ಕೊಡಗು: ಭಾರೀ ಮಳೆ; ಹಲವೆಡೆ ಹಾನಿ


Team Udayavani, Jul 11, 2018, 2:28 PM IST

kodagu.png

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಬಿರುಸಿನಿಂದ ಸುರಿಯುತ್ತಿದ್ದು, ಹಲವೆಡೆ ಅನಾಹುತ ಸಂಭವಿಸಿದೆ.
ಜೋಡುಪಾಲ- ಕೊಯನಾಡು ರಸ್ತೆಯಲ್ಲಿ ಭಾರೀ ಗಾಳಿ, ಮಳೆಗೆ ಕಂಟೈನರ್‌ ಮೇಲೆ ಬಿದ್ದ ಬೃಹತ್‌ ಗಾತ್ರ ಮರವನ್ನು ತೆರವುಗೊಳಿಸುವ ಸಂದರ್ಭ ವಿದ್ಯುತ್‌ ಕಂಬವೊಂದು ಕೆಎಸ್‌ಆರ್‌ಟಿಸಿ ಬಸ್‌ ಮೇಲೆ ಬಿದ್ದಿದೆ. ತತ್‌ಕ್ಷಣ ಕಾರ್ಯ ಪ್ರವೃತ್ತವಾದ ಪ್ರಕೃತಿ ವಿಕೋಪ ತಂಡ ವಿದ್ಯುತ್‌ ಕಂಬ ಹಾಗೂ ಮರಗಳನ್ನು ತೆರವು ಗೊಳಿಸಿತು.

ಅದೃಷ್ಟವಶಾತ್‌ ಯಾರಿಗೂ ಅಪಾಯ ಸಂಭವಿಸಿಲ್ಲ. ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ನಾಲ್ಕು ತಾಸು ಕಾರ್ಯಾಚರಣೆಯ ಬಳಿಕ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಲಾಯಿತು.

ಭಾಗಮಂಡಲದಲ್ಲಿ  ಪ್ರವಾಹ
ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನದಿ ನೀರಿನ ಮಟ್ಟ ಏರಿಕೆಯಾಗುತ್ತಲೇ ಇದೆ. ಸಂಪರ್ಕ ರಸ್ತೆಗಳು ಜಲಾವೃತ ಗೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಗ್ನಿಶಾಮಕ ದಳ ಹಾಗೂ ರ್ಯಾಫ್ಟಿಂಗ್‌ ಸಿಬಂದಿ ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಸುತ್ತಮುತ್ತಲ ಗದ್ದೆಗಳಲ್ಲಿ ನೀರು ತುಂಬಿದ್ದು, ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಸ್ಥಳಕ್ಕೆ ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್‌ ಭೇಟಿ ನೀಡಿ ಸೂಕ್ತ ವ್ಯವಸ್ಥೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಡಿಕೇರಿಯಲ್ಲಿ  ಮಂಜು, ಚಳಿ
ಮಡಿಕೇರಿ ತಾಲೂಕಿನ ಗ್ರಾಮೀಣ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಬರೆ, ಮರಗಳು ಬಿದ್ದಿವೆ. ನಗರದಲ್ಲಿ ಕೂಡ ಎಡೆಬಿಡದೆ ಮಳೆಯಾಗುತ್ತಿದ್ದು, ದಟ್ಟ ಮಂಜು, ಗಾಳಿ, ಚಳಿಯ ವಾತಾವರಣ ಮುಂದುವರಿದಿದೆ. ಮಲ್ಲಿಕಾರ್ಜುನ ನಗರ ಸಹಿತ ವಿವಿಧ ಬಡಾವಣೆಗಳಲ್ಲಿ ಮನೆಯ ಗೋಡೆ ಹಾಗೂ ತಡೆಗೋಡೆಗಳು ಕುಸಿದು ಬಿದ್ದಿವೆ. ನಗರಸಭೆ ವತಿಯಿಂದ ತಾತ್ಕಾಲಿಕ ರಕ್ಷಣೆಗಾಗಿ ಪ್ಲಾಸ್ಟಿಕ್‌ ಶೀಟ್‌ಗಳನ್ನು ವಿತರಿಸಲಾಗಿದೆ.

