ಅವಿರೋಧ ಆಯ್ಕೆಗೆ ಒಲವು : ಬಾಕಿ ಅನುದಾನ ಬರುವ ನಿರೀಕ್ಷೆ


Team Udayavani, Aug 25, 2019, 5:30 AM IST

anudana

ಮಡಿಕೇರಿ: ಯಾವುದೇ ಗೊಂದಲ ಅಥವಾ ಚುನಾವಣೆಗಳಿಗೆ ಅವಕಾಶ ನೀಡದೆ ಅರ್ಹರನ್ನು ಮಡಿಕೇರಿ ದಸರಾ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕು. ಈ ಬಾರಿ ದಸರಾ ಸಮಿತಿಯ ಅಧ್ಯಕ್ಷರು ಜಿಲ್ಲಾಧಿಕಾರಿಗಳೇ ಆಗಿರುವುದರಿಂದ ಕಾರ್ಯಾಧ್ಯಕ್ಷರು ಹಾಗೂ ಜಂಟಿ ಕಾರ್ಯದರ್ಶಿಗಳ ಮೇಲೆ ಹೆಚ್ಚಿನ ಜವಬ್ದಾರಿ ಇರುತ್ತದೆ. ಆದ್ದರಿಂದ ಹಿರಿಯರು ಮತ್ತು ಅನುಭವಿಗಳ ಮಾರ್ಗದರ್ಶನದಲ್ಲಿ ಒಗ್ಗೂಡಿ ಅವಿರೋಧವಾಗಿ ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕೆಂದು ಮಡಿಕೇರಿ ನಗರ ದಸರಾ ದಶಮಂಟಪ ಸಮಿತಿಯ ಪ್ರಥಮ ಸಭೆಯಲ್ಲಿ ನಿರ್ಧರಿಸಲಾಗಿದೆ.

ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಸಮಿತಿಯ ಅಧ್ಯಕ್ಷ ಸಿ.ಎಸ್‌.ರಂಜಿತ್‌ ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಾರ್ಯಾಧ್ಯಕ್ಷ, ಉಪಾಧ್ಯಕ್ಷ ಹಾಗೂ ಜಂಟಿ ಕಾರ್ಯದರ್ಶಿಗಳ ಸ್ಥಾನಕ್ಕೆ ಹಲವು ಹೆಸರುಗಳು ಕೇಳಿ ಬಂದವಾದರೂ ಆ.27 ರಂದು ಮತ್ತೂಂದು ಸಭೆ ನಡೆಸಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ನಿರ್ಣಯ ಕೈಗೊಳ್ಳಲಾಯಿತು.

ನಗರಸಭೆ ಮಾಜಿ ಉಪಾಧ್ಯಕ್ಷ ಟಿ.ಎಸ್‌.ಪ್ರಕಾಶ್‌ ಮಾತನಾಡಿ, ಈ ಭಾರಿ ರಾಜ್ಯದ ವಿವಿಧೆಡೆ ಜಲಪ್ರವಾಹ ಉಂಟಾಗಿದೆ. ನಾವು ಸರಕಾರದಿಂದ ದೊಡ್ಡ ಮಟ್ಟದ ಅನುದಾನವನ್ನು ನಿರೀಕ್ಷೆ ಮಾಡುವುದು ಕೂಡ ತಪ್ಪಾಗುತ್ತದೆ ಎಂದರು.

