರೂ., ಜಿಲ್ಲಾ ಪಂಚಾಯತ್‌ ಹತ್ತು ಲಕ್ಷ ರೂ. ತೆಗೆದಿರಿಸಿದ್ದರೂ  ಲಾಭ – ನಷ್ಟದ ಲೆಕ್ಕ ಹಾಕಿ ಕೈಕಟ್ಟಿ ಕುಳಿತುಕೊಂಡಿದ್ದು, ಇದರಿಂದ ಶಾಲಾ ವಿದ್ಯಾರ್ಥಿಗಳು, ಜನಸಾಮಾನ್ಯರು ನರಕಯಾತನೆ ನಡುವೆ ಈ ರಸ್ತೆಯಲ್ಲಿ  ತೆರಳಬೇಕಾದ ಅನಿವಾರ್ಯತೆಗೆ ಸಿಲುಕಿಸಿದೆ.

ರಸ್ತೆ ಅವ್ಯವಸ್ಥೆಯ ಹಿನ್ನೆಲೆಯಲ್ಲಿ ನಾಗರಿಕರು ಪ್ರತಿಭಟನೆ ನಡೆಸುವ ನಿಟ್ಟಿನಲ್ಲೂ  ಮುಂದಾಗಿದ್ದಾರೆ.ರಸ್ತೆಯ ಅವ್ಯವಸ್ಥೆ ಬಗ್ಗೆ  ಜನಪ್ರತಿನಿಧಿಗಳು,ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ದುರಸ್ತಿಗೊಳಿಸುವ ಬಗ್ಗೆ  ಗಮನ ಹರಿಸಿಲ್ಲ. ಇದರಿಂದ ಹೋರಾಟಕ್ಕೆ ಮುಂದಾಗುತ್ತಿದ್ದಾರೆ.

ಜಿ.ಪಂ.ಗಮನಕ್ಕೆ ತರಲಾಗಿದೆ
ಗ್ರಾಮ ಪಂಚಾಯತ್‌  ಮತ್ತು ಜಿಲ್ಲಾ ಪಂಚಾಯತ್‌ನಿಂದ ಒಟ್ಟು 14 ಲಕ್ಷ ರೂ. ಮೀಸಲಿಡಲಾಗಿದೆ. ಆದರೆ ರಸ್ತೆ ಸಂಪೂರ್ಣ ಹಾಳಾಗಿರುವುದರಿಂದ  ಭಾರೀ ಮೊತ್ತದ ಅಗತ್ಯ ಇದ್ದು, ಇದರಿಂದ ಗುತ್ತಿಗೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ರಸ್ತೆ ಅವ್ಯವಸ್ಥೆ  ಬಗ್ಗೆ  ಈಗಾಗಲೇ ಜಿಲ್ಲಾ ಪಂಚಾಯತ್‌ ಆಡಳಿತ ಸಮಿತಿ  ಗಮನಕ್ಕೆ  ತರಲಾಗಿದೆ. ಆದಷ್ಟು ಬೇಗ ರಸ್ತೆ ದುರಸ್ತಿ ನಡೆಸಲು  ಗಮನ ಹರಿಸಬೇಕಿದೆ.
– ಪ್ರಸಾದ್‌ ರೈ,ಗ್ರಾ.ಪಂ.ಸದಸ್ಯೆ

ದುರಸ್ತಿಗೆ  ಕ್ರಮ ಕೈಗೊಂಡಿಲ್ಲ
ವರ್ಷಗಳಿಂದ ರಸ್ತೆ ಹದೆಗೆಟ್ಟಿದ್ದರೂ ದುರಸ್ತಿಗೆ  ಕ್ರಮ ಕೈಗೊಂಡಿಲ್ಲ. ದಿನಂಪ್ರತಿ ನೂರಾರು ವಾಹನಗಳು ಸಂಚರಿಸುವ ಈ ರಸ್ತೆಯಲ್ಲಿ ಸಂಚಾರ ದೊಡ್ಡ ಸಮಸ್ಯೆಯಾಗಿದೆ. ದೇವಸ್ಥಾ ನ, ಮಸೀದಿ, ಇಗರ್ಜಿ, ಶಾಲೆ, ಅಂಗನವಾಡಿ ಹಾಗೂ ಇನ್ನಿತರ ಕೇಂದ್ರಗಳಿದ್ದು, ಸಾವಿರಾರು ಮಂದಿ ಈ ರಸ್ತೆ ಮೂಲಕ ತೆರಳುತ್ತಿದ್ದಾರೆ.  ರಸ್ತೆಯ ಅವ್ಯವಸ್ಥೆ ವಿರುದ್ಧ ಹೋರಾಟ ಅನಿವಾರ್ಯ.
– ಜೋರ್ಜ್‌ ಡಿ’ಅಲ್ಮೇಡಾ,ನಾಗರಿಕರು

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.