ಕುಂಬಳೆ ಪೇಟೆಯ ಟ್ರಾಫಿಕ್‌ ನಿಯಂತ್ರಣ ವ್ಯವಸ್ಥೆ ವಿಫಲ


Team Udayavani, Aug 3, 2017, 7:10 AM IST

KUMBLA.jpg

ಕುಂಬಳೆ: ಒಂದು ವಿಭಾಗದ ವ್ಯಾಪಾರಿಗಳು ಪ್ರತಿಭಟನೆಯೊಂದಿಗೆ ರಂಗಕ್ಕಿಳಿಯುವುದರೊಂದಿಗೆ ಮಂಗಳವಾರದಿಂದ ಕುಂಬಳೆ ಪೇಟೆಯಲ್ಲಿ  ಜಾರಿ ಗೊಳಿಸಲು ನಿರ್ಧರಿಸಿದ್ದ  ಟ್ರಾಫಿಕ್‌ ನಿಯಂತ್ರಣ ವ್ಯವಸ್ಥೆಯು ವಿಫಲಗೊಂಡಿದೆ.

ಸಾರಿಗೆ ಅಡಚಣೆಯನ್ನು ಹೊರತು ಪಡಿಸಲು ಪಂಚಾಯತ್‌ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು, ಮರ್ಚಂಟ್ಸ್‌ ಅಸೋಸಿಯೇಶನ್‌ ಅಲ್ಲದೆ ಪೊಲೀಸರು ಸೇರಿ ಕುಂಬಳೆ ಪೇಟೆಯಲ್ಲಿ  ಟ್ರಾಫಿಕ್‌ ನಿಯಂತ್ರಣ ವ್ಯವಸ್ಥೆಯನ್ನು ಕಾರ್ಯಗತಗೊಳಿಸಲು ನಿರ್ಧರಿಸಿದ್ದರು. ಅದರಂತೆ ಮಂಗಳವಾರ ಆಟೋರಿಕ್ಷಾ, ಬಸ್‌ಗಳನ್ನು  ಬದಿಯಡ್ಕ ರಸ್ತೆಯಲ್ಲಿರುವ ವ್ಯಾಪಾರ ಸಂಸ್ಥೆಗಳ ಮುಂದೆ ನಿಲ್ಲಿಸತೊಡಗಿದಾಗ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದರು.

ಈ ಸಂದರ್ಭ ಅಧಿಕಾರಿಗಳು ಮತ್ತು  ವ್ಯಾಪಾರಿಗಳ ಮಧ್ಯೆ ವಾಗ್ವಾದ ನಡೆಯಿತು. ಇದೇ ವೇಳೆ ಈ ಪ್ರದೇಶದ ವ್ಯಾಪಾರಿಗಳು ಅಂಗಡಿಗಳನ್ನು  ಮುಚ್ಚಿ  ಪ್ರತಿಭಟನೆಯಲ್ಲಿ  ತೊಡಗಿದರು. ವ್ಯಾಪಾರಿಗಳ ಸಮಸ್ಯೆ ಪರಿಗಣಿಸದೆ ಟ್ರಾಫಿಕ್‌ ವ್ಯವಸ್ಥೆಯನ್ನು  ಅನುಷ್ಠಾನಕ್ಕೆ ತರಲಾಗಿದೆಯೆಂದೂ ಏಕಪಕ್ಷೀಯವಾದ ಈ ತೀರ್ಮಾನವನ್ನು ಅಂಗೀಕರಿಸಲು ಸಾಧ್ಯವಿಲ್ಲವೆಂದು ಬದಿಯಡ್ಕ ರಸ್ತೆಯ ವ್ಯಾಪಾರಿಗಳು ತಿಳಿಸಿದ್ದಾರೆ.

ಟ್ರಾಫಿಕ್‌ ನಿಯಂತ್ರಣದ ಅಂಗವಾಗಿ ವಾಹನಗಳನ್ನು ನಿಲುಗಡೆಗೊಳಿಸಲು ಸಿದ್ಧಪಡಿಸಿದ ಸ್ಥಳದ ಕುರಿತು ಕೂಡ ಆರೋಪ ಹುಟ್ಟಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ  ರೈಲು ನಿಲ್ದಾಣದ ಸಮೀಪ ವಾಹನಗಳ ನಿಲುಗಡೆಗೆ ಸೌಕರ್ಯ ಏರ್ಪಡಿಸಲಾಗಿದೆ. ಆದರೆ ಇಲ್ಲಿ  ವಾಹನಗಳನ್ನು  ನಿಲ್ಲಿಸುವುದು ಅಪಘಾತಗಳಿಗೆ ಕಾರಣವಾಗಲಿದ್ದು, ಪೇಟೆಗೆ ಬರುವವರಿಗೆ ಅನನುಕೂಲವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದ್ದರಿಂದ  ಸಮರ್ಪಕ ವ್ಯವಸ್ಥೆ  ಅಳವಡಿಸದ ಟ್ರಾಫಿಕ್‌ ನಿಯಂತ್ರಣ ಯೋಜನೆಯು ಅಸ್ತವ್ಯಸ್ತಗೊಂಡಿದೆ.

ಟಾಪ್ ನ್ಯೂಸ್

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.