ಪ್ರಮುಖರಾದ ರಾಬಿನ್‌ ದೇವಯ್ಯ ಮಾತನಾಡಿ, ನೂತನ ಸರಕಾರ ರಚನೆಯಾಗಿ ಕೆಲವು ದಿನಗಳು ಮಾತ್ರ ಕಳೆದಿದೆ. ಇನ್ನೂ ಕೂಡ ಜಿಲ್ಲೆಗೆ ಉಸ್ತುವಾರಿ ಸಚಿವರ ನೇಮಕವಾಗಿಲ್ಲ. ಬೆರಳೆಣಿಕೆಯ ದಿನಗಳಲ್ಲಿ ದಸರಾ ಬಗ್ಗೆ ಸೂಕ್ತ ತೀರ್ಮಾನವನ್ನು ಕೈಗೊಳ್ಳಬೇಕಿದೆ ಎಂದರು. ನಗರಸಭಾ ಮಾಜಿ ಸದಸ್ಯ ಕೆ.ಎಸ್‌.ರಮೇಶ್‌ ಮಾತನಾಡಿ, ಕಳೆದ ಬಾರಿಯ ದಸರಾ ಅನುದಾನ ಬಾರದ ಹಿನ್ನೆಲೆಯಲ್ಲಿ ಸಾಲಗಾರರಾಗುವ ಸ್ಥಿತಿ ಬಂದಿದೆ. ಸರಕಾರ ನೀಡುವ ಅನುದಾನವನ್ನು ಆಧರಿಸಿ ದಸರಾ ಆಚರಿಸುವ ಅನಿವಾರ್ಯ ಬಂದೊದಗಿದೆ ಎಂದರು. ಸಮಿತಿಯ ಕಾರ್ಯದರ್ಶಿ ಎಂ.ಎಲ್.ಸತೀಶ್‌, ಉಪಾಧ್ಯಕ್ಷ ಎಂ.ರತಿಕೇಶನ್‌, ಪ್ರಮುಖರಾದ ಸುಬ್ರ ಮಣಿ, ಶಿವರಾಂ, ಅನಿತಾ ಪೂವಯ್ಯ, ರವಿ ಕುಮಾರ್‌, ನಾಗರಾಜ್‌, ದೇವಾಲಯ ಸಮಿತಿಗಳ ಪದಾಧಿಕಾರಿಗಳು ಸಲಹೆ ಸೂಚನೆ ನೀಡಿದರು.

ಹಣ ಬರುವ ವಿಶ್ವಾಸ ಹಾಲಿ ದಸರಾ ಸಮಿತಿಯ ಅಧ್ಯಕ್ಷ ಮಹೇಶ್‌ ಜೈನಿ ಮಾತನಾಡಿ, ಕಳೆದ ವರ್ಷ ಕೊಡಗಿನಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದ ಸರಳವಾಗಿ ದಸರಾವನ್ನು ಆಚರಿಸಲಾಯಿತು. ಆದರೆ ಇಂದಿನವರೆಗೂ ಕಳೆದ ಬಾರಿಯ ಹಣವೇ ಬಿಡುಗಡೆಯಾಗಿಲ್ಲ. ಈ ಬಗ್ಗೆ ಈಗಾಗಲೇ ಚರ್ಚೆ ನಡೆದಿದ್ದು, ಮುಂದಿನ ಒಂದು ವಾರದೊಳಗೆ ಹಣ ಬರುವ ವಿಶ್ವಾಸವಿದೆ ಎಂದರು.

ದಶಮಂಟಪ ಸಮಿತಿಯ ಅಧ್ಯಕ್ಷ ಸಿ.ಎಸ್‌.ರಂಜಿತ್‌ ಕುಮಾರ್‌ ಮಾತನಾಡಿ, ದಸರಾಗೆ ಕೆಲವೇ ದಿನಗಳು ಉಳಿದಿದೆ. ಒಕ್ಕೊರಲಿನಿಂದ ಆಯ್ಕೆಪ್ರಕ್ರಿಯೆ ನಡೆದು ದಸರಾ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಬೇಕಾಗಿದೆ ಎಂದು ಸಭೆಯ ಗಮನ ಸೆಳೆದರು.

ಕಾವೇರಿ ಕಲಾಕ್ಷೇತ್ರದಲ್ಲಿ ಸಮಿತಿಯ ಅಧ್ಯಕ್ಷ ಸಿ.ಎಸ್‌.ರಂಜಿತ್‌ ಕುಮಾರ್‌ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಟಾಪ್ ನ್ಯೂಸ್

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.