School ಅಡೂರು ಶಾಲೆಯಲ್ಲಿ ಕನ್ನಡ ಬಲ್ಲ ಶಿಕ್ಷಕಿ ನೇಮಿಸಲು ಕೇರಳ ಹೈಕೋರ್ಟ್‌ ಆದೇಶ


Team Udayavani, Aug 26, 2023, 1:05 AM IST

School ಅಡೂರು ಶಾಲೆಯಲ್ಲಿ ಕನ್ನಡ ಬಲ್ಲ ಶಿಕ್ಷಕಿ ನೇಮಿಸಲು ಕೇರಳ ಹೈಕೋರ್ಟ್‌ ಆದೇಶ

ಕಾಸರಗೋಡು: ಅಡೂರು ಸರಕಾರಿ ಹೈಯರ್‌ ಸೆಕೆಂಡರಿ ಶಾಲೆಯ ಕನ್ನಡ ವಿಭಾಗಕ್ಕೆ ಮಲಯಾಳ ಶಿಕ್ಷಕಿ ನೇಮಕದ ವಿರುದ್ಧ ವಿದ್ಯಾರ್ಥಿಗಳು ಮತ್ತು ಪೋಷಕರು ನಡೆಸಿದ ಹೋರಾಟದ ಫಲವಾಗಿ ಕನ್ನಡ ಬಲ್ಲ ಶಿಕ್ಷಕಿಯನ್ನು ನೇಮಿಸಲು ಕೇರಳ ಹೈಕೋರ್ಟ್‌ ಆದೇಶ ನೀಡಿದೆ. ಈ ಮೂಲಕ ಹೋರಾಟಕ್ಕೆ ಮಹತ್ವದ ಜಯ ಲಭಿಸಿದೆ.

ಮಲಯಾಳಿ ಭಾಷೆಯ ಶಿಕ್ಷಕಿಗೆ ಕನ್ನಡದಲ್ಲಿ ವ್ಯವಹರಿಸಲು ತಿಳಿಯದು ಎಂಬುದನ್ನು ಮನಗಂಡಿರುವ ನ್ಯಾಯಾಲಯ, ಕೂಡಲೇ ಆ ಶಿಕ್ಷಕಿಯನ್ನು ಬೇರೆ ಶಾಲೆಗೆ ವರ್ಗಾಯಿಸಿ ತತ್‌ಕ್ಷಣವೇ ಅವರ ಸ್ಥಾನಕ್ಕೆ ಕನ್ನಡ ಬಲ್ಲ ಶಿಕ್ಷಕರನ್ನು ನೇಮಿಸುವಂತೆ ಸರಕಾರಕ್ಕೆ ನಿರ್ದೇಶನ ನೀಡಿದೆ. ನಿರಂತರವಾಗಿ ಕೇರಳ ಸರಕಾರ, ಶಿಕ್ಷಣ ಇಲಾಖೆ ಹಾಗೂ ಕೇರಳ ಲೋಕಸೇವಾ ಆಯೋಗ ಕನ್ನಡ ವಿರೋಧಿ ನೀತಿಯನ್ನು ಅನುಸರಿಸಿಕೊಂಡು ಬರುತ್ತಿದ್ದು, ಈ ತೀರ್ಪು ಚಾಟಿ ಬೀಸಿದಂತಾಗಿದೆ.

ಅಡೂರು ಶಾಲೆಗೆ ಮಲಯಾಳ ಶಿಕ್ಷಕಿಯನ್ನು ನೇಮಿಸಿದ ಪರಿಣಾಮವಾಗಿ ಸುಮಾರು ಎರಡು ತಿಂಗಳಿನಿಂದ ಕನ್ನಡ ವಿಭಾಗದ ವಿದ್ಯಾರ್ಥಿಗಳಿಗೆ ಸಮಾಜ ವಿಜ್ಞಾನ ಪಾಠವೇ ಇಲ್ಲ ಎಂಬಂತಾಗಿತ್ತು. ಈ ನೇಮಕವನ್ನು ವಿದ್ಯಾರ್ಥಿಗಳು, ಪೋಷಕರು ಪ್ರತಿಭಟಿಸಿದ್ದರಲ್ಲದೇ ಕೇರಳ ಹೈಕೋರ್ಟ್‌ ಮೆಟ್ಟಿಲೇರಿದ್ದರು. ಕೇರಳ ಹೈಕೋರ್ಟ್‌ ಅಡೂರು ಶಾಲೆಯಲ್ಲಿ ಕನ್ನಡ ಮಾಧ್ಯಮಕ್ಕೆ ಮಲಯಾಳ ಶಿಕ್ಷಕಿ ಪಾಠ ಮಾಡುವಂತಿಲ್ಲ ಎಂದು ತೀರ್ಪು ನೀಡಿದೆ. ಈ ಸ್ಥಾನಕ್ಕೆ ಕನ್ನಡ ಬಲ್ಲ ಶಿಕ್ಷಕರನ್ನು ನೇಮಿಸಬೇಕೆಂದು ಆದೇಶದಲ್ಲಿ ತಿಳಿಸಿದೆ. ಈ ತೀರ್ಪನ್ನು ಮಲಯಾಳ ಭಾಷಿಕ ಶಿಕ್ಷಕರು ನೇಮಕಗೊಂಡಿರುವ ಎಲ್ಲ ಕನ್ನಡ ಮಾಧ್ಯಮ ಶಾಲೆಗಳಿಗೆ ಅನ್ವಯಿಸುವಂತೆ ವಾದ ಮಂಡಿಸಿದೆ. ಈ ಬಗ್ಗೆ ತೀರ್ಪು ಬರಬೇಕಷ್ಟೆ ಎಂದು ಕೋರ್ಟ್‌ ಮೆಟ್ಟಿಲೇರಿದ್ದ ಅಡೂರು ಶಾಲಾ ಪೋಷಕರು ತಿಳಿಸಿದ್ದಾರೆ.

ಆದೇಶಕ್ಕೆ ಸಚಿವ ತಂಗಡಗಿ ಸಂತಸ
ಬೆಂಗಳೂರು : ಕಾಸರಗೋಡಿನ ಅಡೂರು ಕನ್ನಡ ಶಾಲೆಗೆ ಕನ್ನಡ ಭಾಷೆ ತಿಳಿದಿರುವ ಶಿಕ್ಷಕರನ್ನೇ ನೇಮಿಸುವಂತೆ ಕೇರಳ ಹೈಕೋರ್ಟ್‌ ಅಲ್ಲಿನ ಸರಕಾರಕ್ಕೆ ಆದೇಶ ನೀಡಿರುವುದಕ್ಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಈ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆ ಮೇಲಿನ ಜನಸಾಮಾನ್ಯರ ನಂಬಿಕೆ ಮತ್ತಷ್ಟು ಬಲಗೊಂಡಿದೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.