ಎಸ್‌ಡಿಪಿಐ ನಗರಾಧ್ಯಕ್ಷ ಖಲೀಲ್‌ ನೇತೃತ್ವದಲ್ಲಿ ಕಾರ್ಯಕರ್ತರು ಶ್ರಮದಾನದ ಮೂಲಕ ಮನೆ ಹಾನಿಗೊಳ ಗಾದವರಿಗೆ ಸಹಾಯಹಸ್ತ ಚಾಚಿದರು.ಕೋಟೆ ಆವರಣ ಜಲಾವೃತ ಗೊಂಡಿದ್ದು, ಶ್ರೀ ಓಂಕಾರೇಶ್ವರ ದೇವಾಲಯದ ಆವರಣದ ಕೆರೆಯಲ್ಲಿ ನೀರಿನ ಮಟ್ಟ ಏರುತ್ತಿದೆ. ದೇವಾಲಯವನ್ನು ಪ್ರವೇಶಿಸಲು ಭಕ್ತರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ನಗರದ ರಸ್ತೆಗಳು ಸಂಪೂರ್ಣವಾಗಿ ಹದ ಗೆಟ್ಟಿದ್ದು, ನೀರು ತುಂಬಿರುವ ರಸ್ತೆಗಳಲ್ಲಿ ವಾಹನ ಸಂಚಾರ ದುಸ್ತರವಾಗಿದೆ.

ಸೋಮವಾರಪೇಟೆ ತಾಲೂಕಿನಲ್ಲಿ ಮಳೆ ತೀವ್ರವಾಗಿದ್ದು, ಹಾನಿ ಸಂಭವಿಸಿಲ್ಲ. ವಿರಾಜಪೇಟೆ ತಾಲೂಕಿನಲ್ಲಿ ಬೆಳಗ್ಗೆ ಮಳೆ ಬಿಡುವು ನೀಡಿತ್ತಾದರೂ ಸಂಜೆ ವೇಳೆ ಭಾರೀ ಮಳೆಯಾಗಿದೆ. ಜಿಲ್ಲೆಯಾದ್ಯಂತ ಸೋಮವಾರ ರಾತ್ರಿ ಪೂರ್ತಿ ಸುರಿದ ಮಳೆ ಇಂದು ಬೆಳಗ್ಗೆ ಕೂಡ ತೀವ್ರತೆಯನ್ನು ಪಡೆದುಕೊಂಡಿತ್ತು. ಶಾಲಾ ವಿದ್ಯಾರ್ಥಿಗಳು ಬಹಳ ಕಷ್ಟ ಪಟ್ಟುಕೊಂಡೇ ಶಾಲೆಗಳಿಗೆ ತೆರಳಿದ್ದು, ಜಿಲ್ಲಾಡಳಿತ ರಜೆ ನೀಡಬೇಕಾಗಿತ್ತು ಎನ್ನುವ ಅಭಿಪ್ರಾಯ ಪೋಷಕರಿಂದ ಕೇಳಿಬಂತು. ಸುಂಟಿಕೊಪ್ಪದಲ್ಲಿ ಶಾಲೆಯ ತಡೆಗೋಡೆ ಕುಸಿದು ಬಿದ್ದು, ಅಪಾಯದ ಸ್ಥಿತಿ ಎದುರಾದ ಘಟನೆಯೂ ನಡೆದಿದೆ.

24 ಗಂಟೆ ಕಟ್ಟೆಚ್ಚರ
ಜಿಲ್ಲಾಡಳಿತ ಮಳೆಯ ತೀವ್ರತೆಯ ಮೇಲೆ ನಿಗಾ ಇಟ್ಟಿದ್ದು, ಮೂರೂ ತಾಲೂಕಿನ ಕಂಟ್ರೋಲ್‌ ರೂಮ್‌ ಅಧಿಕಾರಿಗಳ ಉಪಸ್ಥಿತಿಯಲ್ಲಿ ದಿನದ 24 ಗಂಟೆಯೂ ಕಟ್ಟೆಚ್ಚರದಲ್ಲಿದೆ.

ಇಂದು ರಜೆ
ಭಾರೀ ಮಳೆಯ ಕಾರಣ ಜು. 11ರಂದು ಕೊಡಗು ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sulya

ಚಾರಿತ್ರಿಕ ಪರಂಪರೆಗಳ ಸಂರಕ್ಷಣೆಗಾಗಿ ಅಮರ ಸುಳ್ಯ ಹೆರಿಟೇಜ್ ಫೌಂಡೇಶನ್ (ರಿ.) ಕಾರ್ಯಾರಂಭ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

Virajpet: ಲಾರಿ – ಆ್ಯಂಬುಲೆನ್ಸ್‌ ನಡುವೆ ಢಿಕ್ಕಿ; ಓರ್ವನಿಗೆ ಗಾಯ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

ಅಂಬಲತ್ತರದಲ್ಲಿ ಪತ್ತೆಯಾದ ನೋಟುಗಳೆಲ್ಲವೂ ಖೋಟಾ ನೋಟು : ಕರ್ನಾಟಕದಲ್ಲಿ ಮುದ್ರಣ ಶಂಕೆ

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Manjeshwar ವಿದ್ಯುತ್‌ ಆಘಾತ: ಯುವಕ ಸಾವು

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

Kasaragod: ಬೋಟು ಅಪಘಾತ; ನಾಲ್ವರಿಗೆ ಗಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.