ಕುಂಬಳೆ: ಶಿರಿಯಾ ನದಿ ಸುತ್ತಾಡಿದ ಪುಟಾಣಿಗಳು


Team Udayavani, Mar 27, 2019, 6:30 AM IST

putanigalu

ಕುಂಬಳೆ: ನದಿಯ ಉಗಮ, ಹಾವಿನಂತೆ ಬಳುಕಿಕೊಂಡು ನದಿ ಸಾಗುವುದರ ಗುಟ್ಟು, ಬೇಸಗೆಯಲ್ಲಿ ಹೊಳೆಯ ಕೆಲವು ಕಡೆಗಳಲ್ಲಿ ಮಾತ್ರ ನೀರು ಸಂಗ್ರಹ ಗೊಂಡಿರುವ ಬಗ್ಗೆ, ನದಿಯನ್ನು ಆಶ್ರಯಿಸಿಕೊಂಡಿರುವ ಜೀವ ಜಾಲಗಳ ವೈಶಿಷ್ಟéಗಳು, ನದಿಗಳು ಎದುರಿಸುತ್ತಿರುವ ಸಮಸ್ಯೆಗಳು ಇವೇ ಮೊದಲಾದ ವಿಚಾರಗಳ ಕುರಿತು ಕುಂಬಳೆ ಹೋಲಿ ಫ್ಯಾಮಿಲಿ ಶಾಲೆಯ ಐದನೇ ತರಗತಿಯ ವಿದ್ಯಾರ್ಥಿಗಳು ಶಿರಿಯ ನದಿಯನ್ನು ಸುತ್ತಾಡಿ ಮಾಹಿತಿ ಸಂಗ್ರಹಿಸಿದರು.

ಅಲ್ಲದೆ ಬೆಜಪ್ಪೆ ಬೊಬ್ಬರ್ಯ ಹಾಗೂ ಕಾಜೂರು ಗಯ ಪ್ರದೇಶಗಳನ್ನು ಸಂದರ್ಶಿಸಿ ನದಿಯಲ್ಲಿ ನೀರಿನ ಮಟ್ಟದ ಬಗ್ಗೆ ಅರಿತುಕೊಂಡರು. ಇನ್ನು ಕೆಲವೇ ದಿನಗಳಲ್ಲಿ ಬತ್ತಿ ಹೋಗುವ ಆತಂಕದಲ್ಲಿರುವ ನದಿಯ ಶೋಚನೀಯ ಪರಿಸ್ಥಿತಿಯನ್ನು ಕಂಡು ಮರುಗಿದ ವಿದ್ಯಾರ್ಥಿಗಳು ಮರಳ ದಿಬ್ಬದ ಮೇಲೆ ಕುಳಿತು ನದಿ ಅನುಭವಿಸುವ ವಿವಿಧ ಸಮಸ್ಯೆಗಳನ್ನೂ ಚರ್ಚಿಸಿದರು.

ಈ ಸಂದರ್ಭದಲ್ಲಿ ಕುಂಬಳೆ ಗ್ರಾಮ ಪಂಚಾಯತ್‌ನ ಪ್ರಮುಖ ಭತ್ತದ ಗದ್ದೆಗಳಿರುವ ಕಾಜೂರು ಬಯಲನ್ನು ವೀಕ್ಷಿಸಿದರು.ಐದನೇ ತರಗತಿಯ ಸಮಾಜ ವಿಜ್ಞಾನ ಪಾಠವಾದ ಕೇರಳ ತೀರದಲ್ಲಿ ಎಂಬ ಅಧ್ಯಾಯದ ಮುಂದುವರಿದ ಚಟುವಟಿಕೆಯ ಭಾಗವಾಗಿ ಕಿದೂರಿನಲ್ಲಿ ಪರಿಸರ ಅಧ್ಯಯನ ಶಿಬಿರವನ್ನು ಮಕ್ಕಳಿಗಾಗಿ ಹಮ್ಮಿಕೊಳ್ಳಲಾಗಿತ್ತು.

ಮಂಗಳೂರು ವಿಶ್ವವಿದ್ಯಾನಿಲಯದ ಸಾಗರ ಅಧ್ಯಯನ ವಿದ್ಯಾರ್ಥಿಯೂ ಕಾಸರಗೋಡಿನ ಪ್ರಮುಖ ಪಕ್ಷಿ ನಿರೀಕ್ಷಕರೂ ಆಗಿರುವ ಮ್ಯಾಕ್ಸಿಂ ರೋಡ್ರಿಗಸ್‌ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

ಅಧ್ಯಾಪಕ ರಾಜು ಕಿದೂರು, ಪ್ರದೀಪ್‌ ಕಿದೂರು, ಗ್ಲೆನ್‌ ಕಿದೂರು ಹಾಗೂ ಸ್ಥಳೀಯ ಎಸ್‌.ಕೆ.ಪಿ.ಫ್ರೆಂಡ್ಸ್‌ ಸದಸ್ಯರು ಸಹಕರಿಸಿದರು.

ಹಿರಿಯರಿಂದ ಅನುಭವ
ಕಿದೂರು ಪಕ್ಷಿಧಾಮದಲ್ಲಿ ಪಕ್ಷಿ ನಿರೀಕ್ಷಣೆ ಮಾಡಿದ ಪುಟಾಣಿಗಳು ಉರಿ ಬಿಸಿಲಲ್ಲೂ ಬಾನಾಡಿಗಳ ದಾಹ ನೀಗಿಸುವ, ನಾಗರಿಕರೇ ಸಂರಕ್ಷಿಸಿಕೊಂಡು ಬರುವ ಪುರಾತನ ಕಾಜೂರು ಪಳ್ಳದ ಕುರಿತಾಗಿ ಹಿರಿಯರಿಂದ ಅನುಭವಗಳನ್ನು ಪಡೆದುಕೊಂಡರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.